ಶಿವಮೊಗ್ಗ | ರಸ್ತೆ ಮಾಡಿಕೊಡುವುದಕ್ಕೆ ಇನ್ನೆಷ್ಟು ವರ್ಷ ಬೇಕು?; ಬಿದರೆ ಗ್ರಾಮಸ್ಥರ ಆಕ್ರೋಶ

Date:

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಬಿದರೆ ಗ್ರಾಮಕ್ಕೆ ಬರಬೇಕಾದರೆ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದುಕೊಂಡು ಬರುವಂತಹ ಸ್ಥಿತಿ ಎದುರಾಗಿದ್ದು, ಅಂತಹ ಬೃಹತ್‌ ಗುಂಡಿಗಳು ಇವೆ. ಇದರಿಂದ ಆ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಆತಂಕದಲ್ಲಿ ಸಂಚರಿಸುವಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸುಮಾರು 6 ವರ್ಷಕ್ಕೂ ಅಧಿಕ ವರ್ಷಗಳಿಂದ ರಸ್ತೆಗಳ ಪರಿಸ್ಥಿತಿ ಇದೇ ರೀತಿ ಇದೆ. ಆಗಿನ ಬಿಜೆಪಿ ಎಂಎಲ್‌ಎ ಅಶೋಕ್‌ ನಾಯ್ಕ್‌ ಅವರ ಗಮನಕ್ಕೆ ತಂದಿದ್ದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ” ಎಂದು ಆರೋಪಿಸಿದರು.

ರಸ್ತೆ ದುರಸ್ತಿ 1

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಅಶ್ವಿನಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಸುತ್ತಮುತ್ತಲಿನ ಕೆರೆ, ಚಾನೆಲ್ ಮತ್ತು ಗದ್ದೆಗಳು ಇದ್ದು, ಹೆಚ್ಚು ಕಡಿಮೆಯಾದರೆ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಹಾಗಾಗಿ ಸ್ಥಳೀಯ ಜನಪ್ರತಿನಿಧಿಗಳು ಈಗಲಾದರೂ ಎಚ್ಚೆತ್ತುಕೊಂಡು ತ್ವರಿತಗತಿಯಲ್ಲಿ ರಸ್ತೆ ರಿಪೇರಿ ಮಾಡಿಸಿಕೊಡಬೇಕು” ಎಂದು ಆಗ್ರಹಿಸಿದರು.

“ಕೆಲವು ತಿಂಗಳ ಹಿಂದೆ ಒಂದು ಅಜ್ಜಿಯನ್ನು ಬೈಕಿನಲ್ಲಿ ಕರೆದುಕೊಂಡು ಹೋಗುವಾಗ ಬೈಕ್ ಆಯತಪ್ಪಿ ಬಿದ್ದು, ಅಜ್ಜಿ ಜೀವ ಕಳೆದುಕೊಂಡ ಘಟನೆ ನಡೆದಿದೆ. ಇದೊಂದು ಸಾವಿನ ಗುಂಡಿಯಂತಾಗಿದೆ. ನಿತ್ಯವೂ ಊರಿನ ಒಳಗೆ ಬರಲು ಹೊರಗಡೆ ಹೋಗಲು ತೀವ್ರ ಸಮಸ್ಯೆ ಆಗುತ್ತಿದ್ದೂ ಶಾಲಾ ಮಕ್ಕಳಿಗೆ ಮತ್ತು ವೃದ್ಧರಿಗೆ ಅನಾರೋಗ್ಯ ಪೀಡಿತರು ಹೀಗೆ ಎಲ್ಲರೂ ಸಮಸ್ಯೆ ಎದುರಿಸುವಂತಾಗಿದೆ” ಎಂದು ಹೇಳಿದರು.

