ಶಿವಮೊಗ್ಗ | ಗ್ಯಾರಂಟಿ ಯೋಜನೆಗಳ ಬಗೆಗಿನ ತಪ್ಪು ಸಂದೇಶಗಳಿಗೆ ಕಿವಿಕೊಡಬೇಡಿ; ಗೀತಾ ಶಿವರಾಜಕುಮಾರ್

Date:

ಗ್ಯಾರಂಟಿ ಯೋಜನೆಗಳಿಂದ ಜನರು ದಾರಿ ತಪ್ಪುತ್ತಿದ್ದಾರೆ ಎಂದು ಕೆಲವರು ತಪ್ಪು ಸಂದೇಶ ಹರಡುತ್ತಿದ್ದಾರೆ. ಈ ರೀತಿಯ ವದಾಂತಿಗಳಿಗೆ ಜನರು ಕಿವಿಕೊಡಕೂಡದು. ಗ್ಯಾರಂಟಿ ಯೋಜನೆಗಳಿಂದ ಬಡವರ ಬಾಳು ಹಸನಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಸಾಗರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಇಲ್ಲಿನ ಪಡವಗೋಡು ಗ್ರಾಮ ಪಂಚಾಯಿತಿ ಲಿಂಗದಹಳ್ಳಿ ಹಾಗೂ ಭೀಮನೇರಿಯ ಸೂರನಗದ್ದೆ ದೇವಸ್ಥಾನ ವೃತ್ತದಲ್ಲಿ ಬುಧವಾರ (ಏ.3) ಆಯೋಜಿದ್ದ ಗ್ರಾಮ ಪಂಚಾಯಿತಿ ಮಟ್ಟದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಗ್ರಾಮೀಣ ಕೃಪಾಂಕ ಕಲ್ಪಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಅಶಕ್ತ ಕುಟುಂಬಗಳಿಗೆ ಆಶಾಕಿರಣ ಆಗಿದ್ದರು. ಅವರ ಮಗಳಾದ ನಾನು ಕೂಡ ಬಂಗಾರಪ್ಪ ಅವರ ಹಾದಿಯಲ್ಲಿ ಸಾಗುತ್ತೇನೆ‌. ನೊಂದವರ ಕಣ್ಣೀರು ಒರೆಸುತ್ತೇನೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ ಎಂದರು.

ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಕಾವು ಹೆಚ್ಚಾಗಿದೆ.  ಆದ್ದರಿಂದ, ಇಲ್ಲಿ ಗೀತಾ ಶಿವರಾಜಕುಮಾರ್ ಅವರನ್ನು ಹೆಚ್ಚಿನ ಮತದಿಂದ ಗೆಲ್ಲಿಸಬೇಕು. ಗೀತಾ ಶಿವರಾಜಕುಮಾರ್ ಅವರು ರಾಜಕೀಯಕ್ಕೆ ಬರಲು ಹಕ್ಕಿದೆ. ಅವರ ರಕ್ತದಲ್ಲಿಯೇ ಸಾಮಾಜಿಕ ಸೇವೆಯ ಗುಣವಿದೆ. ಆದರೆ, ಈ ಬಗ್ಗೆ ಕೆಲವರು ಟೀಕಿಸುತ್ತಿದ್ದಾರೆ. ಇದಕ್ಕೆ ಉತ್ತರವಾಗಿ ಮತ ನೀಡಿ ಹರಿಸಬೇಕು ಎಂದು ಕೋರಿದರು.

ಸಂಸದ ಬಿ.ವೈ. ರಾಘವೇಂದ್ರ ಅವರು ಗ್ರಾಮೀಣ ಮಟ್ಟಕ್ಕೆ ಯಾವುದೇ ಕೊಡುಗೆ ನೀಡಿಲ್ಲ. ಸೋಗಾನೆ ವಿಮಾನ ನಿಲ್ದಾಣ, ಸೇತುವೆ, ರಸ್ತೆ ಮಾಡಿದರೆ ಮಾತ್ರ ಅಭಿವೃದ್ಧಿ ಅಲ್ಲ. ಬಡ ಜನರ ಅಳಲು ಆಲಿಸಬೇಕು. ಈ ಕಾರ್ಯವನ್ನು ಗೀತಾ ಅವರು ಪ್ರಮಾಣಿಕವಾಗಿ ಮಾಡಲಿದ್ದಾರೆ ಎಂದರು.

