ಶಿವಮೊಗ್ಗ | ದಲಿತರ ಭೂಮಿ ಒತ್ತುವರಿ; ಎಂಪಿಎಂ ವಿರುದ್ಧ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ ದಸಂಸ

Date:

ದಲಿತರ ಭೂಮಿಯನ್ನು ಎಂಪಿಎಂ(ಮೈಸೂರು ಪೇಪರ್‌ ಮಿಲ್ಸ್‌)ನವರು ಆಕ್ರಮಿಸಿರುವುದನ್ನು ಜಂಟಿ ಸರ್ವೆ ಮಾಡಿಸಿ ಹದ್ದುಬಸ್ತು ಮಾಡಿಸಿ ಬಿಡಿಸಿಕೊಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಮೇ 13ರಿಂದ ದಲಿತರಿಗೆ ಮಂಜೂರಾದ ಸರ್ವೆ ನಂ 12ರ ಭೂಮಿಯಲ್ಲಿಯೇ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಆರಂಭಿಸಿದ್ದು, ಶಿವಮೊಗ್ಗ ಜಿಲ್ಲೆ ಭದ್ರಾವತಿ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು.

“ವಿಷಯಕ್ಕೆ ಸಂಭಂದಿಸಿದಂತೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಡಿ ಬಿ ಹಳ್ಳಿ ಗ್ರಾಮದ ಹಾಗೂ ಅರದೊಟ್ಟು ಗ್ರಾಮದ 14 ಮಂದಿ ತಮಗೆ ಸೇರಿದ 8.20 ಎಕರೆ ಜಮೀನನ್ನು ಅರದೊಟ್ಟು ಗ್ರಾಮದ ಗ್ರಾಮ ಠಾಣಕ್ಕೆ ಬಿಟ್ಟುಕೊಟ್ಟಿದ್ದರಿಂದ ಇದರ ಬದಲಿಗೆ ಸರ್ಕಾರವು 14 ಜನರಿಗೆ ತಲಾ 2ಎಕರೆಯಂತೆ ಚಂದನಕೆರೆ ಸರ್ವೆ.ನಂ 12ರ 413 ಗೋಮಾಳ ಜಮೀನಿನ ಪೈಕಿ 28 ಎಕರೆ ಭೂಮಿಯನ್ನು ಎಲ್‌ಎನ್‌ಡಿ 147/60.61ರಂತೆ ಸರ್ಕಾರ ಸಾಗುವಳಿ ಚೀಟಿ ನೀಡಿರುತ್ತದೆ ಹಾಗೂ ಚಂದನಕೆರೆಯ ಪರಿಶಿಷ್ಟ ಜಾತಿ ಆದಿಕರ್ನಾಟಕ ಜನಾಂಗಕ್ಕೆ ಸೇರಿದ ಸುಮಾರು 21 ಮಂದಿ ಹಾಗೂ ಕಲ್ಲಿಹಾಳ್ ಗ್ರಾಮದ 20 ಮಂದಿ ತಲಾ 2 ಎಕರೆಯಂತೆ ಸಾಗುವಳಿ ಮಾಡುತ್ತಾ ನಮೂನೆ 50-51ರಲ್ಲಿ ಅರ್ಜಿ ಸಲ್ಲಿಸಿ ಸ್ವಾಧೀನಾನುಭವದಲ್ಲಿದ್ದರು” ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಎಂಪಿಎಂ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“1984-850A ಮೇಲ್ಕಂಡವರೆಲ್ಲರೂ ಸ್ವಾಧೀನಾನುಭವದಲ್ಲಿರುತ್ತಾರೆ. ಆದರೆ ದಲಿತರು ಸಾಗುವಳಿ ಮಾಡುತ್ತಾ ಬಂದಿದ್ದು, ಭೂಮಿಯನ್ನು ಅನಕ್ಷರಸ್ಥರು ಹಾಗೂ ಅಸಹಾಯಕ ದಲಿತರನ್ನು ಹೆದರಿಸಿ ದೌರ್ಜನ್ಯ ಮಾಡಿ 1985-86 ರಲ್ಲಿ ಎಂಪಿಎಂ ನವರು ನೀಲಗಿರಿ ನೆಡು ತೋಪು ಮಾಡಿದ್ದು ದಲಿತರು ಭೂಮಿಯ ಮೇಲೆ ಹೋಗದಂತೆ ತಡೆದು ದೌರ್ಜನ್ಯವೆಸಗಿರುತ್ತಾರೆ. ಸದರಿ ದಲಿತರು ಸರ್ಕಾರದ ಜೊತೆ ಪತ್ರ ವ್ಯವಹಾರ ಮಾಡುತ್ತಲೇ ಓಡಾಡುತ್ತಿದ್ದರು. ಎಂಪಿಎಂನವರ ದೌರ್ಜನ್ಯದಿಂದ ಭೂಮಿ
ಕಳೆದುಕೊಂಡ ಸಂತ್ರಸ್ತರಿಗೆ ಭೂಮಿ ಅವರ ಕೈ ಸೇರಲಿಲ್ಲ. ಕಚೇರಿಗಳಿಗೆ ಅಲೆದಾಡುವುದು ಅವರ ಜೀವನವಾಗಿದೆ. ಇತ್ತೀಚೆಗೆ ಎಂಪಿಎಂನವರು ದೌರ್ಜನ್ಯದಿಂದ ಕಿತ್ತುಕೊಂಡಿದ್ದ ದಲಿತರಿಗೆ ಸೇರಿದ ಭೂಮಿಯನ್ನು ಕೆಲವರು ಅಕ್ರಮವಾಗಿ ಬಗರ್ ಹುಕುಂ ಸಾಗುವಳಿ ಮಾಡಲು ಮುಂದಾಗಿರುವುದು ಸಮಿತಿಯ ಗಮನಕ್ಕೆ ಬಂದಿದೆ” ಎಂದರು.

