ಶಿವಮೊಗ್ಗ | ಚಳವಳಿಗಳಿಂದ ಮಾತ್ರ ಸರ್ಕಾರದ ಧೋರಣೆ ಬದಲಿಸಲು ಸಾಧ್ಯ: ಹಸಿರುಸೇನೆ ರಾಜ್ಯಾಧ್ಯಕ್ಷ ಬಸವರಾಜಪ್ಪ

Date:

ಶಿವಮೊಗ್ಗದಲ್ಲಿ ಸಕ್ಕರೆ ಕಾರ್ಖಾನೆ ಧೋರಣೆಯ ವಿರುದ್ಧ ಹೋರಾಟ ಮಾಡುವ ಸಲುವಾಗಿ ಕಬ್ಬು ಬೆಳೆಗಾರರ ಸಂಘಕಟ್ಟಿ ಹೋರಾಟ ಮಾಡಲಾಯಿತು ಎಂದು ಹಸಿರುಸೇನೆ ರಾಜ್ಯಾಧ್ಯಕ್ಷ ಬಸವರಾಜಪ್ಪನವರು ಹೇಳಿದರು.

ಶಿವಮೊಗ್ಗದ ನ್ಯಾಷನಲ್ ಕಾಲೇಜಿನ ಫ್ರೆಂಡ್ಸ್ ಸೆಂಟರ್ ಹಾಲ್‌ನಲ್ಲಿ ಬಹುಮುಖಿ ಶಿವಮೊಗ್ಗ ಇವರಿಂದ ಕೃಷಿ ಕ್ಷೇತ್ರದ ಪ್ರಸ್ತುತ ತಲ್ಲಣಗಳ ಬಗ್ಗೆ ಉಪನ್ಯಾಸ ನೀಡಿದ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷ ಹೆಚ್‌ ಆರ್‌ ಬಸವರಾಜಪ್ಪನವರು, “ಚಳವಳಿಗಳಿಂದ ಮಾತ್ರ ಸರ್ಕಾರದ ಧೋರಣೆ ಬದಲಿಸಲು ಸಾಧ್ಯ. ರುದ್ರಪ್ಪನವರ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತಸಂಘವನ್ನು ಕಟ್ಟಿ ಮುಂದೆ ಸುಂದರೇಶ್ ಹಾಗೂ ನಂಜುಂಡಸ್ವಾಮಿ, ಕಡಿದಾಳ್ ಶಾಮಣ್ಣ ಮುಂತಾದವರ ನಾಯಕತ್ವದಲ್ಲಿ ರೈತರು 1980 ಅಕ್ಟೋಬರ್ 2ರಂದು ಶಿವಮೊಗ್ಗದಲ್ಲಿ 25,000 ಮಂದಿ ರೈತರು ಸೇರಿ ಜೈಲುಬರೋ ಚಳವಳಿ ಕೈಗೊಂಡು ದೊಡ್ಡ ಹೋರಾಟವನ್ನು ಕೈಗೊಳ್ಳಲಾಯಿತು” ಎಂದರು.

ಹಸಿರುಸೇನೆ ರಾಜ್ಯಾಧ್ಯಕ್ಷ ಬಸವರಾಜಪ್ಪ
ಹಸಿರುಸೇನೆ ರಾಜ್ಯಾಧ್ಯಕ್ಷ ಬಸವರಾಜಪ್ಪ ಅವರಿಂದ ಕೃಷಿ ಕ್ಷೇತ್ರದ ಪ್ರಸ್ತುತ ತಲ್ಲಣಗಳ ಕುರಿತು ಉಪನ್ಯಾಸ

