ಶಿವಮೊಗ್ಗ | ಊಟ ಬಡಿಸಲು ನಿರಾಕರಿಸಿದ ಪತ್ನಿ ಕೊಂದ ಪತಿ

Date:

ಊಟ ಬಡಿಸಲು‌ ನಿರಾಕರಿಸಿದ ಪತ್ನಿಯ ಕತ್ತನ್ನು ಟವಲ್​​ನಲ್ಲಿ ಬಿಗಿದು ಪತಿಯೇ ಕೊಂದಿರುವ ಘಟನೆ ಶಿಕಾರಿಪುರದ ಅಂಬ್ಲಿಗೊಳ ಗ್ರಾಮದಲ್ಲಿ‌ ನಡೆದಿದೆ.

ಅಂಬ್ಲಿಗೊಳ ಗ್ರಾಮದ ಗೌರಮ್ಮ (28) ಕೊಲೆಯಾದ ಮಹಿಳೆ. ಪತಿ ಮನು (35) ಕೊಲೆಗೈದ ಆರೋಪಿಯಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ಗೌರಮ್ಮ ಶಿಕಾರಿಪುರದ ಗಾರ್ಮೆಂಟ್ಸ್​​ನಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ಮಧ್ಯಾಹ್ನ ಗಂಡ ಮನು ಮನೆಗೆ ಬಂದಾಗ ಪತ್ನಿ ಗೌರಮ್ಮನಿಗೆ ಊಟ ಬಡಿಸುವಂತೆ ಕೇಳಿದ್ದ. ಈ ವೇಳೆ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ಪತ್ನಿ ನೀನೇ ಊಟ ಬಡಿಸಿಕೊಳ್ಳುವಂತೆ ಪತಿಗೆ ಹೇಳಿದ್ದಳು. ಇದರಿಂದ ಇಬ್ಬರ ನಡುವೆ ಜಗಳ ಶುರುವಾಗಿ, ಜಗಳ ವಿಕೋಪಕ್ಕೆ ತಿರುಗಿದೆ. ಅದೇ ಕೋಪದಲ್ಲಿ ಪತಿ ಮನು ಟವಲ್​​ನಿಂದ ಪತ್ನಿಯ ಕುತ್ತಿಗೆಗೆ ಟವಲ್‌ನಿಂದ ಬಿಗಿದು ಉಸಿರುಗಟ್ಟಿಸಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಂಪತಿಗಳಿಗೆ ಇಬ್ಬರು ಮಕ್ಕಳಿದ್ದು, ಅವರು ಹೊರಗೆ ಆಟವಾಡುತ್ತಿದ್ದರು. ಶಿಕಾರಿಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...