“ತಾವುಗಳು ತಕ್ಷಣ ಸ್ಥಳಕ್ಕೆ ಸಂಬಂಧಪಟ್ಟ ಇಲಾಖೆಯ ಸಿಬ್ಬಂದಿಗಳೊಂದಿಗೆ ಆಗಮಿಸಿ ಜಂಟಿ ಸರ್ವೆಕಾರ್ಯ ನಡೆಸಿ ಸರ್ಕಾರದಿಂದ ದಲಿತರಿಗೆ ಚಂದನಕೆರೆ ಸರ್ವೆ ನಂ 12ರಲ್ಲಿ ಮಂಜೂರಾದ ಭೂಮಿಯನ್ನು ಸರ್ವೆ ಕಾರ್ಯ ನಡೆಸಿ ಹದ್ದುಬಸ್ತು ಮಾಡಿಸಿ ದಲಿತರಿಗೆ ಭೂಮಿಯನ್ನು ಬಿಡಿಸಿಕೊಡಬೇಕು. ಹಾಗೂ ಬಗುರ್ ಹುಕುಂ ಸಾಗುವಳಿದಾರರಿಗೆ ಮಂಜೂರಾತಿ ಹಂತದಲ್ಲಿದ್ದ ಭೂಮಿಯನ್ನು ಸಾಗವಳಿ ಕೊಡಿಸಿಕೊಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಮೇ 16ರಂದು ಪ್ರತಿಭಟನೆ; ಡಿವೈಎಸ್‌ಪಿ ನೇತೃತ್ವದ ಪೂರ್ವಭಾವಿ ಸಭೆ

ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಪ್ರಧಾನ ಸಂಚಾಲಕ ಹನುಮಂತಪ್ಪ ಕಲ್ಲಿಹಾಳ್, ಜಿಲ್ಲಾ ಪ್ರಧಾನ ಸಂಚಾಲಕ ಟಿ ಎಚ್ ಹಾಲೇಶಪ್ಪ, ಗ್ರಾಮಾಂತರ ಸಹ ಸಂಚಾಲಕ ನವೀನ್ ಕುಮಾರ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...