ಶಿವಮೊಗ್ಗ | ಸಾಂಸ್ಕೃತಿಕ ಅವನತಿಯು ಯುವ ಪೀಳಿಗೆಯನ್ನು ವಿಕೃತಗೊಳಿಸುತ್ತಿದೆ: ಸುಬ್ಬರಾಜು

Date:

ಸಮಾಜದಲ್ಲಿ ವಿದ್ಯಾರ್ಥಿಗಳು, ಮಹಿಳೆಯರು ಎನ್ನದೆ ಸಾಮಾನ್ಯ ಜನರ ಮೇಲೆ ನಡೆಯುತ್ತಿರುವ ಹಲ್ಲೆ, ಕಿರುಕುಳಗಳ ಮೇಲೆ ಸಮೂಹ ಮಾಧ್ಯಮ ಸಾಕಷ್ಟು ಪ್ರಭಾವ ಬೀರಿದೆ. ಇಂದಿನ ಸಾಂಸ್ಕೃತಿಕ ಅವನತಿಯು ಯುವ ಪೀಳಿಗೆಯ ಮನಸ್ಥಿತಿಯನ್ನು ವಿಕೃತಗೊಳಿಸುತ್ತಿದೆ ಎಂದು ಸೆಂಟರ್ ಫಾರ್ ಪ್ರೊಟೆಕ್ಟಿಂಗ್ ಡೆಮಾಕ್ರೆಟಿಕ್ ರೈಟ್ಸ್ ಅಂಡ್ ಸೆಕ್ಯುಲರಿಸಂ (ಸಿಪಿಡಿಆರ್‌ಎಸ್)ನ ಶಿವಮೊಗ್ಗ ಜಿಲ್ಲಾ ಸಂಚಾಲಕ ಸುಬ್ಬರಾಜು ಕಳವಳ ವ್ಯಕ್ತಪಡಿಸಿದರು.

ನವುಲೆ ಗ್ರಾಮದಲ್ಲಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ (ಎಐಎಸ್‌ಇಸಿ) ವತಿಯಿಂದ ನ್ಯಾಷನಲ್ ಗರ್ಲ್ಸ್ ಹೈಸ್ಕೂಲ್ ಹಮ್ಮಿಕೊಂಡಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 128ನೇ ಜನ್ಮ ದಿನಾಚರಣೆಯಲ್ಲಿ ಮಾತನಾಡಿದ ಅವರು, “ಪ್ರಸ್ತುತ ಸಮಾಜ ಆಧುನಿಕತೆ ಹೆಸರಿನಲ್ಲಿ ಅವನತಿಯತ್ತ ಸಾಗುತ್ತಿದೆ. ಸಮೂಹ ಮಾಧ್ಯಮಗಳು ಒಳಿತನ್ನು ಮಾಡುವುದಕ್ಕಿಂತ ಹೆಚ್ಚಾಗಿ ಯುವ ಜನತೆಯ ಮೇಲೆ ಕೆಡುಕಿನ ಪ್ರಭಾವವನ್ನೇ ಬೀರುತ್ತಿವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮೊಬೈಲ್ ಫೋನ್ ಅಪ್ಲಿಕೇಶನ್ ಮತ್ತು ಚಾಟ್ ಮಾಡುವುದರಿಂದ ಸಾಧ್ಯವಾದಷ್ಟು ದೂರವಿರಿ” ಎಂದು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.

“ನೇತಾಜಿ ಅಂದು ಬ್ರಿಟಿಷರನ್ನ ಭಾರತದಿಂದ ಹೊರಹಕಾಲು ನಿರಂತರ ಹೋರಾಟ ಮಾಡುವ ಮೂಲಕ ಸಂಘಟನೆ ಕಟ್ಟಿದ್ದರು. ಅವರ ಹೋರಾಟದ ಸ್ಫೂರ್ತಿಯನ್ನು ಮೈಗೂಡಿಸಿಕೊಂಡು, ನಿರುದ್ಯೋಗ, ಬೆಲೆ ಏರಿಕೆ, ಬಡತನ, ದುಬಾರಿ ಶಿಕ್ಷಣ, ಸಮಯಕ್ಕೆ ಸರಿಯಾಗಿ ಸಿಗದ ಚಿಕಿತ್ಸೆಗಳ ವಿರುದ್ಧ ಒಗ್ಗಟಿನಿಂದ ಹೋರಾಟ ಮಾಡಬೇಕು” ಎಂದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001189846

“ಎಐಎಸ್‌ಇಸಿಯ ರಾಜ್ಯ ಸೆಕ್ರೆಟರಿಯೇಟ್ ಮೆಂಬರ್ ನಾಗರತ್ನ ಎಸ್ ಜಿ ಮಾತನಾಡಿ, “ದೇಶಕ್ಕೆ ಸ್ವತಂತ್ರ ಬಂದು ಇಷ್ಟು ವರ್ಷಗಳು ಕಳೆದರೂ ಮಹಿಳೆಯರ, ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಶೋಷಣೆಗೆ ಮುಕ್ತಿ ಸಿಕ್ಕಿಲ್ಲ. ಇದಕ್ಕೆ ಮುಖ್ಯ ಕಾರಣ ಮಾಧ್ಯಮಗಳಲ್ಲಿ ಅಶ್ಲೀಲ, ಕೀಳು ಮಟ್ಟದ ಸಿನಿಮಾ ಮತ್ತು ಕಾರ್ಯಕ್ರಮಗಳು ವ್ಯಾಪಕವಾಗಿ ಪ್ರಸಾರವಾಗುತ್ತಿರುವುದೇ ಆಗಿದೆ. ಇದರಿಂದ ಸಮಾಜದಲ್ಲಿ ಕೀಳು ಸಂಸ್ಕೃತಿ ಹರಡಲು ಸರ್ಕಾರವೇ ಹೊಣೆಯಾಗಿದೆ. ಪರ್ಯಾಯವಾಗಿ ಒಳ್ಳೆಯ ವಿಚಾರ ಪ್ರಸ್ತುತ ಪಡಿಸುವ ಕಾರ್ಯಕ್ರಮಗಳನ್ನು ಮಾಡಿ ಅರಿವು ಮೂಡಿಸುವ ಕೆಲಸ ಮಾಡಬೇಕಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಕನ್ನಡಪರ ಹೋರಾಟಗಾರರ ವಿರುದ್ಧದ ಎಫ್‌ಐಆರ್‌ ವಾಪಸ್; ಮುಖ್ಯಮಂತ್ರಿಗೆ ಕರವೇ ಧನ್ಯವಾದ

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕಿ ಗಿರಿಜಾ, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...