ಶಿವಮೊಗ್ಗ, ಶಂಕರಘಟ್ಟ, ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಅನನ್ಯವಾದ ಇತಿಹಾಸ, ಪರಂಪರೆ ಇದೆ. ಇಪ್ಪತ್ತನೇ ಶತಮಾನದಲ್ಲಿ ಕನ್ನಡ ವೈಚಾರಿಕತೆ ಮತ್ತು ವೈಜ್ಷಾನಿಕ ಕ್ಷೇತ್ರದಲ್ಲಿ ಮೊದಲನೇ ಸ್ಥಾನ ಗಳಿಸಿದೆ ಕುವೆಂಪು ವಿವಿ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಅಭಿಪ್ರಾಯಪಟ್ಟರು.
ಕುವೆಂಪು ವಿಶ್ವವಿದ್ಯಾಲಯದ ಹಿರೇಮಠ ಸಭಾಂಗಣದಲ್ಲಿ ಇಂದು ಏರ್ಪಡಿಸಿದ್ದ ೭೦ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾನಾಡಿದರು.ಕನ್ನಡದ ನೆಲ ಜಲ ಭಾಷೆಗಾಗಿ ಅನೇಕ ಮಹನೀಯರು ಶ್ರಮಿಸಿದ್ದಾರೆ.
ಶ್ರೀಸಾಮಾನ್ಯರಿಂದ ಮೊದಲುಗೊಂಡು ರಾಜಮಹಾರಾಜರು, ಕವಿಗಳು, ಸಂಸ್ಕೃತಿ ಚಿಂತಕರು, ಸುಧಾರಕರು, ವಿಜ್ಞಾನಿಗಳನ್ನು ಸ್ಮರಿಸುವ ಮೂಲಕ ಕನ್ನಡವನ್ನು ಇನ್ನಷ್ಟು ಸದೃಢವಾಗಿ ಬಳಸಬೇಕಿದೆ. ಇಲ್ಲಿನ ಸಾಂಸ್ಕೃತಿಕ, ಧಾರ್ಮಿಕ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಆಧ್ಯಾತ್ಮಿಕ ಕ್ಷೇತ್ರಗಳ ಸಾಧನೆಗಳಿಂದ ಕರ್ನಾಟಕ ವಿಶಿಷ್ಟ ಸ್ಥಾನ ಪಡೆದಿದೆ ಎಂದು ಅವರು ಅಭಿಪ್ರಾಯಪಟ್ಟರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪರೀಕ್ಷಾಂಗ ಕುಲಸಚಿವರಾದ ಪ್ರೊ. ಆರ್. ತಿಮ್ಮರಾಯಪ್ಪನವರು ಮಾತಾನಾಡಿ, ಭಾರತದ ಪ್ರಾದೇಶಿಕ ಭಾಷೆಗಳಲ್ಲಿ ಕನ್ನಡ ಎರಡನೇ ಸ್ಥಾನ ಪಡೆದಿದೆ. ವಿಶ್ವವಿದ್ಯಾಲಯದ ಪ್ರಾಧ್ಯಾಪಕರುಗಳಾದ ಕುವೆಂಪು, ವಿ.ಕೃ. ಗೋಕಾಕ್, ಚಂದ್ರಶೇಖರ ಕಂಬಾರ, ಅನಂತಮೂರ್ತಿ ಮೂದಲಾದವರು ಕನ್ನಡ ನಾಡು ನುಡಿ ಬೆಳಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಮಾತೃ ಭಾಷೆ ಬಗ್ಗೆ ಆಸಕ್ತಿ ಇರಬೇಕು. ಮುಂದಿನ ಪೀಳಿಗೆೆಯು ಕನ್ನಡ ಭಾಷೆಯನ್ನ ಶ್ರೀಮಂತಗೊಳಿಸುವಂತಾಗಬೇಕು ಎಂದರು.
ಕನ್ನಡ ನಾಡು ನುಡಿಯ ವೈಶಿಷ್ಟತೆಯನ್ನು ಕುರಿತು ಹಿರಿಯ ಪ್ರಾಧ್ಯಾಪಕರಾದ ಪ್ರೊ. ಜಿ. ಪ್ರಶಾಂತ ನಾಯಕ ಅವರು ಮಾತನಾಡಿದರು. ಕನ್ನಡ ಭಾರತಿ ನಿರ್ದೇಶಕರಾದ ಪ್ರೊ. ನೆಲ್ಲಿಕಟ್ಟೆ ಎಸ್. ಸಿದ್ದೇಶ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.
ರೀಯಾ ಆಯೇಷಾ ಮತ್ತು ತಂಡ ನಾಡಗೀತೆಯನ್ನು ಹಾಡಿದರು. ಶ್ರೀಧರ ಸ್ವಾಗತಿಸಿದರು, ರಘು ವಂದಿಸಿದರು. ಶಿಲ್ಪಕಲಾ ನಿರೂಪಿಸಿದರು. ಅಧ್ಯಾಪಕರು ಮತ್ತು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.





