ಶಿವಮೊಗ್ಗ | ಅಕ್ರಮವಾಗಿ ಮದ್ಯ ಮಾರಾಟ ದಂಧೆಯಿಂದ ಹಳ್ಳಿ ಹಳ್ಳಿಯಲ್ಲೂ ಅಶಾಂತಿ ಸೃಷ್ಟಿ: ಹೋನಗೋಡು ರತ್ನಾಕರ

Date:

ಸಾಗರ ತಾಲೂಕಿನಲ್ಲಿ ಮದ್ಯ ಮಾರಾಟ ಮಳಿಗೆ(ಬಾರ್)‌ 24 ಗಂಟೆಯೂ ತೆರದೇ ಇರುತ್ತದೆ. ಶಾಸಕರ ಹಿಂಬಾಲಕರು ಹಳ್ಳಿ ಹಳ್ಳಿಗೂ ಬಾಕ್ಸ್‌ಗಟ್ಟಲೆ ಮದ್ಯವನ್ನು ಸಾಗಿಸುತ್ತಿದ್ದು, ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಹಳ್ಳಿ ಹಳ್ಳಿಯಲ್ಲೂ ಅಶಾಂತಿ ಸೃಷ್ಟಿಯಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹೋನಗೋಡು ರತ್ನಾಕರ ದೂರಿದರು.

ಸಾಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರೊಂದಿಗೆ ಮಾತನಾಡಿ ಅವರು, “ಹಾಲಪ್ಪನವರ ಅಧಿಕಾರದಲ್ಲಿ ನಮ್ಮ ವಿಧಾನಸಭಾಕ್ಷೇತ್ರ ಕುಡುಕರ ತಾಣವಾಗಿದೆ. ಒಮ್ಮೆಲೆ ನನಗೆ ಅಧಿಕಾರ ಕೊಟ್ಟು ನೋಡಿ ಇದನ್ನೆಲ್ಲ ಬದಲಿಸುತ್ತೇನೆಂಬ ಭರವಸೆಯಿಂದ ಅಧಿಕಾರಕ್ಕೆ ಬಂದವರು ಈಗಿನ ಶಾಸಕರು. ಆದರೆ ಈಗ ಮಾಡುತ್ತಿರುವುದೇನು? ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಕುಟುಕಿದ್ದಾರೆ.

“ಅಬಕಾರಿ ಇಲಾಖೆಯ ಭ್ರಷ್ಟಾಚಾರ ಮಿತಿಮೀರಿದೆ. ರಾಜ್ಯದಿಂದ ಹಿಡಿದು ತಾಲೂಕಿನವರೆಗೂ ಇವರದೇ ಹಾವಳಿ ಶುರುವಾಗಿದೆ. ಇದರಿಂದ ಬಡ ಕೂಲಿ ಕಾರ್ಮಿಕರು ಮದ್ಯಪ್ರಿಯರಾಗಿದ್ದಾರೆ. ಇದಕ್ಕೆಲ್ಲ ಅಬಕಾರಿ ಇಲಾಖೆಯ ಅಧಿಕಾರಿಗಳು ಹಾಗೂ ಶಾಸಕರ ಕುಮಕ್ಕೇ ಕಾರಣ. ಹಾಗಾಗಿ ಇದನ್ನು ವಿರೋಧಿಸಿದ ಬಾರ್ ಮಾಲೀಕರು ನವೆಂಬರ್ 20ರಂದು‌ ರಾಜ್ಯಾದ್ಯಂತ ಬಾರ್‌ ಬಂದ್ ಮಾಡಲು ಸಿದ್ಧರಾಗಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಬಕಾರಿ ಇಲಾಖೆಯವರು ಇದಕ್ಕೆ ಕಡಿವಾಣ ಹಾಕದೇ ಹೋದರೆ, ಇಂದಿನಿಂದ ಒಂದು ತಿಂಗಳವರೆಗೂ ಕಾಲಾವಕಾಶ ಕೊಟ್ಟು ಸಾರ್ವಜನಿಕ ಹಿತದೃಷ್ಟಿಗಾಗಿ ದಲಿತ ಸಂಘಟನೆಗಳು, ಸ್ವಸಹಾಯ ಸಂಘಗಳು, ಮಹಿಳಾ ಸಂಘಗಳೆಲ್ಲ ಒಗ್ಗೂಡಿ ಶಿವಮೊಗ್ಗದ ಅಬಕಾರಿ ಕಚೇರಿ ಹಾಗೂ ಡಿಸಿ ಕಚೇರಿ ಎದುರು ಧರಣಿ ಕೂರುತ್ತೇವೆ” ಎಂದರು.

“ತಾಲೂಕಿನ ಅಭಿವೃದ್ಧಿಗೆಂದು ಬಂದವರು ಅಬಕಾರಿ ಇಲಾಖೆಯಿಂದ ಹಣ ಲೂಟಿ ಮಾಡುತ್ತಿದ್ದಾರೆ. ಹಾಲಪ್ಪನವರು ತಂದ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಮಾಡಿ ನಾವೇ ಮಾಡಿದ್ದು ಎನ್ನುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಹಾಲಪ್ಪನವರ ನೇತೃತ್ವದಲ್ಲಿ ಇದರ ವಿರುದ್ಧ ಹೋರಾಟ ಮಾಡುತ್ತೇವೆ. ಸಾಗರ ವಿಧಾನಸಭಾ ಕ್ಷೇತ್ರ ಪ್ರಜ್ಞಾವಂತರ ಕ್ಷೇತ್ರವಾಗಿದೆ. ಮುಂದೊಂದು ದಿನ ಅವರೇ ಇದನ್ನೆಲ್ಲ ವಿರೋಧಿಸಿ ಹೋರಾಟಕ್ಕೆ ಇಳಿಯುತ್ತಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಹೋಟೆಲ್ ಮೇಲೆ ದಾಳಿ: ಬಾಲ ಕಾರ್ಮಿಕನನ್ನು ರಕ್ಷಿಸಿ ಶಾಲೆಗೆ ಸೇರಿಸಿದ ಅಧಿಕಾರಿಗಳು

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಮೋಹನ್ ಕುಮಾರ್, ಮಾಜಿ ಗ್ರಾ ಪಂ ಅಧ್ಯಕ್ಷ ನವೀನ್, ರವಿಗೌಡ, ನೇತ್ರಾವತಿ ಮಂಜುನಾಥ, ಗೌತಮಪುರ ಗ್ರಾ. ಪಂ. ಸದಸ್ಯ ಪರಮೇಶ್, ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಶಾಂತಕುಮಾರ ಹಾಗೂ ನಾಗರಾಜ ದಾಸಕೊಪ್ಪ ಸೇರಿದಂತೆ ಇತರರು ಇದ್ದರು.

ವರದಿ : ಅಮಿತ್ ಆರ್, ಆನಂದಪುರ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...