ಶಿವಮೊಗ್ಗ | ಎಸ್‌ಪಿ ನೇತೃತ್ವದಲ್ಲಿ ಅಪರಾಧ ವಿಮರ್ಶನಾ ಸಭೆ

Date:

ಶಿವಮೊಗ್ಗ ಜಿಲ್ಲೆಯ ಎಲ್ಲ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು ಹಾಗೂ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳಿಗೆ ಅಪರಾಧ ವಿಮರ್ಶನಾ ಸಭೆ ನಡೆಸಿ, ಸಭೆಯಲ್ಲಿ ಹಾಜರಿದ್ದ ಪೊಲೀಸ್ ಅಧಿಕಾರಿಗಳಿಗೆ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ ಕೆ ಕೆಲವು ಸೂಚನೆಗಳನ್ನು ನೀಡಿದರು.

“ತನಿಖೆಯಲ್ಲಿರುವ ಪ್ರಕರಣಗಳ ವಿಮರ್ಶೆ ನಡೆಸಿ ಸೂಕ್ತ ಕಾಲಮಿತಿಯೊಳಗೆ ತನಿಖೆ ಪೂರೈಸಿ, ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಬೇಕು. ಠಾಣಾ ವ್ಯಾಪ್ತಿಯಲ್ಲಿ ವರದಿಯಾಗುವ ಅಪಘಾತ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ, ಮುಂಜಾಗೃತ ಕ್ರಮವಾಗಿ ಸಂಚಾರ ನಿಯಮ ಉಲ್ಲಂಘನಾ ಪ್ರಕರಣ ದಾಖಲಿಸುವಂತೆ ಹಾಗೂ ಸಂಚಾರ ಸೂಚನಾ ಫಲಕಗಳು, ರಂಬಲ್ ಸ್ಟ್ರಿಪ್ಸ್, ಕ್ಯಾಟ್ ಐಸ್, ರೋಡ್ ಹಂಪ್ಸ್‌ಗಳನ್ನು ಅಳವಡಿಸುವ ಮೂಲಕ ಅಪಘಾತ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು” ಎಂದು ಸೂಚಿಸಿದರು.

“ಠಾಣಾ ವ್ಯಾಪ್ತಿಯಲ್ಲಿ ಗುಪ್ತಮಾಹಿತಿ ವ್ಯವಸ್ಥೆಯನ್ನು ಬಲಪಡಿಸಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ, ಮುಂಗಡವಾಗಿ ಮಾಹಿತಿ ಸಂಗ್ರಹಿಸಿ, ಮೇಲಧಿಕಾರಿಗಳಿಗೆ ನೀಡಬೇಕು. ಸಂಬಂಧಪಟ್ಟ ಪೊಲೀಸ್ ನಿರೀಕ್ಷಕರು ಹಾಗೂ ಪೊಲೀಸ್ ಉಪನಿರೀಕ್ಷಕರು ಮೇಲ್ವಿಚಾರಣೆ ವಹಿಸಬೇಕು” ಎಂದು ನಿರ್ದೇಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತೀರ್ಥಹಳ್ಳಿ | ನದಿಯಲ್ಲಿ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ

“ಸಂಘಟಿತ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಠಾಣಾ ವ್ಯಾಪ್ತಿಯಲ್ಲಿ ತಳಮಟ್ಟದ ಮಾಹಿತಿ ಕಲೆಹಾಕಿ ದಾಳಿ ನಡೆಸಿ ಹೆಚ್ಚಿನ ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಬೇಕು. ಪೊಲೀಸ್ ಉಪವಿಭಾಗಾಧಿಕಾರಿಗಳು ತಮ್ಮ ಅಧೀನ ಪೊಲೀಸ್ ಠಾಣೆಗಳ ಆವರಣದಲ್ಲಿರುವ ವಾರಸುದಾರರು ಸುಪರ್ದಿಗೆ ಪಡೆಯದೇ ಇರುವ, ತನಿಖೆಯಲ್ಲಿರುವ ಪ್ರಕರಣಗಳಲ್ಲಿ ಭಾಗಿಯಾಗಿರುವ ಮತ್ತು ಘನನ್ಯಾಯಾಲಯದ ವಿಚಾರಣೆಯಲ್ಲಿರುವ ಪ್ರಕರಣಗಳಲ್ಲಿನ ವಾಹನಗಳನ್ನು ವಿಂಗಡಿಸಿ, ವಿಲೇವಾರಿ ಮಾಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಸೂಚಿಸಿದರು.

ಈ ಸಭೆಯಲ್ಲಿ ಅಡಿಷನಲ್ ಎಸ್‌ಪಿ ಅನಿಲ್ ಕುಮಾರ್ ಭೂಮರಡ್ಡಿ ಮತ್ತು ಪೊಲೀಸ್ ಉಪಾಧೀಕ್ಷಕ ಎ ಜಿ ಕಾರ್ಯಪ್ಪ, ಡಿಎಆರ್ ಕೃಷ್ಣಮೂರ್ತಿ ಟಿ ಪಿ ಸೇರಿದಂತೆ ಎಲ್ಲ ಪೊಲೀಸ್‌ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...