ಶಿವಮೊಗ್ಗ | ಜನರ ಸಮೃದ್ಧಿಯೇ ನಿತ್ಯ ನವರಾತ್ರಿ: ಸಚಿವ ಮಧುಬಂಗಾರಪ್ಪ ಆಶಯ

Date:

ಕಲಿಯುವ ಮಕ್ಕಳಿಗೆ ಉತ್ತಮ ವಿದ್ಯೆ, ಯೋಗ್ಯ ಸಂಸ್ಕಾರ, ರೈತರು ಉಳುವ ಭೂಮಿಗೆ ಹಕ್ಕುಪತ್ರ, ನೀರಾವರಿ ಮತ್ತು ಉತ್ತಮ ಬೆಳೆ ಬಂದರೆ ನಿತ್ಯವೂ ನವರಾತ್ರಿ ಸಂಭ್ರಮ ಮನೆಮಾಡುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶ್ರೀಕ್ಷೇತ್ರ ಸಿಗಂದೂರು ಚೌಡಮ್ಮ ದೇಗುಲದಲ್ಲಿ ದಸರಾ ವೈಭವ ಕಾರ್ಯಕ್ರಮಕ್ಕೆ ಚೆಂಡೆ ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

“ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದರಿಂದ ನವರಾತ್ರಿಯ ಸಂಭ್ರಮ ಇಮ್ಮಡಿಯಾಗಿದೆ. ರಾಜ್ಯ ಸರ್ಕಾರ ಸಂವಿಧಾನ ಓದು ಕಾರ್ಯಕ್ರಮವನ್ನು ಜಾರಿಗೆ ತಂದಿರುವುದರಿಂದ ಮಕ್ಕಳಲ್ಲಿ ಸಂವಿಧಾನದ ಅರಿವು, ಜಾತ್ಯತೀತ ಮನೋಭಾವ ಹೆಚ್ಚಾಗುತ್ತದೆ. ಮಕ್ಕಳನ್ನು ಜಾತಿ-ಧರ್ಮದ ತಾರತಮ್ಯದಿಂದ ದೂರ ಮಾಡುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಕ್ಕಳಲ್ಲಿ ಜಾತಿ ಪ್ರೇಮ ಮೂಡಬಾರದು. ಇದು ಎಂದಿಗೂ ದೇಶ ಪ್ರೇಮವಾಗುವುದಿಲ್ಲ. ಜಾತಿ- ಧರ್ಮದ ಸಂಕೋಲೆ ತೊರೆದು ಒಳ್ಳೆಯ ಪ್ರಜೆಯಾಗಬೇಕು ಎಂದರೆ, ಡಾ. ಬಿ ಆರ್ ಅಂಬೇಡ್ಕರ್‌ ಅವರು ಕೊಟ್ಟ ಸಂವಿಧಾನದಿಂದ ಮಾತ್ರ ಸಾಧ್ಯ. ಒಂದೇ ಜಾತಿ, ಒಂದೇ ಮತವೆಂಬ ನಾರಾಯಣ ಗುರುಗಳ ಆಶಯವನ್ನು ವೇದಿಕೆ ಮೇಲೆ ಭಾಷಣ ಮಾಡಲಾಗುತ್ತದೆ. ಆದರೆ, ರಾಜಕಾರಣಕ್ಕೆ ಹೋಗಿ ಜಾತಿ, ಧರ್ಮದ ಹೆಸರಿನಲ್ಲಿ ಕಚ್ಚಾಡಿದರೆ, ದೇಶದ ಭವಿಷ್ಯ ಕಟ್ಟಲು ಸಾಧ್ಯವಿಲ್ಲ” ಎಂದರು.

