ಶಿವಮೊಗ್ಗ | ಶಾಸಕ ರಮೇಶ್ ಬಂಡಿಸಿದ್ದೇಗೌಡ ವಜಾಗೊಳಿಸಲು ಆಗ್ರಹಿಸಿ SDPI ಪ್ರತಿಭಟನೆ

Date:

ಶಿವಮೊಗ್ಗ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಶಿವಮೊಗ್ಗ ಜಿಲ್ಲಾ ಸಮಿತಿ ವತಿಯಿಂದ, ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನೆಯನ್ನ ಉದ್ದೇಶಿಸಿ ಮಾತನಾಡಿದ, ಜಿಲ್ಲಾ ಅಧ್ಯಕ್ಷರಾದ ಜಿಲಾನ್ ಖಾನ್ ಶ್ರೀರಂಗಪಟ್ಟಣದ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಮುಸ್ಲಿಮರಿಗೆ ಸರ್ಕಾರಿ ಜಮೀನು ಮಂಜೂರು ಮಾಡಿದರೆ ಅಧಿಕಾರಿಗಳನ್ನು ನೇಣಿಗೆ ಹಾಕುತ್ತೇನೆ ಎಂದು ಬೆದರಿಕೆ ಹಾಕುವ ಮೂಲಕ ತನ್ನೊಳಗಿನ ಮುಸ್ಲಿಂ ದ್ವೇಷ ಹೊರ ಹಾಕಿದ್ದರು, ಮುಸ್ಲಿಮರ ಮತ ಪಡೆದು ಆಯ್ಕೆಯಾದ ರಾಜ್ಯದ ಕಾಂಗ್ರೆಸ್ ನಾಯಕರ ಮುಸ್ಲಿಂ ದ್ವೇಷವು ಸಂಘ ಪರಿವಾರದ ನಾಯಕರ ಮುಸ್ಲಿಂ ದ್ವೇಷವನ್ನು ಓವರ್ ಟೇಕ್ ಮಾಡಲು ಪೈಪೋಟಿ ನಡೆಸಿದಂತಿದೆ. ಆದ್ದರಿಂದ ಈ ಆರೆಸ್ಸೆಸ್ ಮನಸ್ಥಿತಿಯ ಶಾಸಕರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಆಗ್ರಹಿಸಿದರು.

1001803534

ಅದೇ ರೀತಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಜಿಲ್ಲಾ ಉಪಾಧ್ಯಕ್ಷ ಸಲೀಂ ಖಾನ್ ಮಾತನಾಡಿ, ಇತ್ತೀಚಿಗೆ ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾಂಗ್ರೆಸ್ ಒಳಗಿನ ಆರ್ ಎಸ್ ಎಸ್ ಮನಸ್ಥಿತಿಯನ್ನು ಹೊರಗಟ್ಟಬೇಕು ಎಂದು ಹೇಳಿಕೆ ನೀಡಿ ಕಾಂಗ್ರೆಸ್ ಪಕ್ಷದೊಳಗೆ ಆರ್ ಎಸ್ ಎಸ್ ನವರು ಇದ್ದಾರೆ ಎಂದು ಬಹಿರಂಗವಾಗಿ ಒಪ್ಪಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ ರಮೇಶ್ ಬಂಡಿಸಿದ್ದೇಗೌಡ ತಮ್ಮಲ್ಲಿನ ಮುಸ್ಲಿಂ ದ್ವೇಷವನ್ನು ಹೊರ ಹಾಕಿದ್ದಾರೆ. ಹಾಗೆ ಜಾತ್ಯಾತೀತ ಎಂಬ ಕಾಂಗ್ರೆಸ್, ಈ ಕೋಮು ದ್ವೇಷಿ ಶಾಸಕನನ್ನು ವಜಾಗೊಳಿಸಬೇಕು, ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟದ ಎಚ್ಚರಿಕೆ ನೀಡಿದರು.

ಕಳೆದ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯ ಸಮೇತ ಇಲ್ಲಿನ ಜಾತ್ಯಾತೀತ ವರ್ಗಗಳು, ಬಿಜೆಪಿ ಸರ್ಕಾರದ ಅವಧಿಯಲ್ಲಿನ ಕೋಮು ಧ್ವೇಷದಿಂದ ಬೇಸತ್ತು ರಾಜ್ಯದಲ್ಲಿ ಕಾಂಗ್ರೆಸ್ಗೆ ಬಹುಮತ ನೀಡುವ ಮೂಲಕ ಅಧಿಕಾರಕ್ಕೆ ತಂದರು, ಆದರೆ ಚುನಾವಣಾ ಸಂದರ್ಭದಲ್ಲಿ ಹಲವಾರು ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದ ರಾಜ್ಯ ಕಾಂಗ್ರೆಸ್ ನಾಯಕರ ಮುಸ್ಲಿಂ ದ್ವೇಷಿ ಮಾತುಗಳು ಬಿಜೆಪಿಯನ್ನೇ ನಾಚಿಸುವಂತಿದೆ. ಆದ್ದರಿಂದ ಮುಂಬರುವ ಚುನಾವಣೆಗಳಲ್ಲಿ ಮುಸ್ಲಿಂ ಸಮುದಾಯ ಜಾತ್ಯಾತೀತ ಲೇಬಲ್ ನ ಕಾಂಗ್ರೆಸ್ ನಾಯಕರ ಮಾತುಗಳಿಗೆ ಮರುಳಾಗದೆ, ಪರ್ಯಾಯ ರಾಜಕೀಯ ಶಕ್ತಿಯಾದ SDPI ಬೆಂಬಲಿಸಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಜೀಲಾನ್ ಖಾನ್, ಜಿಲ್ಲಾ ಉಪಾಧ್ಯಕ್ಷರಾದ ಸಲೀಂ ಖಾನ್,ಜಿಲ್ಲಾ ಸಮಿತಿ ಸದಸ್ಯರಾದ ಮನ್ಸೂರ್ ಖಾನ್, ಇಸಾಕ್ ಅಹ್ಮದ್, ಅಬ್ದುಲ್ ರಹೀಮ್, ಮತ್ತು ಇತರರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...