ಶಿವಮೊಗ್ಗ | ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಪತ್ರಿಕಾ ವಿತರಕರು

Date:

ಪತ್ರಿಕಾ ವಿತರಕರ ಸಮಸ್ಯೆಗಳನ್ನು ಬಗೆಹರಿಸುತ್ತಿರುವ ಕಾಂಗ್ರೆಸ್‌ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕ ಧನ್ಯವಾದ ತಿಳಿಸಿದೆ.

ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟವು ಕಳೆದ ಐದು ವರ್ಷಗಳಿಂದ ಅಸಂಘಟಿತ ಕಾರ್ಮಿಕ ವಲಯದಲ್ಲಿ ಪತ್ರಿಕಾ ವಿತರಕರಿಗಾಗಿ 5 ಲಕ್ಷದ ಅಪಘಾತ ವಿಮಾ ಯೋಜನೆಯನ್ನು ಕೊಡಿಸಬೇಕೆಂದು ಮಾಡಿದ ಹೋರಾಟ ಯಶಸ್ವಿಯಾಗಿದ್ದು, ಯೋಜನೆಯಲ್ಲಿದ್ದ 16 ರಿಂದ 59 ವರ್ಷದವರೆಗೆ ಇದ್ದ ವಯೋಮಿತಿಯನ್ನು ಈಗ 16 ರಿಂದ 70 ವರ್ಷದವರೆಗೂ ಏರಿಕೆ ಮಾಡುವಲ್ಲಿ ಒಕ್ಕೂಟ ಯಶಸ್ವಿಯಾಗಿದೆ.

ಸಾಗರದ ಗಣೇಶ್ ಎಂಬ ಪತ್ರಿಕೆ ಹಂಚುವ ಹುಡುಗ ಅಪಘಾತದಲ್ಲಿ ಮೃತಪಟ್ಟಾಗ ದೇಶದ ಇತಿಹಾಸದಲ್ಲಿ ಒಬ್ಬ ಪತ್ರಿಕಾ ವಿತರಕನ ಕುಟುಂಬಕ್ಕೆ ಎರಡು ಲಕ್ಷ ರೂಪಾಯಿ ಕೊಡಿಸುವಲ್ಲಿ ಯಶಸ್ವಿಯಾಗಿದೆ. 2023 ಕಾರ್ಮಿಕ ಇಲಾಖೆಯ ಸಚಿವರ ಮುಖಾಂತರ ಹಾಗೂ ರಾಜ್ಯದಲ್ಲಿರುವ ಅನೇಕ ವಿತರಕರು ಸಂಕಷ್ಟದಲ್ಲಿ ಇದ್ದಾಗ ನಮಗೆ ನಾವೇ ಆಗಬೇಕೆಂಬ ಘೋಷವಾಕ್ಯದಲ್ಲಿ 60ಕ್ಕೂ ಹೆಚ್ಚು ವಿತರಕರಿಗೆ ಸಹಾಯ ಮಾಡಿದ್ದು, ಕೆಲವು ಬಾರಿ ಪತ್ರಿಕಾ ವಿತರಕರಿಂದ ನಮ್ಮ ರಾಜ್ಯದ ಎಲ್ಲಾ ವಿತರಕರುಗಳಿಂದ ದೇಣಿಗೆ ಸಂಗ್ರಹಿಸಿ ನೆರವು ನೀಡಿದ್ದು, ನೇರವಾಗಿ ಒಕ್ಕೂಟದ ವತಿಯಿಂದ ಪರಿಹಾರಗಳನ್ನು ನೀಡಿದ್ದು, ರಾಜ್ಯದ ವಿತರಕರ ಕನಸಿನ ಈ ಪಯಣಕ್ಕೆ ಸಹಕಾರಿಯಾದ ಕಾನಿಪ ಸಂಘದ ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿಗಳು, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗರಾರು, ಕಾರ್ಮಿಕ ಸಚಿವರು ಹಾಗೂ ಎಲ್ಲಾ ಜಿಲ್ಲಾ ಸಂಘಟನೆಗಳು ಸಹಕಾರಿಯಾಗಿವೆ ಎಂದು ಒಕ್ಕೂಟದ ಮುಖಂಡರು ಹರ್ಷ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪತ್ರಿಕಾ ವಿತರಕರ ಯೋಜನೆಗೆ ರೂಪುರೇಷೆ ಸಿದ್ದಪಡಿಸುವ ಹೊಣೆಯನ್ನು ಆಗ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ವಹಿಸಲಾಗಿತ್ತು. ಬಹುತೇಕ ಮಾಧ್ಯಮ ಕಚೇರಿಗಳು ಅಕಾಡೆಮಿಯು ಮನವಿಗೆ ಸ್ಪಂದಿಸಲಿಲ್ಲ ಆ ವೇಳೆಗೆ ಅಕಾಡೆಮಿಯು ಅವಧಿ ಮುಕ್ತಾಯವಾಯಿತು. ವಾರ್ತಾ ಇಲಾಖೆ ಈ ಕೆಲಸವನ್ನು ಮುಂದುವರಿಸಬೇಕಾಗಿತ್ತು ಆದರೆ ಆ ಪ್ರಯತ್ನ ಇಲಾಖೆಯ ಕಡೆಯಿಂದ ಆಗಲಿಲ್ಲ. ಸರ್ಕಾರ ಘೋಷಣೆ ಮಾಡಿದ್ದ 2 ಕೋಟಿ ರೂ. ಆರಂಭಿಕ ಮೊತ್ತವಾಗಿದೆ. ಪತ್ರಿಕಾ ವಿತರಕರಿಗೆ ಆರೋಗ್ಯ ವಿಮೆಯೋ, ಗುಂಪು ವಿಮೆಯೋ ಯಾವ ರೀತಿಯಲ್ಲಿ ಜಾರಿಗೆ ತರಬೇಕೆಂದು ನಿಯಮಾವಳಿ ರೂಪುಗೊಂಡಿದ್ದರೆ ಸರ್ಕಾರದಿಂದ ಹೆಚ್ಚಿನ ಆರ್ಥಿಕ ನೆರವು ಪಡೆಯಲು ಸಾಧ್ಯತೆಗಳಿದ್ದವು. 2018ರ ಸೆಪ್ಟೆಂಬರ್ 5 ರಂದು ಸರ್ಕಾರ ಅನುಷ್ಠಾನ ಸಮಿತಿ ರಚನೆ ಮಾಡಿರುವುದಾಗಿ ಆದೇಶ ಹೊರಡಿಸಿರುವುದು ಬಿಟ್ಟರೆ ಮತ್ತೆ ಯಾವುದೇ ಪ್ರಕ್ರಿಯೆ ನಡೆದಿಲ್ಲ.