ಚಾನಲ್

“ಪ್ರಸ್ತುತ ಜೆಡಿಎಸ್ ಎಂಎಲ್‌ಎ ಶಾರದಾ ಪುರ್ಯ ನಾಯಕ್ ಅವರ ಗಮನಕ್ಕೂ ತಂದಿದ್ದು, ಇಷ್ಟು ತಿಂಗಳು ಕಳೆದರೂ ಸಮಸ್ಯೆ ಬಗೆಹರಿಸಿ ಕೊಡುತ್ತಿಲ್ಲ. ಇಲ್ಲಿಗೆ ಬಸ್ ವ್ಯವಸ್ಥೆಯೂ ಇಲ್ಲ. ಬಸ್‌ ವ್ಯವಸ್ಥೆ ನೀಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಕ್ಕೆ ಬಸ್ ವ್ಯವಸ್ಥೆಯಾಗಿದೆ. ಆದರೆ, ರಸ್ತೆ ಸರಿ ಇಲ್ಲದೆ ಬಸ್ ಕೂಡ ಬರುತ್ತಿಲ್ಲ. ಸಂಜೆ ವೇಳೆಯಲ್ಲಿ ಶಾಲಾ ಮಕ್ಕಳು ಬರಲು ತುಂಬ ಅನಾನುಕೂಲವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಇಲ್ಲಿರುವ ಚಾನೆಲ್ ಕೂಡ ಗಬ್ಬೆದ್ದು ನಾರುತ್ತಿದೆ. ಚಾನೆಲ್‌ಗೆ ಕಸ, ಇತರೆ ತ್ಯಾಜ್ಯ ಸೇರಿದ್ದು, ತುಂಬಿ ತುಳುಕುತ್ತಿದೆ. ಇದನ್ನೂ ಕೂಡ ಸ್ವಚ್ಛಗೊಳಿಸಿಲ್ಲ. ರಸ್ತೆ ಕಾಮಗಾರಿ ಕಳಪೆಯಾಗಿದ್ದು, ರಸ್ತೆ ತುಂಬೆಲ್ಲಾ ಗುಂಡಿಮಯವಾಗಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಿದ್ಯಾರ್ಥಿ ನಿಲಯ ಕಟ್ಟಡದ ಮೇಲೆ ಕಲ್ಲು ತೂರಾಟ; ತಪ್ಪಿತಸ್ಥರ ಕ್ರಮಕ್ಕೆ ಕುರುಬರ ಸಂಘ ಆಗ್ರಹ

ಮಾಹಿತಿಗಾಗಿ ಈ ದಿನ.ಕಾಮ್‌ ಪಿಡಿಒ ನಾಗಮಣಿ ಅವರನ್ನು ಸಂಪರ್ಕ ಮಾಡಿದ್ದು, ಅವರು ರಜೆಯಲ್ಲಿ ಇದ್ದೇನೆ. ಎರಡು ದಿನಗಳ ನಂತರ ಮಾಹಿತಿ ನೀಡುತ್ತೇನೆಂದು ಪ್ರತಿಕ್ರಿಯಿಸಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ಶಾಸಕ ಶಾರದಾ ಪುರ್ಯ ನಾಯಕ ಅವರನ್ನು ಈ ದಿನ.ಕಾಮ್‌ ಸಂಪರ್ಕಿಸಿದಾಗ ಮಾತನಾಡಿ,  “ಸರ್ಕಾರ ಯಾವುದೇ ರೀತಿಯ ಅನುದಾನ ನೀಡುತ್ತಿಲ್ಲ. ಇದರಿಂದ ಕ್ಷೇತ್ರದ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ. ಅನುದಾನ ಬಂದ ಕೂಡಲೇ ಮೊದಲ ಪ್ರಾತಿನಿಧ್ಯವನ್ನು ಬಿದರೆ ಗ್ರಾಮಕ್ಕೆ ನೀಡಿ ರಸ್ತೆ ಮಾಡಿಕೊಡುತ್ತೇವೆ” ಎಂದು ಭರವಸೆ ನೀಡಿದ್ದಾರೆ.

WhatsApp Image 2025 11 17 at 5.17.05 PM
ರಾಘವೇಂದ್ರ, ಶಿವಮೊಗ್ಗ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...