ಶಿವಮೊಗ್ಗ | ಆನೆ ದಾಳಿಗೆ ರೈತ ಬಲಿ; ₹25 ಲಕ್ಷ ಪರಿಹಾರ ರೈತ ಸಂಘ ಆಗ್ರಹ

Date:

ಆನೆ ದಾಳಿಗೆ ರೈತ ಬಲಿಯಾಗಿದ್ದು, ಸರ್ಕಾರ ಆತನ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯ ರೈತ ಸಂಘದಿಂದ ಪ್ರತಿಭಟನೆ ನಡಿಸಿ ಮನವಿ ನೀಡಿ ಮಾತನಾಡಿದ ರಾಜ್ಯ ರೈತ ಸಂಘದ ಬಸವರಾಜಪ್ಪ ಅವರು, “ಶಿವಮೊಗ್ಗ ಗ್ರಾಮಾಂತರದ ಪುರದಾಳ ಗ್ರಾಮದ ಹನುಮಂತಪ್ಪ ದಾಸಣ್ಣನವರು ಜಮೀನಿನಲ್ಲಿ ಕೆಲಸ ಮಾಡುತ್ತಿರುವಾಗ ಆನೆ ದಾಳಿಗೆ ಒಳಗಾಗಿ ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆಯವರು ಇವರ ಕುಟುಂಬಕ್ಕೆ ಸರ್ಕಾರ ನಿಗದಿಮಾಡಿರುವಂತೆ ಕೂಡಕಲೇ ₹25 ಲಕ್ಷ ಪರಿಹಾರ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ರಾಜ್ಯ ರೈತ ಸಂಘದ ಬಸವರಾಜಪ್ಪ

“ಆನೆಗಳು ಗುಂಪಾಗಿ ಬಂದು ರೈತರ ಜಮೀನಿನ ಮೇಲೆ ದಾಳಿ ಮಾಡುತ್ತಿದ್ದು, ರೈತರು ಬೆಳೆದಿರುವ ಮೆಕ್ಕಜೋಳ, ಬಾಳೆ, ಅಡಿಕೆ ಬೆಳೆಗಳನ್ನು ನಾಶಪಡಿಸಿ ರೈತರಿಗೆ ಅಪಾರ ನಷ್ಟವುಂಟು ಮಾಡುತ್ತಿವೆ. ಅಲ್ಲದೇ ಕೆಲವು ಗ್ರಾಮಗಳಿಗೆ ನುಗ್ಗಿದ ಉದಾಹರಣೆಗಳಿಂದ ಸ್ಥಳೀಯರು ಆತಂಕದಿಂದ ಬದುಕುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸ್ಥಳೀಯ ರೈತರಿಗೆ ರಕ್ಷಣೆ ಒದಗಿಸುವುದರ ಜೊತೆಗೆ ಸೂಕ್ತ ಬೆಳೆನಷ್ಟ ಪರಿಹಾರವನ್ನು ಕೊಡಬೇಕು ಮತ್ತು ಜಮೀನಿಗೆ ಗ್ರಾಮದೊಳಗೆ ಅನೆಗಳು ಬಾರದಂತೆ ತಡೆಯಬೇಕು. ಜತೆಗೆ ಆನೆಗಳನ್ನು ಕಾಡಿಗೆ ಕಳುಹಿಸುವ ಕೆಲಸ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಡಗು | ಗೋಣಿಕೊಪ್ಪಲು-ಕುಟ್ಟ ಮಾರ್ಗದ ರಸ್ತೆ ಮೇಲ್ದರ್ಜೆಗೆ ಕೇಂದ್ರ ಸರ್ಕಾರ ಅನುಮತಿ: ಸಂಸದ ಯದುವೀರ್ ಒಡೆಯರ್

ರಾಜ್ಯಾದ್ಯಂತ ಕಾಡು ಪಾಣಿಗಳೂ ಮತ್ತು ಮಾನವನ ಮಧ್ಯೆ ಇತ್ತೀಚಿನ ದಿನಗಳಲ್ಲಿ ಸಂಘರ್ಷ ನಡೆಯುತ್ತಲೇ ಇದೆ. ಈ ಬಗ್ಗೆ ರೈತ ಸಂಘ ಸರ್ಕಾರದ ಜತೆಗೆ ಮಾತುಕತೆ ನಡೆಸಿ ಒತ್ತಾಯ ಮಾಡಿದ್ದೇವೆ. ಆದರೂ ಸರ್ಕಾರ ಉದಾಸೀನ ತೋರುತ್ತಿದೆ. ರೈತರ ಪ್ರಾಣದ ಜತೆ ಚೆಲ್ಲಾಟವಾಡುತ್ತಿವೆ. ರಾಜ್ಯಾದ್ಯಂತ ಕೊಡಲೇ ಈ ಸಂಘರ್ಷವನ್ನು ತಪ್ಪಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡುತ್ತೇವೆ” ಎಂದು ಕೋರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...