ನಟ ಶಿವರಾಜಕುಮಾರ್ ಮಾತನಾಡಿ, ಆರೋಗ್ಯ ಸಮಸ್ಯೆ ನಡುವೆಯೂ ಕಾರ್ಯಕ್ರಮಕ್ಕೆ ಆಗಮಿಸಿದ್ದೇನೆ. ಇದಕ್ಕೆ ಕಾರಣ ಶಿವಮೊಗ್ಗ ಜನರು ಗೀತಾ ಅವರ (ಪತ್ನಿ) ಮೇಲಿಟ್ಟಿರುವ ನಂಬಿಕೆ. ಆದ್ದರಿಂದ, ನಾನು ಗೀತಾ ಅವರನ್ನು ನಂಬಿದ್ದೇನೆ. ಮತ ನೀಡಿ ಎಂದು ಮನೆ ಬಾಗಿಲಿಗೆ ಬಂದಿದ್ದೇವೆ. ಮತ ನೀಡಿ ಆಶೀರ್ವದಿಸಿ ಎಂದು ಕೋರಿದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಜಿಲ್ಲೆಯಲ್ಲಿ ಕಣ್ಮರೆ ಆಗಿದ್ದಾರೆ ಎಂದು ಕೆಲವರು ವದಾಂತಿ ಹಬ್ಬಿಸುತ್ತಿದ್ದಾರೆ. ಆದರೆ, ಈ ರೀತಿ ಮಾಡುವುದು ತಪ್ಪು. ಚುನಾವಣೆ ಪ್ರಚಾರ ಎಂದಾಕ್ಷಣಾ ಪೋಟೊ, ವಿಡಿಯೋ ತೆಗೆಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಲ್ಲ. ಜನರ ಅಳಲು ಆಲಿಸಬೇಕು. ಈ ಕಾರ್ಯವನ್ನು ನಾನು ಮಾಡುತ್ತಿದ್ದೇನೆ ಎಂದರು.

ಶಾಸಕ ಬೇಳೂರು ಗೋಪಾಲಕೃಷ್ಣ, ಸಾಗರ ತಾಲ್ಲೂಕಿನಲ್ಲಿ ಮಾಜಿ ಶಾಸಕ ಹರತಾಳು ಹಾಲಪ್ಪ ಆಡಳಿತದ ಅವಧಿಯಲ್ಲಿ ಅಭಿವೃದ್ಧಿ ಕಾರ್ಯ ಶೂನ್ಯ. ಸಾಗರದಲ್ಲಿ ಮದ್ಯದಂಗಡಿ ತೆರೆದಿರುವುದ ಬಿಟ್ಟರೆ, ಬೇರೆ ಯಾವುದೇ ಅಭಿವೃದ್ಧಿ ಮಾಡಿಲ್ಲ. ಜನರಿಗೆ ಬೇಕಿರುವುದು ಕಣ್ಣೀರು ಒರೆಸುವ ಕೈಗಳು. ಅದೇ ಕಾರಣಕ್ಕೆ ಹಾಲಪ್ಪ ಮನೆ ಸೇರಿದ್ದಾರೆ. ಆದ್ದರಿಂದ, ಇಲ್ಲಿ ಗೀತಾ ಶಿವರಾಜಕುಮಾರ್ ಅವರನ್ನು ಬೆಂಬಲಿಸಬೇಕು ಎಂದರು.

ಕೆಪಿಸಿಸಿ ಉಪಾಧ್ಯಕ್ಷ ಅನಿಲ್ ಕುಮಾರ್ ತಡಕಲ್, ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ, ಕಲಗೋಡು ರತ್ನಾಕರ್, ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಮೋಹನ್, ಅನಿತಾ ಕುಮಾರಿ, ಸೂರನಗದ್ದೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಖಾ ಅಣ್ಣಪ್ಪ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...