ಶಿವಮೊಗ್ಗ | ಕನ್ನಡ ಭಾಷೆಗೆ ವಿಶಿಷ್ಟವಾದ ಸ್ಥಾನವಿದೆ : ಪ್ರೊ. ಶರತ್ ಅನಂತಮೂರ್ತಿ

Date:

ಶಿವಮೊಗ್ಗ, ಶಂಕರಘಟ್ಟ, ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಅನನ್ಯವಾದ ಇತಿಹಾಸ, ಪರಂಪರೆ ಇದೆ. ಇಪ್ಪತ್ತನೇ ಶತಮಾನದಲ್ಲಿ ಕನ್ನಡ ವೈಚಾರಿಕತೆ ಮತ್ತು ವೈಜ್ಷಾನಿಕ ಕ್ಷೇತ್ರದಲ್ಲಿ ಮೊದಲನೇ ಸ್ಥಾನ ಗಳಿಸಿದೆ ಕುವೆಂಪು ವಿವಿ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದ ಹಿರೇಮಠ ಸಭಾಂಗಣದಲ್ಲಿ ಇಂದು ಏರ್ಪಡಿಸಿದ್ದ ೭೦ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾನಾಡಿದರು.ಕನ್ನಡದ ನೆಲ ಜಲ ಭಾಷೆಗಾಗಿ ಅನೇಕ ಮಹನೀಯರು ಶ್ರಮಿಸಿದ್ದಾರೆ.

ಶ್ರೀಸಾಮಾನ್ಯರಿಂದ ಮೊದಲುಗೊಂಡು ರಾಜಮಹಾರಾಜರು, ಕವಿಗಳು, ಸಂಸ್ಕೃತಿ ಚಿಂತಕರು, ಸುಧಾರಕರು, ವಿಜ್ಞಾನಿಗಳನ್ನು ಸ್ಮರಿಸುವ ಮೂಲಕ ಕನ್ನಡವನ್ನು ಇನ್ನಷ್ಟು ಸದೃಢವಾಗಿ ಬಳಸಬೇಕಿದೆ. ಇಲ್ಲಿನ ಸಾಂಸ್ಕೃತಿಕ, ಧಾರ್ಮಿಕ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಆಧ್ಯಾತ್ಮಿಕ ಕ್ಷೇತ್ರಗಳ ಸಾಧನೆಗಳಿಂದ ಕರ್ನಾಟಕ ವಿಶಿಷ್ಟ ಸ್ಥಾನ ಪಡೆದಿದೆ ಎಂದು ಅವರು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪರೀಕ್ಷಾಂಗ ಕುಲಸಚಿವರಾದ ಪ್ರೊ. ಆರ್. ತಿಮ್ಮರಾಯಪ್ಪನವರು ಮಾತಾನಾಡಿ, ಭಾರತದ ಪ್ರಾದೇಶಿಕ ಭಾಷೆಗಳಲ್ಲಿ ಕನ್ನಡ ಎರಡನೇ ಸ್ಥಾನ ಪಡೆದಿದೆ. ವಿಶ್ವವಿದ್ಯಾಲಯದ ಪ್ರಾಧ್ಯಾಪಕರುಗಳಾದ ಕುವೆಂಪು, ವಿ.ಕೃ. ಗೋಕಾಕ್, ಚಂದ್ರಶೇಖರ ಕಂಬಾರ, ಅನಂತಮೂರ್ತಿ ಮೂದಲಾದವರು ಕನ್ನಡ ನಾಡು ನುಡಿ ಬೆಳಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಮಾತೃ ಭಾಷೆ ಬಗ್ಗೆ ಆಸಕ್ತಿ ಇರಬೇಕು. ಮುಂದಿನ ಪೀಳಿಗೆೆಯು ಕನ್ನಡ ಭಾಷೆಯನ್ನ ಶ್ರೀಮಂತಗೊಳಿಸುವಂತಾಗಬೇಕು ಎಂದರು.

ಕನ್ನಡ ನಾಡು ನುಡಿಯ ವೈಶಿಷ್ಟತೆಯನ್ನು ಕುರಿತು ಹಿರಿಯ ಪ್ರಾಧ್ಯಾಪಕರಾದ ಪ್ರೊ. ಜಿ. ಪ್ರಶಾಂತ ನಾಯಕ ಅವರು ಮಾತನಾಡಿದರು. ಕನ್ನಡ ಭಾರತಿ ನಿರ್ದೇಶಕರಾದ ಪ್ರೊ. ನೆಲ್ಲಿಕಟ್ಟೆ ಎಸ್. ಸಿದ್ದೇಶ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.

ರೀಯಾ ಆಯೇಷಾ ಮತ್ತು ತಂಡ ನಾಡಗೀತೆಯನ್ನು ಹಾಡಿದರು. ಶ್ರೀಧರ ಸ್ವಾಗತಿಸಿದರು, ರಘು ವಂದಿಸಿದರು. ಶಿಲ್ಪಕಲಾ ನಿರೂಪಿಸಿದರು. ಅಧ್ಯಾಪಕರು ಮತ್ತು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...