ನಾಡಿನ ಅಸಂಖ್ಯಾತ ಭಕ್ತರ ಶ್ರದ್ಧಾ ಕೇಂದ್ರ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಸಮಷ್ಟಿಯ ದೃಷ್ಟಿಕೋನವನ್ನು ಹೊಂದಿದೆ. ಧರ್ಮದರ್ಶಿ ರಾಮಪ್ಪ ಅವರು ಅನೇಕ ಸಾಮಾಜಿಕ ಕಾರ್ಯಗಳಿಗೆ ಜೀವ ತುಂಬಿದ್ದಾರೆ. ಅದೇ ರೀತಿ, ಶಿಕ್ಷಣ ಕ್ಷೇತ್ರಕ್ಕೂ ಅಪಾರ ಕೊಡುಗೆ ನೀಡಿದ್ದಾರೆ. ಆದ್ದರಿಂದ, ಮುಂದಿನ ದಿನದಲ್ಲೂ ಈ ಸಹಕಾರ ಶಿಕ್ಷಣ ಕ್ಷೇತ್ರಕ್ಕೆ ಇರಲಿ”‌ ಎಂದು ಕೋರಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಗಾಂಧೀಜಿ ಪ್ರತಿಪಾದಿಸಿದ ಅಭಿವೃದ್ಧಿ ಮಾದರಿ ವಿಕಸಿತ ಭಾರತದ ಗುರಿ ಸಾಧಿಸಲು ಸಾಧ್ಯ: ಕುಲಪತಿ ಬಿ ಕೆ ತುಳಸಿಮಾಲ

ಸಿಗಂದೂರು ಕ್ಷೇತ್ರದ ಧರ್ಮದರ್ಶಿ ರಾಮಪ್ಪ ಮಾತನಾಡಿ, “ಚೌಡೇಶ್ವರಿ ದೇವಿಯ ಅನುಗ್ರಹದಿಂದ ಉತ್ತಮ ಮಳೆ-ಬೆಳೆ ಆಗಿದೆ. ಇಲ್ಲಿ ದಸರಾ ಹಬ್ಬವನ್ನು 34 ವರ್ಷದಿಂದ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಶ್ರೀ ಕ್ಷೇತ್ರದಿಂದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿಕೊಂಡು ಬರಲಾಗುತ್ತಿದೆ. ಇಲ್ಲಿ ದಶಕಗಳಿಂದ ಬಗೆಹರಿಯದ ಹತ್ತಾರು ಸಮಸ್ಯೆಗಳು ಜೀವಂತವಾಗಿವೆ. ಈ ಎಲ್ಲ ಸಮಸ್ಯೆಗಳಿಗೆ ಸರ್ಕಾರ ಮುಕ್ತಿ ಕೊಡಿಸಬೇಕು. ಮುಳುಗಡೆ ರೈತರು ಹಾಗೂ ಬಗರ್‌ ಹುಕುಂ ಸಾಗುವಳಿ ಸಮಸ್ಯೆಗೆ ಪರಿಹಾರ ಒದಗಿಸಬೇಕು. 75 ವರ್ಷಗಳ ದಾಖಲೆ ಕೇಳಿದರೆ ಮುಳುಗಡೆ ಸಂತ್ರಸ್ತರಿಗೆ ಕೊಡಲಾಗುವುದಿಲ್ಲ ಈ ಬಗ್ಗೆ ಸರ್ಕಾರ ಗಮನ ಹರಿಸಬೇ‌ಕು” ಎಂದು ಹೇಳಿದರು.

ಪ್ರಮುಖರಾದ ಆರ್ ಪ್ರಸನ್ನ ಕುಮಾರ, ಕಲಗೋಡು ರತ್ನಾಕರ, ಶ್ರೀನಿವಾಸ ಕರಿಯಣ್ಣ, ಶಾಂತವೀರ ನಾಯ್ಕ, ಹೊಳಿಯಪ್ಪ, ಸರಸ್ವತಿ ಗಣಪತಿ, ಮಂಜಪ್ಪ ಮರಸ, ಯೋಗರಾಜ್‌ ಯಮಗಳಲತೆ ಸೇರಿದಂತೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...