ಶಿವಮೊಗ್ಗ | ಕೊಲೆ ಪ್ರಕರಣ; ಎಂಟು ಮಂದಿಗೆ ಜೀವಾವಧಿ ಶಿಕ್ಷೆ

Date:

2021ರಲ್ಲಿ ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಾಂಜಾ ಪೆಡ್ಲರ್‌ ಟ್ವಿಸ್ಟ್ ಕೊಲೆ ಪ್ರಕರಣದ ಎಂಟು ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಗಾಂಜಾ ಮಾಹಿತಿಯನ್ನು ಪೊಲೀಸರಿಗೆ ನೀಡುತ್ತಾನೆಂಬ ಕಾರಣಕ್ಕೆ 2021ರ ಸಮಯದಲ್ಲಿ ಟ್ವಿಸ್ಟ್ ಇರ್ಫಾನ್ ಎಂಬಾತನನ್ನು ಕೊಲೆ ಮಾಡಲಾಗಿತ್ತು. ಶಿವಮೊಗ್ಗದ ತುಂಗಾನಗರ ಠಾಣೆಯ ಇನ್ಸ್‌ಪೆಕ್ಟರ್‌ ದೀಪಕ್ ಹೆಗ್ಡೆಯವರು ಈ ಪ್ರಕರಣದ ತನಿಖೆಗೆ ಕೈಗೊಂಡು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಹೆಚ್ಚುವರಿ 2ನೇ ಜಿಲ್ಲಾ ನ್ಯಾಯಾಲಯ ಎಂಟು ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಆರೋಪಿಗಳ ಪೈಕಿ ಒಬ್ಬಾತ ಕೊಲೆಯಾಗಿದ್ದು, ಈ ಕೊಲೆ ಪ್ರಕರಣವನ್ನೂ ಕೂಡಾ ಶಿವಮೊಗ್ಗದ ತುಂಗಾ ನಗರ ಇನ್ಸ್‌ಪೆಕ್ಟರ್‌ ದೀಪಕ್ ಹೆಗಡೆ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದರು. ಎರಡನೇ ಹೆಚ್ಚುವರಿ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶೆ ಪಲ್ಲವಿ ಅವರು ತೀರು ನೀಡಿ ಅದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕರಾಗಿ ಪುಷ್ಪಾರವರು ಸಾಕ್ಷಿಗಳ ವಿಚಾರಣೆ ನಡೆಸಿ ವಾದ ಮಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧಾರವಾಡ | ಕುಂದಗೋಳ ತಾಲೂಕಿನಲ್ಲಿ ಸಮಸ್ಯೆಗಳದ್ದೇ ಕಾರುಬಾರು; ಕ್ಯಾರೇ ಎನ್ನದ ಅಧಿಕಾರಿಗಳು!

ಆರೋಪಿಗಳಾದ ಲತೀಫ್, ಪರ್ವೇಜ್, ಸಯಾದ್ ಜಿಲಾನ್ ,ಜಾಫರ್ ಸಾಧಿಕ್, ಸೈಯದ್, ರಾಜೇಶ್, ಮಹಮದ್ ಶಬಾಜ್, ಶಾಬೀರ್, ಮಹಮದ್ ಯೂಸುಫ್ ತಂಡ ಇರ್ಫಾನನ್ನು ಮರಾಕಾಸ್ತ್ರದಿಂದ ಕೊಲೆ ಮಾಡಿದ್ದರು. ತುಂಗಾ ನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ ದೀಪಕ್ ಹೆಗಡೆಯವರು ತುಂಗಾನಗರ ಠಾಣೆಯಲ್ಲಿ ಸೇವೆ ಸಲ್ಲಿಸಿದಾಗ ವಿವಿಧ ಕೊಲೆ ಪ್ರಕರಣ ಸೇರಿದಂತೆ ತನಿಖೆ ನಡೆಸಿದ ಮೂರು ಪ್ರಕರಣಗಳಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯಾಗಿದ್ದು, ಸದರಿ ಟ್ವಿಸ್ಟ್ ಇರ್ಫಾನ್ ಪ್ರಕರಣದಲ್ಲಿ ಎಂಟು ಮಂದಿಗೆ, ಉಳಿದ ಎರಡು ಪ್ರಕರಣದಲ್ಲಿ ತಲಾ ನಾಲ್ಕು ಮತ್ತು ಇನ್ನೆರೆಡು ಕೊಲೆ ಆರೋಪಿಗಳಿಗೂ ಜೀವಾವಧಿ ಶಿಕ್ಷೆಯಾಗಿದೆ ಎನ್ನಲಾಗಿದೆ.

ವರದಿ : ಲಿಯೋ ಅರೋಜ, ಪತ್ರಕರ್ತರು ತೀರ್ಥಹಳ್ಳಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...