ಶಿವಮೊಗ್ಗ | ಶಾಸಕ ಚೆನ್ನಿ, ನೀವೆಷ್ಟು ಗೋಶಾಲೆಗಳಿಗೆ ಅನುದಾನ ನೀಡಿದ್ದೀರೆಂದು ಗಂಡಸ್ತನದಿಂದ ಹೇಳಿ: ಎಚ್‌ ಸಿ ಯೋಗೇಶ್

Date:

ಶಿವಮೊಗ್ಗ ಶಾಸಕ ಚನ್ನಬಸಪ್ಪನವರ ಹೇಳಿಕೆ ಗಮನಿಸಿದ್ದೇನೆ. ಯಾರೇ ಈ ಕೃತ್ಯ ಮಾಡಿದರೂ ಅಮಾನವೀಯ, ಖಂಡನೀಯ. ಹಸುವು ಗೋಮಾತೆ ಎಂಬುದರಲ್ಲಿ ಅನುಮಾನವಿಲ್ಲ. ಆದರೆ ಶಾಸಕ ಚೆನ್ನಿಯವರೆ ನೀವೆಷ್ಟು ಗೋಶಾಲೆಗಳಿಗೆ ಅನುದಾನ ಕೊಟ್ಟಿದ್ದೀರೆಂದು ಗಂಡಸ್ತನದಿಂದ ಹೇಳಿ ಎಂದು ಎಚ್‌ ಸಿ ಯೋಗೇಶ್ ಸವಾಲು ಹಾಕಿದರು.

ಶಿವಮೊಗ್ಗದಲ್ಲಿ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ, ಚಾಮರಾಜಪೇಟೆ ಪ್ರಕರಣದ ಕುರಿತು ಶಾಸಕ ಚನ್ನಬಸಪ್ಪನವರ ಹೇಳಿಕೆಗೆ ತಿರುಗೇಟು ನೀಡಿ ಮಾತಾಡಿದರು.

“ಪಶು ಇಲಾಖೆಯಿಂದ ಕಾರ್ಯಕ್ರಮಗಳು ನಡೆಯುತ್ತಲೇ ಇವೆ. ಸರ್ಕಾರದಿಂದ 30 ಅಂಶದ ಕಾರ್ಯಕ್ರಮಗಳೂ ನಡೆಯುತ್ತಿವೆ. ಶಾಸಕ ಚೆನ್ನಿಯವರೇ, ಪಶು ಇಲಾಖೆಯ ರಿವ್ಯೂ ಮೀಟಿಂಗ್ ಎಷ್ಟು ಮಾಡಿದ್ದೀರಿ?. ಇದನ್ನು ನೀವು ಹೇಳಲೇಬೇಕು” ಎಂದು ತಾಕೀತು ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಿವಮೊಗ್ಗ ಪಾಲಿಕೆಯಿಂದ ಗೋಶಾಲೆಗೆ ₹50 ಲಕ್ಷ ಅನುದಾನ ಇಟ್ಟಿದ್ದು ನೆನಪಿಲ್ಲವೇ? ಶಾಂತಿನಗರದಲ್ಲಿ ಗುದ್ದಲಿಪೂಜೆ ಮಾಡಿದ್ದೀರಿ. ಗೋಶಾಲೆ ಆಗಿದೆಯಾ? ಪ್ರಪ್ರಥಮ ಗೋಶಾಲೆಗೆ ಜಾಗಕೊಟ್ಟಿದ್ದು, ಕಾಂಗ್ರೆಸ್‌ ಶಾಸಕ ಎಚ್‌ಎಂಸಿ, ಮತ್ತು ಕೆ ಬಿ ಪ್ರಸನ್ನ ಕುಮಾ‌ರ್ ಅನುದಾನ ನೀಡಿದ್ದಾರೆ” ಎಂದರು.

