ಶಿವಮೊಗ್ಗ | ಸ್ವಾತಂತ್ರ್ಯ ದಿನಾಚರಣೆ; ಬಿಸಿಲಿನ ತಾಪಕ್ಕೆ ಕುಸಿದುಬಿದ್ದ ಮಕ್ಕಳು

Date:

78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣದ ವೇಳೆ ಬಿಸಿಲಿನ ತಾಪಕ್ಕೆ ನಿತ್ರಾಣರಾದ ಮಕ್ಕಳು ಕುಸಿದುಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.

ತೀರ್ಥಹಳ್ಳಿ ಪಟ್ಟಣದ ಯು ಆರ್ ಅನಂತಮೂರ್ತಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ವೇಳೆ ಧ್ವಜಾರೋಹಣ, ಮಕ್ಕಳ ಪಥಸಂಚಲನ ನಡೆದ ಕಾರಣ ಮಕ್ಕಳು ಬಹಳ ಹೊತ್ತು ಬಿಸಿಲಿನಲ್ಲೇ ನಿಂತಿದ್ದರು. ಇದರಿಂದ ಸುಸ್ತಾಗಿ ಮಕ್ಕಳು ಕುಸಿದು ಬಿದ್ದಿದ್ದಾರೆ.

ತಾಲೂಕು ದಂಡಾಧಿಕಾರಿ ಜಕ್ಕಣ್ಣ ಗೌಡರ್ ಭಾಷಣದ ನಂತರದಲ್ಲಿ ಮಕ್ಕಳು ಕುಸಿದು ಬಿದ್ದಿದ್ದಾರೆ. ಬಳಿಕ ಸ್ವಾತಂತ್ರ್ಯ ದಿನಾಚರಣೆ ಕುರಿತು ಭಾಷಣ ಮಾಡಿ ಮುಗಿಸಿದರು. ಬಿಸಿಲಿನ ತಾಪಕ್ಕೆ ಕುಸಿದು ಬಿದ್ದ ಕುವೆಂಪು ಶಾಲೆಯ ವಿದ್ಯಾರ್ಥಿಯೋರ್ವನ ಮೂಗಿನಲ್ಲಿ ರಕ್ತಸ್ರಾವವಾಗಲು ಆರಂಭವಾಗಿತ್ತು. ನಂತರ ಸ್ಥಳದಲ್ಲಿದ್ದ ತಹಶೀಲ್ದಾರ್ ಅವರ ವಾಹನದಲ್ಲಿಯೇ ಆಸ್ಪತ್ರೆಗೆ ಕರೆದೊಯ್ದಿದ್ದು ನಂತರ ವಿದ್ಯಾರ್ಥಿಯನ್ನು ಮನೆಗೆ ಬಿಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಧ್ವಜಸ್ತಂಭದ ಕಟ್ಟೆ

ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಕುವೆಂಪು ಶಾಲೆಗೆ ಸಂಬಂಧಪಟ್ಟ ಶಿಕ್ಷಕರೊಬ್ಬರು, ʼನಿಮಗೆ ಈ ಹುಡುಗನನ್ನು ಕರೆದುಕೊಂಡು ಹೋಗಲು ಹೇಳಿದ್ಯಾರು?ʼ ಎಂದು ಕಂದಾಯ ಇಲಾಖೆ ಅಧಿಕಾರಿಯೊಬ್ಬರಿಗೆ ಏರುಧ್ವನಿಯಲ್ಲಿ ಗದರಿಸಿ ಕೇಳಿದ ಕುವೆಂಪು ಶಾಲೆಯ ಶಿಕ್ಷಕರ ನಡೆಗೆ ತಾಲೂಕು ಕಚೇರಿಯ ವಾಹನ ಚಾಲಕರು ಸೇರಿದಂತೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಕುಸಿದು ಬಿದ್ದ ಮಕ್ಕಳು

78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಧ್ವಜಾರೋಹಣ ಹಬ್ಬದ ವಾತಾವರಣ ಆದರೂ ವೇದಿಕೆಗೆ ಶಾಮಿಯಾನ ಕೂಡ ಹಾಕದಿರುವುದು ಕಂಡುಬಂದಿತು. ಧ್ವಜಾರೋಹಣ ಕಟ್ಟೆಗೆ ಸುಣ್ಣ ಬಣ್ಣ ಕಾಣದಿದ್ದರೂ ಕೂಡ ಮಳೆಯಲ್ಲಿ ಪಾಚಿ ಕಟ್ಟಿದ ಸ್ಥಿತಿಯಲ್ಲಿತ್ತು. ಕೊನೆಪಕ್ಷ ಧ್ವಜದ ಕಟ್ಟೆಯನ್ನಾದರೂ ತಿಕ್ಕಿ ತೊಳೆಯಬಹುದಿತ್ತಲ್ವೇ? ಎಂದು ಸ್ಥಳದಲ್ಲಿ ಹಾಜರಿದ್ದ ಆನೇಕ ಸಾರ್ವಜನಿಕರಿಂದ ಮಾತುಗಳು ಕೇಳಿಬರುತ್ತಿದ್ದವು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಭವ್ಯ ಭಾರತದ ಪ್ರಜೆಗಳಾಗಿರುವುದು ನಮ್ಮ ಹೆಮ್ಮೆ: ಜಕ್ಕಣ್ಣಗೌಡರ್‌

ಧ್ವಜಾರೋಹಣ ನೆರವೇರಿಸಿ ನಂತರದ ಸಭಾ ಕಾರ್ಯಕ್ರಮ ಯು ಆರ್ ಅನಂತಮೂರ್ತಿ ಪ್ರೌಢಶಾಲೆಯ ಒಳಗಿರುವ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಆದರೆ ಕೊನೆ ಘಳಿಗೆಯಲ್ಲಿ ವೇದಿಕೆ ಕಾರ್ಯಕ್ರಮ ಪ್ರೌಢಶಾಲೆ ಕ್ರೀಡಾಂಗಣದಲ್ಲೇ ನಡೆಸುವಂತೆ ಬದಲಾವಣೆ ಅಗಿದ್ದರಿಂದ ಅಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕೂಡ ಸರಿಯಿರಲಿಲ್ಲದಿರುವುನ್ನು ಗಮನಿಸಿ, ʼತುಂಗಾನದಿ ಪಕ್ಕದಲ್ಲಿ ಇದ್ದು, ನೀರಿಗೂ ಬರ ಬಂತೇʼ ಎಂದು ಪೋಷಕರು ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮ ಆಯೋಜಕರಿಗೆ ಹಿಡಿಶಾಪ ಹಾಕುತ್ತ ಧ್ವಜದ ಕಂಬಕ್ಕೆ ಸ್ವಾತಂತ್ರ್ಯ ಸಿಕ್ಕರೂ ಧ್ವಜದ ಕಟ್ಟೆಗೆ ಸ್ವಾತಂತ್ರ್ಯ ಸಿಗಲಿಲ್ವಾ?ʼ ಎಂದು ಸ್ಥಳದಲ್ಲಿದ್ದ ಸಾರ್ವಜನಿಕರು ಗುನುಗುತ್ತಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...