ಶಿವಮೊಗ್ಗ | ಹಾರನಳ್ಳಿಯಲ್ಲಿ ಗೀತಾ ಶಿವರಾಜಕುಮಾರ್ ಪ್ರಚಾರ ಸಭೆ

Date:

ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಅಪಾರ ಕೊಡುಗೆ ನೀಡಿದ್ದಾರೆ. ಅದೇ, ಧೈರ್ಯದಿಂದ ಗೀತಾ ಅಕ್ಕನಿಗೆ ಮತ ನೀಡಿ, ಚುನಾವಣೆಯಲ್ಲಿ ಗೆಲುವು ಸಾಧಿಸಲು ಆಶೀರ್ವದಿಸಬೇಕಾಗಿ ಕೇಳಿಕೊಳ್ಳುತ್ತಿದ್ದೇನೆ‌ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು.

ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದರು.

“ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ ದಾರಿ ದೀಪವಾಗಿವೆ. ಅದೇ ರೀತಿ, ಎಸ್ ಬಂಗಾರಪ್ಪ ಅವರ ಆಡಳಿತದ ಅವಧಿಯಲ್ಲಿ ಉಚಿತ ವಿದ್ಯುತ್ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದು ಶೋಷಿತ ವರ್ಗಕ್ಕೆ ನೆರಳಾಗಿ ನಿಂತಿದ್ದರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಳುಗಡೆ ಸಂತ್ರಸ್ತರು ಹಾಗೂ ಬಗರ್‌ ಹುಕುಂ ರೈತರ ಸಮಸ್ಯೆ ಬಗೆಹರಿಸುವ ಕೀಲಿ ಕೈ ದೆಹಲಿಯ ಕೇಂದ್ರದಲ್ಲಿದೆ. ಆದರೆ, ೧೦ ವರ್ಷದಿಂದ ಆಡಳಿತ ನಡೆಸುತ್ತಿರುವ ಸ್ಥಳೀಯ ಸಂಸದರು, ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಅದೇ ಉದ್ದೇಶಕ್ಕೆ ಗೀತಾ ಶಿವರಾಜ ಕುಮಾರ್ ಅವರಿಗೆ ಮತ ನೀಡಿ ಗೆಲ್ಲಿಸಬೇಕಿದೆ. ಗೀತಾ ಅಕ್ಕ ಗೆದ್ದರೆ, ಜಿಲ್ಲೆಯ ಶೋಷಿತ ವರ್ಗಕ್ಕೆ ಖಂಡಿತ ನ್ಯಾಯ ಸಿಗಲಿದೆ. ಇದಕ್ಕೆ ನಾನು ಗ್ಯಾರಂಟಿ ನೀಡುತ್ತೇನೆ” ಎಂದು ಸಚಿವ ಮಧುಬಂಗಾರಪ್ಪ ಭರವಸೆ ನೀಡಿದರು.‌

ಕಾಂಗ್ರೆಸ್‌ ಪ್ರಚಾರ

ಶಿವಮೊಗ್ಗ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮಾತನಾಡಿ, “ರೈತರಿಗೆ ಬೆಂಬಲ ಬೆಲೆ ಸಿಗುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತೇನೆ. ರಾಜ್ಯ ಮಟ್ಟದಲ್ಲಿ ಸಚಿವ ಮಧು ಬಂಗಾರಪ್ಪ ರೈತರ ಕಷ್ಟಗಳಿಗೆ ನೆರವಾದರೆ, ಕೇಂದ್ರದ ಹಂತದಲ್ಲಿ ರೈತರ ಕಷ್ಟಗಳಿಗೆ ಸ್ಪಂದಿಸಲು ನಾನು ಶ್ರಮಿಸುತ್ತೇನೆ. ಅದೇ ಕಾರಣಕ್ಕೆ ನನಗೆ ಮತ ನೀಡಿ” ಎಂದು ಕೋರಿದರು.