“ಈಶ್ವರಪ್ಪ, ಚೆನ್ನಿ ಎಷ್ಟು ಗೋಶಾಲೆಗಳಿಗೆ ಅವಕಾಶ ಕೊಟ್ಟಿದ್ದೀರಿ? ಹೊಸನಗರದ ಸರ್ಕಾರಿ ಗೋಶಾಲೆ ಮುಚ್ಚಿದೆ. ಈ ಶಾಲೆ ನಿರ್ಮಾಣವಾಗಿದ್ದು ಬಿಜೆಪಿ ಶಾಸಕ ಹರತಾಳು ಹಾಲಪ್ಪ ಕಾಲದಲ್ಲಿ. ಆದರೂ ಯಾಕೆ ಮುಚ್ಚಿದೆ? ಹಸುವಿನ ಹೆಸರಲ್ಲಿ ಮತ ಎತ್ತೋದಷ್ಟೇನಾ?” ಎಂದು ಕಿಡಿಕಾರಿದರು.

“ಸರ್ಕಾರದ ವಿರುದ್ಧ ಮಾತನಾಡುತ್ತ ಕೆಟ್ಟದಾಗಿ ಮಾತನಾಡಿದ್ದಾರೆ ಶಾಸಕ ಚೆನ್ನಿ. 2 ಕೋಟಿ ಉದ್ಯೋಗ, ಜನಸಾಮಾನ್ಯರ ಖಾತೆಗೆ ₹15 ಲಕ್ಷ ಸೇರಿದಂತೆ ಹಲವು ಭರವಸೆ ಕೊಟ್ಟು ನಿಭಾಯಿಸದ ನಿಮ್ಮ ಪ್ರಧಾನಿ ಅಥವಾ ಬಿಜೆಪಿಗರು ಗಂಡಸರೇ? ಎಂದು ಪ್ರಶ್ನಿಸಿದ್ದಾರೆ.

YOGESH CONG 1

“ಆಕಳ ಕೆಚ್ಚಲು ಪ್ರಕರಣದ ಆರೋಪಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ. ಆತ ಹುಚ್ಚನೇ ಇರಲಿ, ಸಾಯುವವರೆಗೆ ಜೈಲಲ್ಲಿ ಹಾಕಿ” ಎಂದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ಸಾರ್ವಜನಿಕರಿಗೆ ಬೆದರಿಕೆ; ಮೂವರ ವಿರುದ್ಧ ಎಫ್‌ಐಆರ್ ದಾಖಲು

“ಇ-ಸ್ವತ್ತು ವಿಚಾರವಾಗಿ ಪ್ರತಿದಿನ ಪರಿಶೀಲನೆ ಮಾಡಿ. ಎಲ್ಲದಕ್ಕೂ ಇ-ಸ್ವತ್ತು ಅನಿವಾರ್ಯವಾಗಿದೆ. ಸಮಸ್ಯೆ ಕುರಿತು ಸಚಿವರ ಗಮನಕ್ಕೂ ತಂದಿದ್ದೇನೆ. ಆರೋಪಿತ ಅಧಿಕಾರಿಗಳನ್ನು ಬದಲಾಯಿಸಲಾಗಿದೆ. ಕಾರ್ಪೊರೇಷನ್‌ ಇನ್ನೂ ದೊಡ್ಡದಾಗಲಿದೆ. ಕಾರ್ಪೊರೇಷನ್ ನಿರ್ಮಾಣವಾಗಿದ್ದೇ ಕಾಂಗ್ರೆಸ್‌ ಕಾಲದಲ್ಲಿ” ಎಂದು ತಿಳಿಸಿದರು.

ಶಿವಕುಮಾ‌ರ್, ವಿಶ್ವನಾಥ ಕಾಶಿ, ವಿಜಯಲಕ್ಷ್ಮಿ ಪಾಟೀಲ್‌, ಮಧುಸೂದನ್ ಬಾಲಾಜಿ, ಎಸ್ ಪಿ ಶೇಷಾದ್ರಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...