ಮಳೆ ಚಳಿ ಗಾಳಿ ಎನ್ನದೆ ಆರೋಗ್ಯವನ್ನು ಲೆಕ್ಕಿಸದೆ ಪತ್ರಿಕೆಗಳನ್ನು ಮನೆಮನೆಗೆ ತಲುಪಿಸಿದ ವಿತರಕರು ಅಪಘಾತಗಳಿಂದ ಸಾವಿಗೆ ಗುರಿಯಾಗಿರುವ ಉದಾಹರಣೆಗಳು ಸಾಕಷ್ಟಿವೆ. ಆದರೆ ಉದ್ಯೋಗದ ಭದ್ರತೆಯೇ ಇಲ್ಲದಿರುವುದರಿಂದ ಯಾವ ಆರ್ಥಿಕ ನೆರವೂ ಅವರ ಕುಟುಂಬಕ್ಕೆ ಸಿಕ್ಕಿಲ್ಲ. ಸರ್ಕಾರದಿಂದಲೂ ಸ್ಪಂದನೆಯಾಗಿಲ್ಲ. ಕ್ಷೇಮ ನಿಧಿ ಯೋಜನೆ ಜಾರಿಗೆ ಬಂದಿದ್ದರೆ ಒಂದಷ್ಟು ನೆರವು ಅವರಿಗೂ ದೊರಕುತ್ತಿತ್ತು ಎಂದು ಮನವಿ ಮಾಡಿದರು.

ಇದನ್ನೂ ಓದಿ: ಶಿವಮೊಗ್ಗ | ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ; ಸಭೆಯಲ್ಲಿ ಕಾಂಗ್ರೆಸ್‌-ಬಿಜೆಪಿ ಜಟಾಪಟಿ

ಸರ್ಕಾರ, ವಾರ್ತಾ ಇಲಾಖೆ, ಮಾಧ್ಯಮ ಅಕಾಡೆಮಿ ಇನ್ನಾದರೂ ಆರು ವರ್ಷದಿಂದ ಕಪಾಟಿನಲ್ಲಿ ಕೊಳೆಯುತ್ತಿರುವ ಈ ಯೋಜನೆಯನ್ನು ಮರು ಜಾರಿಗೆ ತರಲು ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಮಾಲತೇಶ್ ಮನವಿ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...