ನಟ ಶಿವರಾಜಕುಮಾರ್ ಮಾತನಾಡಿ, “ಜನರು ಬದಲಾವಣೆ ಬಯಸುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಆದರೆ, ಈ ಯೋಜನೆಗಳಿಂದ ಬಡವರಿಗೆ ಸಹಾಯ ಆಗಬೇಕು. ಆಗ ಮಾತ್ರ ಸರ್ಕಾರದ ಯೋಜನೆಗಳಿಗೆ ಬೆಲೆ ಸಿಗಲಿದೆ. ಈ ನಿಟ್ಟಿನಲ್ಲಿ ಯೋಜನೆಗಳು ಜನಸಾಮಾನ್ಯರಿಗೆ ನೆರವಾಗಿವೆಯೆಂದು ನಾನು ಬಯಸುತ್ತೇನೆ” ಎಂದು ಹೇಳಿದರು.

ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಮಾತನಾಡಿ, “ಏತ ನೀರಾವರಿ ಯೋಜನೆಗೆ ಬೀಜ ಬಿತ್ತಿದವರು ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಎನ್ನುವುದು ಹೆಮ್ಮೆಯ ಸಂಗತಿ. ಜಿಲ್ಲೆಯಲ್ಲಿ ಮುಳುಗಡೆ ಸಂತ್ರಸ್ತರ ಸಮಸ್ಯೆ ನುಂಗಲಾಗದ ತುತ್ತಾಗಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳಲು ಗೀತಾ ಅವರು ಶಾಸ್ವತ ಪರಿಹಾರ ಸೂಚಿಸುವರು” ಎಂದು ಭರವಸೆ ನೀಡಿದರು.

“ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗೆ ಶಕ್ತಿ ತುಂಬುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅಶಕ್ತರಿಗೆ ನೆರವಾಗಿದ್ದಾರೆ. ಇದರ ಋಣ ತೀರಿಸುವ ಸಕಾಲ ಈಗ ಬಂದಿದೆ. ಎಂದರು.

ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಎಚ್ ಎಸ್ ಸುಂದರೇಶ್ ಮಾತನಾಡಿ, “ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಲಾಗಿದೆ. ಇಲ್ಲಿ ಬಿಜೆಪಿಯನ್ನು ಕಿತ್ತೊಗೆಯಬೇಕಿದೆ. ಅದೇ ಕಾರಣಕ್ಕೆ ಗೀತಾ ಅವರನ್ನು ಬೆಂಬಲಿಸೋಣ” ಎಂದರು.

ಕಾಂಗ್ರೆಸ್ ಮುಖಂಡ ಶ್ರೀನಿವಾಸ ಕರಿಯಣ್ಣ ಮಾತನಾಡಿ, “ಗ್ಯಾರಂಟಿ ಯೋಜನೆಗಳು ಜನಪರವಾಗಿವೆ. ಅದೇ ಕಾರಣಕ್ಕೆ ಲೋಕಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಮತ ನೀಡಿ ಆಯ್ಕೆ ಮಾಡೋಣ” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ನನ್ನದು ಟೀಕೆ ಟಿಪ್ಪಣಿಯ ರಾಜಕಾರಣವಲ್ಲ, ಅಭಿವೃದ್ಧಿಯ ರಾಜಕಾರಣ: ಮುದ್ದಹನುಮೇಗೌಡ

ವಿಧಾನ ಪರಿಷತ್ ಮಜಿ ಸದಸ್ಯ ಆರ್ ಪ್ರಸನ್ನಕುಮಾರ್, ಎಂಎಡಿಬಿ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ, ಎಸ್ ರವಿಕುಮಾರ್, ಜಿ ಡಿ ಮಂಜುನಾಥ್, ಎನ್ ರಮೇಶ್, ಜಿ ಪಲ್ಲವಿ, ಕಲಗೋಡು ರತ್ನಾಕರ್, ಎಂ ಶ್ರೀಕಾಂತ್, ವೈ ಎಚ್ ನಾಗರಾಜ್, ಚಂದ್ರಭೂಪಾಲ್, ರವಿಕುಮಾರ್, ಮಲೆಶಂಕರ ರಮೇಶ, ಸಿ ಹನುಮಂತ್, ಇಕ್ಕೇರಿ ರಮೇಶ್, ಅನಿತಾ ಕುಮಾರಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...