“ಸರ್ಕಾರ ರೈತರ ಜಮೀನುಗಳ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಬಿಲ್ ತೆಗೆಯಿತು. ಆಗ ನಡೆದ ದಲಿತ ರೈತ ಮತ್ತು ಭಾಷಾ ಚಳವಳಿಗಳಿಂದಾಗಿ 33ವರ್ಷಗಳಿಂದ ಇದ್ದ ಕಾಂಗ್ರೆಸ್ ಸರ್ಕಾರ ಬದಲಾಗಿ ಬೇರೆ ಪಕ್ಷ ಅಧಿಕಾರಕ್ಕೆ ಬಂತು. ಇಂದು ರೈತರು ವರ್ಷವೊಂದಕ್ಕೆ 30 ಲಕ್ಷ ಕೋಟಿ ರೂಪಾಯಿ ಭೂಮಿಗೆ ಬಂಡವಾಳ ಹಾಕುತ್ತಾರೆ. ಪಂಪ್‌ಸೆಟ್‌ಗೆ ₹10 ಲಕ್ಷ ಕೋಟಿ ಬಂಡವಾಳ ಹಾಕುತ್ತಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಸ್ತುತದಲ್ಲಿ ಹಾಲಿನ ಉತ್ಪಾದನೆ ಅಧಿಕವಾಗಿದ್ದು, ಹೆಚ್ಚಾದ ಹಾಲನ್ನು ಜನರಿಗೆ 50ಮಿ.ಲೀ ಕೊಟ್ಟು ₹2 ಹೆಚ್ಚು ಪಡೆಯಲಾಗುತ್ತಿದೆ. ಇದನ್ನೇ ವಿರೋಧ ಪಕ್ಷಗಳು ಬೆಲೆ ಏರಿಕೆ ಎಂದು ಬೊಬ್ಬೆ ಹೊಡೆಯುತ್ತವೆ. ಆ ಹಾಲನ್ನು ಚೆಲ್ಲಬೇಕಾಗಿತ್ತೇ?. ಮೊಬೈಲ್ ರೀಚಾರ್ಜ್ ಮಾಡಿಸಿಕೊಳ್ಳುವುದಕ್ಕೆ ಅವರು ಏಕಾಏಕಿ ₹150 ಜಾಸ್ತಿ ಮಾಡಿದ್ದಾರೆ. ಎಲ್ಲ ಕೈಗಾರಿಕಾ ವಸ್ತುಗಳ ಬೆಲೆ ಏರಿದೆ. ಆದರೆ ಅದರ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಈ ರೀತಿಯ ವರ್ತನೆ ಸರಿ ಅಲ್ಲ” ಎಂದು ಹೇಳಿದರು.

“ಕೃಷಿಯವರು ಶೇ.66ರಷ್ಟು ಉದ್ಯೋಗ ನೀಡಿದ್ದೇವೆ. ಕೈಗಾರಿಕೆಯವರು ಕೇವಲ ಶೇ.26ರಷ್ಟು ಉದ್ಯೋಗ ನೀಡಿದ್ದಾರೆ. ಕೃಷಿ ಉದ್ಯೋಗ ಲಾಭದಾಯಕವಾಗಿಲ್ಲ. ರೈತ ಬೆಳೆದ ತರಕಾರಿ ಹಣ್ಣುಗಳನ್ನು ರಸ್ತೆಯಲ್ಲಿ ಹಾಕಿ ಮಾರಲಾಗುತ್ತದೆ. ಆದರೆ ಕಾರ್ಖಾನೆ ಉತ್ಪಾದಿಸಿದ ಚಪ್ಪಲಿಗಳನ್ನು ಎಸಿ ರೂಂನಲ್ಲಿ ಮಾರಲಾಗುತ್ತದೆ. ಕೃಷಿ ಕಾಯಿದೆಗಳು ರೈತರ ವಿರೋಧಿಯಾಗಿದ್ದು, ಜಮೀನುಗಳನ್ನು ಕೈಗಾರಿಕೆಯವರು ಕೊಂಡುಕೊಳ್ಳಲು ಅವಕಾಶ ಕೊಟ್ಟರೆ ಭೂಮಿ ಬರಡಾಗುತ್ತದೆ. ಅನ್ನಕ್ಕಾಗಿ ದೇಶ ವಿದೇಶಗಳ ಕಡೆ ಕೈಚಾಚಬೇಕಾಗುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಭಾರಿ ಮಳೆ: ಇಂದು ಮಂಗಳೂರಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ

“ರೈತರು ಸಮಗ್ರ ಸಾವಯವ ಕೃಷಿ ಮಾಡಬೇಕು. ಸರ್ವ ಬೆಳೆ ಬೆಳೆಯಬೇಕು. ಹೈನುಗಾರಿಕೆ ಹಾಗೂ ಕೋಳಿ, ಕುರಿಗಳನ್ನು ಸಾಕಿ ರೈತ ಸ್ವಂತ ಕಾಲಮೇಲೆ ನಿಲ್ಲುವಂತಾಗಬೇಕು. ಕುವೆಂಪು ಹೇಳಿದಂತೆ ರೈತ ದೇಶದ ಬೆನ್ನೆಲುಬು. ಆದರೆ ಇಂದು ರಿಪೇರಿ ಆಗದ ಮಟ್ಟಿಗೆ ರೈತನ ಬೆನ್ನೆಲುಬು ಹಾಳಾಗಿದೆ. ರೈತ ಸರ್ಕಾರ ನಂಬದೆ ಸ್ವಂತ ಕಾಲ ಮೇಲೆ ನಿಲ್ಲಬೇಕು. ಈ ಸಬ್ಸಿಡಿ ಹೆಚ್ಚು ದಿನ ಮುಂದುವರೆಯುವುದಿಲ್ಲ. ಅದರ ಬದಲಿಗೆ ರೈತ ಸ್ವಾವಲಂಬಿಯಾಗಬೇಕು” ಎಂದರು.

ಈ ಸಂಧರ್ಭದಲ್ಲಿ ಹಲವಾರು ಪ್ರಗತಿಪರ‌ ಚಿಂತಕರು, ಬಹುಮುಖಿ ಶಿವಮೊಗ್ಗ ತಂಡದವರು, ರೈತ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...