ಶಿವಮೊಗ್ಗ | ದೌರ್ಜನ್ಯ ಪ್ರತಿಬಂಧ ಸಮಿತಿಗೆ ಸದಸ್ಯರ ಆಯ್ಕೆ; ಕೆಲವರ ಬಗ್ಗೆ ಹರಮಘಟ್ಟ ರಂಗಪ್ಪ ಆಕ್ಷೇಪ

Date:

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ, ಕಾನೂನಿನ ಬಗ್ಗೆ ಜಾಗೃತಿ ಮೂಡಿಸುವುದಕ್ಕಾಗಿ ಇರುವ ದೌರ್ಜನ್ಯ ಪ್ರತಿಬಂಧ ಸಮಿತಿಗೆ ಶಿವಮೊಗ್ಗ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸದಸ್ಯರ ನೇಮಕಾತಿ ನಡೆದಿದ್ದು, ಐವರನ್ನು ಆಯ್ಕೆ ಮಾಡಲಾಗಿದೆ.

ಇದರ ಸಂಬಂಧ ಡಿಎಸ್‌ಎಸ್ ಹರಮಘಟ್ಟ ರಂಗಪ್ಪನವರ ಬಣದಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಬೆಳಿಗ್ಗೆ 11ಕ್ಕೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಅಧಿಕಾರೇತರ ನಾಮನಿರ್ದೇಶನ ಸದಸ್ಯರ ನೇಮಕಾತಿ ಪೈಕಿ ಎಸ್‌ಸಿ ಸದಸ್ಯರಾಗಿ ಶಿವಬಸಪ್ಪ, ರುದ್ರಪ್ಪ, ಬೂದಿಗೆರೆ ಬಸವರಾಜ್, ಮಂಜುನಾಥ್ ಅವರು ಆಯ್ಕೆಯಾದರೆ, ಎಸ್‌ಟಿ ವಿಭಾಗದಿಂದ ಅಣ್ಣಪ್ಪನವರನ್ನು ನೇಮಿಸಲಾಗಿದೆ. ಹಿಂದುಳಿದ ವರ್ಗದದಿಂದ ಶಿವಮೊಗ್ಗದ ದಿನೇಶ್, ತೀರ್ಥಹಳ್ಳಿಯಿಂದ ನಾಗರಾಜ್ ಮತ್ತು ಸೊರಬದಿಂದ ಓಂಪ್ರಕಾಶ್ ಸೇರಿದಂತೆ ಮೂವರನ್ನು ನೇಮಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾಜ ಕಲ್ಯಾಣ ಕಚೇರಿಯಲ್ಲಿ ಅಟ್ರಾಸಿಟಿ ಸಮಿತಿಗೆ ಸದಸ್ಯರ ಆಯ್ಕೆಯ ಪ್ರಕ್ರಿಯೆ ನಡೆದಿದ್ದು, ಕೆಲವರ ಆಯ್ಕೆ ವಿಚಾರದಲ್ಲಿ ಡಿಎಸ್‌ಎಸ್ ಹರಮಘಟ್ಟ ರಂಗಪ್ಪನವರ ಬಣ ಆಕ್ಷೇಪಿಸಿದ್ದು, “ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಆಯ್ಕೆ ವಿಚಾರದಲ್ಲಿ ಕರ್ತವ್ಯ ಲೋಪವೆಸಗಿದ್ದಾರೆ. ಅರ್ಜಿದಾರರ ಪೂರ್ಣ ಪ್ರಮಾಣದಲ್ಲಿ ಪೊಲೀಸ್ ವೆರಿಫಿಕೇಷನ್ ಆಗದೆ ಡಿಸಿಗೆ ತಪ್ಪು ಮಾಹಿತಿ ನೀಡಿ ಸಮಿತಿ ರಚಿಸಲಾಗಿದೆ” ಎಂದು ದೂರಿದರು.

“ಆಯ್ಕೆಯ ವಿಚಾರವಾಗಿ ಡಿಸೆಂಬರ್‌ 02ರಂದೇ ಗುಪ್ತವಾಗಿ ಸಮಾಜ ಕಲ್ಯಾಣ ಇಲಾಖೆಯ ಡಿಡಿ ಮಲ್ಲೇಶಪ್ಪ ಆಯ್ಕೆ ಮಾಡಿ ಇಟ್ಟಿದ್ದಾರೆ. ದಲಿತ ಹೋರಾಟಗಾರರು, ಹಿರಿಯರು, ಸಮಾಜಕ್ಕೆ ಶ್ರಮಿಸಿದವರು ಮತ್ತು ಶೋಷಿತ ವರ್ಗದವರನ್ನು ಈ ಸಮಿತಿಗೆ ಆಯ್ಕೆ ಮಾಡಬೇಕು. ಕೆಲವರ ಆಯ್ಕೆ ಸೂಕ್ತವಾಗಿದ್ದರೂ ಇನ್ನು ಕೆಲವರ ಆಯ್ಕೆಯ ವಿಚಾರದಲ್ಲಿ ಡಿಡಿಯವರು ರಾಜಕೀಯ ಆಮಿಷಕ್ಕೆ ಬಲಿಯಾಗಿರುವುದಾಗಿ ಕಂಡುಬರುತ್ತಿದೆ. ಹಾಗಾಗಿ ಸಮಿತಿಯನ್ನು ಮತ್ತೊಮ್ಮೆ ಪುನರ್ ಪರಿಶೀಲಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಬಿಜೆಪಿ ಪ್ರವಾಸ ಪೋಸ್ಟರ್‌ನಲ್ಲಿ ವಿಜಯೇಂದ್ರ ಫೋಟೋ ನಾಪತ್ತೆ; ಗೊತ್ತೇ ಇಲ್ಲವೆಂದ ಮಾಜಿ ಸಚಿವ

“ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ನಿವೃತ್ತ ನೌಕರರ ಸಂಘ, ಆದಿ ಜಾಂಬವ ಸಂಘ, ಲಂಬಾಣಿ ಹಾಗೂ ಹೊಲೆಯ ಮಾದಿಗ ಹೀಗೆ ಎಲ್ಲರನ್ನೂ ಒಳಗೊಂಡು ಸಮಿತಿ ರಚಿಸಬೇಕು. ಈಗ ಆಗಿರುವ ಸಮಿತಿಯಿಂ ಉಳಿದವರಿಗೆ ಅನ್ಯಾಯ ಎಸಗಿದಂತಾಗಿದೆ ಎಂಬ ಕೂಗು ಕೇಳಿಬರುತ್ತಿದೆ” ಎಂದರು.

“ಕರ್ತವ್ಯ ಲೋಪವೆಸಗಿರುವ ಉಪನಿರ್ದೇಶಕರು ಸಮಿತಿ ಆಯ್ಕೆಯನ್ನು ಪುನರ್ ಪರಿಶೀಲನೆ ಮಾಡದಿದ್ದರೆ ಡಿಡಿಯ ವಿರುದ್ಧ ಡಿಎಸ್ಎಸ್ ಹೋರಾಡಲಿದೆ” ಎಂದು ಡಿಎಸ್‌ಎಸ್ ಹರಮಘಟ್ಟ ರಂಗಪ್ಪನವರ ಬಣ ಎಚ್ಚರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...