ಶಿವಮೊಗ್ಗ | ರೈತರೊಂದಿಗೆ ಅಧಿಕಾರಿಗಳ ಅಮಾನವೀಯ ವರ್ತನೆ ಸಹಿಸಲ್ಲ: ಸಚಿವ ಮಧುಬಂಗಾರಪ್ಪ

Date:

“ರೈತ ವಿರೋಧಿಯಾಗಿ ಕಾರ್ಯನಿರ್ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಅನಿವಾರ್ಯ. ಆದ್ದರಿಂದ, ಮಾನವೀಯ ನೆಲೆಯಲ್ಲಿ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕೆಲಸ ಮಾಡಬೇಕು” ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧುಬಂಗಾರಪ್ಪ ಎಚ್ಚರಿಸಿದರು.

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕಚೇರಿ ಆವರಣದಲ್ಲಿ ಆಯೋಜಿಸಿಲಾದ ಬಗರ್‌ ಹುಕುಂ ಅಕ್ರಮ-ಸಕ್ರಮ ಸಮಿತಿ, ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಅರಣ್ಯ ರಕ್ಷಕರು ಹಾಗೂ ವನ ಪಾಲಕರ ಅಮಾನವೀಯ ವರ್ತನೆ ಅಕ್ಷ್ಯಮ್ಯ ಅಪರಾಧ. ಅನೇಕ ವರ್ಷದಿಂದ ಕಾನು, ಸೊಪ್ಪಿನ ಬೆಟ್ಟ, ಹುಲ್ಲುಜಾಡು, ಈ ಪ್ರದೇಶಗಳಲ್ಲಿ ಕೃಷಿ ಮಾಡಿಕೊಂಡು ಬಂದಿರುವ ರೈತರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಒಕ್ಕಲೆಬ್ಬಿಸುವ ಕಾರ್ಯ ಮಾಡುತ್ತಿದ್ದಾರೆ. ಈ ರೀತಿಯ ವರ್ತನೆ ಸರಿಯಲ್ಲ” ಎಂದರು.

“ಅರಣ್ಯ ಭೂಮಿ ವಿಚಾರವಾಗಿ ನ್ಯಾಯಲಯದ ಹಂತದಲ್ಲಿ ತನಿಖೆ ನಡೆಯುತ್ತಿದೆ. ಆದ್ದರಿಂದ, ಅರಣ್ಯ ಅಧಿಕಾರಿಗಳು ಎಚ್ಚರಿಕೆಯ ಹೆಜ್ಜೆ ಇಡಬೇಕು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ರೈತರನ್ನು ಏಕಾ ಏಕಿ ಒಕ್ಕಲೆಬ್ಬಿಸುವ ಕ್ರಮದಿಂದ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಾರೆ. ಆದ್ದರಿಂದ ಅಧಿಕಾರಿಗಳು ತಾಳ್ಮೆಯ ಗುಣ ಬೆಳೆಸಿಕೊಳ್ಳಬೇಕು” ಎಂದು ತಾಕೀತು ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮನೆ ಮೇಲೆ ಗುಡ್ಡ ಕುಸಿದು ಅಪಾರ ಹಾನಿ: ಮನೆಮಂದಿ ಪ್ರಾಣಾಪಾಯದಿಂದ ಪಾರು

“ಅರಣ್ಯ ಮತ್ತು ಕಂದಾಯ ಭೂಮಿಗೆ ಸಂಬಂಧಪಟ್ಟಂತೆ ಅನೇಕ ವರ್ಷದಿಂದ ಸಮಸ್ಯೆಗಳು ಜೀವಂತವಾಗಿವೆ. ಈ ಎಲ್ಲ ತೊಡಕುಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುವುದು. ಬಗರ್‌ ಹುಕುಂ ಸಮಿತಿಗೆ ಸಲ್ಲಿಸಿರುವ ಸಾಕಷ್ಟು ಅರ್ಜಿಗಳನ್ನು ಈ ಹಿಂದೆ ತಿರಸ್ಕರಿಸಲಾಗಿದೆ. ಇದರಿಂದ, ಪಾರಂಪರಿಕವಾಗಿ ಸಾಗುವಳಿ ಮಾಡಿಕೊಂಡು ಬಂದ ಕುಟುಂಬಗಳಿಗೆ ತೊಂದರೆ ಆಗಲಿದೆ. ರೈತರಿಂದ ಪುನಃ ದೂರುಗಳನ್ನು ಪಡೆದು ಕಾನೂನಿನ ಪ್ರಕಾರ ಪರಿಶೀಲಿಸಿ ನಿರ್ಣಯ ತೆಗೆದುಕೊಳ್ಳಬೇಕು” ಎಂದು ಸೂಚಿಸಿದರು.

ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ಯತೀಶ್, ತಾಲ್ಲೂಕು ಇ.ಒ ಪ್ರದೀಪ್ ಕುಮಾರ್, ತಹಶೀಲ್ದಾರ್ ಮಂಜುಳಾ, ಡಿಎಫ್ಒ ಮೋಹನ್ ಕುಮಾರ್ ಡಿ, ಆಎಫ್ಒ ಶಬುಬ್ತಾ ಶೇಖ್,ಪರುಶುರಾಮ, ಜಾವೀದ್ ಅಹ್ಮದ್, ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಂ.ಡಿ ಶೇಖರ್ ಸೇರಿದಂತೆ ಬಗರ್ ಹುಕುಂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...