ಶಿವಮೊಗ್ಗ | ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳ ದರ್ಪ; ಸಾರ್ವಜನಿಕರ ಆಕ್ರೋಶ

Date:

ನಿಗದಿತ ನಿಲ್ದಾಣಗಳಲ್ಲಿ ಬಸ್‌ ನಿಲ್ಲಿಸದೆ, ಕೇಳಿದ ಸ್ಥಳಕ್ಕೆ ಟಿಕೆಟ್‌ ನೀಡದೆ ಸಾರ್ವಜನಿಕರ ಮೇಲೆ ಕೆಎಸ್‌ಆರ್‌ಟಿಸಿ ಬಸ್‌‌ (ಸಂಖ್ಯೆ: ಕೆಎ-42 ಎಫ್-2005) ಚಾಲಕ ಹಾಗೂ ನಿರ್ವಾಹಕರು ದರ್ಪ ತೋರಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.

ಪ್ರಯಾಣಿಕರೊಬ್ಬರಿಗೆ ಭದ್ರಾವತಿ ಬದಲು ಹಾಲಿನ ಡೈರಿ ಸ್ಟಾಪ್‌ಗೆ ಟಿಕೆಟ್ ನೀಡಿದ್ದಾರೆ. ʼಎಲ್ಲಿಗೋ ಟಿಕೆಟ್ ಕೇಳಿದರೆ ಇನ್ನೆಲ್ಲಿಗೋ ಟಿಕೆಟ್ ನೀಡುತ್ತೀರಿ, ಚೆಕಿಂಗ್ ಬಂದರೆ ನಾನು ದಂಡ ಕಟ್ಟಬೇಕು ಪ್ರಯಾಣಿಕ ಸಿಟ್ಟಾದಾಗ, ನೀನು ಡೈರಿ ಬಂದಾಗ ಪುನಃ ಭದ್ರಾವತಿಗೆ ಟಿಕೆಟ್ ತಗೊ ಎಂದು ಕಂಡಕ್ಟರ್ ಉಡಾಫೆಯಾಗಿ ಮಾತನಾಡಿದ್ದಾರೆ. ಇದರಿಂದ ಪ್ರಯಾಣಿಕ ಹಾಗೂ ಕಂಡಕ್ಟರ್ ನಡುವೆ ವಾಗ್ವಾದ ನಡೆದಿದೆ.

ಅದೇ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಈದಿನ ಮಾಧ್ಯಮ ಪ್ರತಿನಿಧಿ ‘ಅವಾಗಿನಿಂದಲೂ ಯಾಕೆ ಹೀಗೆ ಪ್ರಯಾಣಿಕರಿಗೆ ತೊಂದರೆ ಮಾಡ್ತಿದ್ದೀರಿʼ ಎಂದು ಪ್ರಶ್ನೆ ಮಾಡಿದ್ದಕ್ಕೆ ಕುಪಿತಗೊಂಡ ಬಸ್ ನಿರ್ವಾಹಕ‌, ನೀನು ಯಾವ ಸ್ಟಾಪ್, ಎಲ್ಲಿ ಇಳಿಬೇಕು ಅಲ್ಲಿ ಇಳಿ, ಬೇರೆ ಅವರ ಉಸಾಬರಿ ನಿನಗೆ ಏನಕ್ಕೆ? ನೀನು ಯಾವನು ಕೇಳುವುದಕ್ಕೆ, ಅವರ ಅವರ ಹಣೆಬರಹ ನಡೆದುಕೊಂಡು ಹೋಗುತ್ತಾರೆ ಅವರಿಗೆ ನಡೆಯೋ ಶಕ್ತಿ ಇದೆ. ನನ್ನ ಕೆಲಸ ಮಾಡೋದ್ ನನಗೆ ಗೊತ್ತಿದೆ. ಅನವಶ್ಯಕ ಮಾತಾಡಬೇಡ ಎಂದೆಲ್ಲಾ ನಿಂದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾತ್ರಿ ಸಮಯದಲ್ಲಿ ಮಹಿಳೆಯರು, ಮಕ್ಕಳು, ವಿದ್ಯಾರ್ಥಿನಿಯರು, ವಯಸ್ಸಾದವರು ಬಸ್‌ಗಳಿಗಾಗಿ ನಿಗದಿತ ಸ್ಟಾಪ್‌ಗಳಲ್ಲಿ ಕಾಯುತ್ತಿರುತ್ತಾರೆ. ಆದರೆ ಈ ಕೆಎಸ್‌ಆರ್‌ಟಿಸಿ ಬಸ್‌ಗಳು ನಿಲ್ಲಿಸುವುದೇ ಇಲ್ಲ. ಬೆಳಗ್ಗೆ ಸಮಯದಲ್ಲೂ ಹೀಗೇ ಮಾಡುತ್ತಾರೆ. ಒಂದು ಸ್ಥಳಕ್ಕೆ ಟಿಕೆಟ್‌ ಕೇಳಿದರೆ ಇನ್ಯಾವುದೋ ಸ್ಟಾಪಿಗೆ ಟಿಕೆಟ್‌ ಕೊಡುತ್ತಾರೆ. ಪ್ರಶ್ನಿಸಿದರೆ ಬಾಯಿಗೆ ಬಂದದ್ದು ಮಾತನಾಡುತ್ತಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಮದುವೆಯಾಗುವುದಾಗಿ ನಂಬಿಸಿ ವಂಚನೆ; ಮಹಿಳೆಯಿಂದ ₹7 ಲಕ್ಷ ಪೀಕಿಸಿದ ಖದೀಮ

ಶಿವಮೊಗ್ಗ ಕೆಎಸ್‌ಆರ್‌ಟಿಸಿಯ ಆಡಳಿತ ಅಧಿಕಾರಿ (ಎಂಡಿ) ಇಂತಹ ಚಾಲಕ, ನಿರ್ವಹಕರ ಮೇಲೆ ಏನು ಕ್ರಮ ತೆಗೆದುಕೊಳ್ಳುತ್ತಾರೆ, ಹಾಗೂ ಸಾಕಷ್ಟು ಬಸ್‌ ನಿಯೋಜಿಸಿ ಪ್ರಯಾಣಿಕರ ಅನುಕೂಲ ಮಾಡುವಲ್ಲಿ ಮುಂದಿನ ದಿನಗಳಲ್ಲಿ ಏನು ಪರ್ಯಾಯ ವ್ಯವಸ್ಥೆ ಮಾಡುತ್ತಾರೆ ಎಂದು ಕಾದು ನೋಡಬೇಕಿದೆ.

WhatsApp Image 2025 11 17 at 5.17.05 PM
ರಾಘವೇಂದ್ರ, ಶಿವಮೊಗ್ಗ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...