ಶಿವಮೊಗ್ಗ | ಹೈಕೋರ್ಟ್ ಆದೇಶವಾದರೂ ಭೂಮಿ ಬಿಡಿಸಿಕೊಡದ ಅಧಿಕಾರಿಗಳು; ಮಹಿಳೆ ಹೋರಾಟ

Date:

ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಫೆಬ್ರವರಿ 6ರಿಂದ ಹೋರಾಟ ನಡೆಸುತ್ತಿರುವ ದಲಿತ ಮಹಿಳೆಗೆ ಇನ್ನೂ ಪರಿಹಾರ ದೊರಕದಿದ್ದು, ಅಹೋರಾತ್ರಿ ಧರಣಿ ಮುಂದುವರಿಸಿದ್ದಾರೆ.

ಶಿವಮೊಗ್ಗ ನಗರದ ನಿವಾಸಿ ಉಮಾದೇವಿ ನ್ಯಾಯಕ್ಕಾಗಿ ಧರಣಿ ಕೂತಿದ್ದಾರೆ. ಹಸೂಡಿ ಗ್ರಾಮದ ಸರ್ವೇ ನಂಬರ್ 134/6ರಲ್ಲಿನ ಎರಡು ಎಕರೆ ಜಮೀನನ್ನು ಪಿಟಿಸಿಎಲ್ ಕಾಯ್ದೆಯಡಿ ಮರು ಸ್ವಾಧೀನ ಮಾಡಿಕೊಡಬೇಕೆಂದು ಈ ಹಿಂದೆ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. 11-12-1985ರಂದು ಆದೇಶವಾಗಿತ್ತು. ಜೆ ಜೆ ವೆಂಕಟೇಶ್ ಎಂಬವವರು ಭೂಮಿಯನ್ನು ಸ್ವಾಧೀನ ಮಾಡಿಕೊಂಡಿದ್ದರು.
ತೀರ್ಪಿನ ವಿರುದ್ಧ ಪ್ರತಿವಾದಿಯು ಜಿಲ್ಲಾ ನ್ಯಾಯಾಲಯದ ಮೆಟ್ಟಿಲೇರಿದ್ದರು. ನಂತರ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯಗಳು ತೀರ್ಪು ನೀಡಿದ್ದು ಜಮೀನನ್ನು ತೆರವುಗೊಳಿಸಬೇಕಿದೆ. ಅಧಿಕಾರಿಗಳು ನೋಟಿಸ್ ನೀಡಿ ಶೀಘ್ರದಲ್ಲಿ ಮರು ಸ್ವಾಧೀನಪಡಿಸಿಕೊಡಬೇಕಿದೆ. ಈ ಸಂಬಂಧ ಉಮಾದೇವಿ ಹೋರಾಟಕ್ಕೆ ಕುಳಿತಿದ್ದಾರೆ. ಕಾನೂನುಯುತವಾಗಿ ಬರಬೇಕಾದ ಭೂಮಿಗಾಗಿ ಬೇಡಿಕೊಳ್ಳುವಂತಾಗಿದೆ.

1001239789

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಶಾಸಕ ಸಂಗಮೇಶ್‌ ರಾಜಿನಾಮೆಗೆ ಆಗ್ರಹಿಸಿ ಫೆ.14 ರಂದು ಜೆಡಿಎಸ್ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆದೇಶ ಪ್ರತಿ ಸ್ಪಷ್ಟವಾಗಿದೆ. ದಿನಾಂಕ 09-01-2025ರಂದು ಹೈಕೋರ್ಟ್ ನೀಡಿರುವ ಆದೇಶದಂತೆ ಜಮೀನನ್ನು ಜೆ ಜೆ ವೆಂಕಟೇಶ್ ಅವರಿಂದ ಬಿಡಿಸಿಕೊಡಬೇಕಾಗಿದೆ. ಇಲ್ಲಿವರೆಗೂ ಅಧಿಕಾರಿಗಳು ಕ್ರಮ ತೆಗೆದುಕೊಂಡಿಲ್ಲ” ಎಂದು ಉಮಾದೇವಿ ಆರೋಪಿಸುತ್ತಿದ್ದಾರೆ.
ಉಪವಿಭಾಗಾಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳು ಉಚ್ಚ ನ್ಯಾಯಾಲಯದ ಆದೇಶಕ್ಕೆ ಮನ್ನಣೆ ನೀಡದೆ ಬರೀ ಸಬೂಬು ಹೇಳಿ ಕಾಲಹರಣ ಮಾಡುತ್ತಿದ್ದಾರೆ. ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿಯು ಈ ಹೋರಾಟಕ್ಕೆ ಬೆಂಬಲವಾಗಿ ನಿಂತಿದ್ದು, “ನ್ಯಾಯ ಸಿಗುವವರೆಗೂ, ಜಮೀನನ್ನು ಉಮಾದೇವಿಯವರಿಗೆ ಸ್ವಾಧೀನಪಡಿಸಿ ಕೊಡುವವರೆಗೂ ಧರಣಿ ಮುಂದುವರಿಸುತ್ತೇವೆ” ಎಂದು ಸಮಿತಿ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...