ಶಿವಮೊಗ್ಗ | ಭೂಮಿಗೆ ಪೂಜೆ ಸಲ್ಲಿಸಿ ರೈತ ಕುಟುಂಬಗಳಿಂದ ಶೀಗೆ ಹುಣ್ಣಿಮೆ ಆಚರಣೆ

Date:

ಶಿವಮೊಗ್ಗ ಜಿಲ್ಲೆಯ ಆನಂದಪುರದ ಸುತ್ತಮುತ್ತಲಿನ ರೈತರು ಗುರುವಾರ ಹೊಲ-ಗದ್ದೆಗಳು ಮತ್ತು ತೋಟಗಳಲ್ಲಿ ಸಡಗರದಿಂದ ಹೋಗಿ ಭೂಮಿಗೆ ಪೂಜೆ ಮಾಡಿ ಚರಗ ಚೆಲ್ಲುವ ಮೂಲಕ ಶೀಗೆ ಹುಣ್ಣಿಮೆ ಆಚರಣೆ ರೈತರ ಸಂಭ್ರಮದಿಂದ ಆಚರಿಸಿದರು.

ವರ್ಷವಿಡೀ ಕಷ್ಟ ಪಟ್ಟು ಬೆಳೆದ ಫಸಲನ್ನು ಪೂಜೆ ಮಾಡಿ, ಹಸಿರು ಸೀರೆಯ ನುಡಿಸಿ ಭೂಮಿಯನ್ನು ಆರಾಧಿಸಿದರು. ಮುಂಗಾರು ಬೆಳೆಗಳಿಂದ ಮಡಿಲು ತುಂಬಿಕೊಂಡು ಎಲ್ಲಿ ನೋಡಿದರಲ್ಲಿ ಹಚ್ಚ ಹಸಿರಾಗಿ ಕಾಣುವಂಥ ಹೊಲಗಳಲ್ಲಿ ಫಸಲುಗಳೆಲ್ಲ ಕೊಯ್ಲಿಗೆ ಬಂದಿರುವ ಈ ಹೊತ್ತಿನಲ್ಲಿ ಭೂಮಿಗೆ ಬಾಗಿನ ಅರ್ಪಣೆ, ಉಡಿ ತುಂಬುವುದು, ಹಾಗೂ ಚರಗ ಚೆಲ್ಲಿ ಭಕ್ತಿ ಸಮರ್ಪಿಸುವುದರ ಮೂಲಕ ಮಲೆನಾಡಿನ ವಿಶಿಷ್ಠ ಸಂಪ್ರದಾಯದಂತೆ ರೈತರು ಹಬ್ಬವನ್ನು ಆಚರಿಸಿದರು.

ಮುಂಗಾರು ಮಳೆ ಮುಗಿಯುತ್ತ ಬಂದಂತೆ ಭತ್ತ, ಅಡಕೆ, ಬಾಳೆ, ಜೋಳ, ಹತ್ತಿ, ದ್ವಿದಳ ಧಾನ್ಯ ಸೇರಿ ಎಲ್ಲ ಫಸಲನ್ನೂ ಹೊತ್ತು ಭೂಮಿ ತಾಯಿ ಮೈದುಂಬಿಕೊಂಡಿರುತ್ತಾಳೆ. ಇಂತಹ ದಿನಗಳಲ್ಲಿ ರೈತರು ಈ ಹಬ್ಬವನ್ನು ಆಚರಿಸಿದರು.ರೈತರು ಕುಟುಂಬ ಸದಸ್ಯರು, ಬಂಧು-ಬಾಂಧವರು, ನೆರೆ-ಹೊರೆಯವರೊಂದಿಗೆ ಹೊಲಗಳಿಗೆ ಗದ್ದೆಗಳಿಗೆ ಹೋಗಿ ಹಬ್ಬದ ಸಂಭ್ರಮಾಚರಣೆಯಲ್ಲಿ ತೊಡಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
image 21

ಭೂಮಿಗೆ ತವರು ಮನೆಯವರು ಮಗಳ ಸೀಮಂತ ಕಾರ್ಯ ಮಾಡುವಾಗ ಮಗಳಿಗೆ ಬಯಕೆ ತೀರಿಸಲು ವಿವಿಧ ಬಗೆಯ ಪದಾರ್ಥಗಳನ್ನು ತಯಾರಿಸಿ ನೀಡುವಂತೆ ರೈತರೂ ಭೂಮಿಗೆ ಮತ್ತು ಬೆಳೆಯನ್ನು ಪೂಜಿಸುವ ಮೂಲಕ ಸೀಮಂತ ಕಾರ್ಯ ಮಾಡಿದರು. ಹೊಸ ಫಸಲಿಗೆ ಹೊಸ ಸೀರೆ-ಕುಪ್ಪಸದಿಂದ ಅಲಂಕರಿಸಿ, ಪೂಜೆ ಮಾಡಿ ವಿವಿಧ ಖಾದ್ಯಗಳನ್ನು ನೈವೇದ್ಯ ಸಮರ್ಪಿಸಿದರು.

ನಂತರ ಹೊಲದಲ್ಲಿ ಕುಳಿತು ಮೊಸರುಬುತ್ತಿ, ಎಲೆಯ ಕೊಟ್ಟಿಯ ಕಡಬು,ಕಡಬು, ಹೋಳಿಗೆ ಸೇರಿ ವಿಧವಿಧವಾದ ಹಬ್ಬದಡಿಗೆ ಊಟ ಮಾಡಿ ರೈತರು ಸಂಭ್ರಮಿಸಿದರು.

ವರದಿ: ಅಮಿತ್. ಆರ್, ಆನಂದಪುರ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...