ಶಿವಮೊಗ್ಗ | ಸೈಬರ್ ಕ್ರೈಂ ಪೊಲೀಸರ ಕಾರ್ಯಾಚರಣೆ ; ವ್ಯಕ್ತಿಯ ಖಾತೆಗೆ 19 ಲಕ್ಷ ರುಪಾಯಿ ವಾಪಾಸ್

Date:

ಸೈಬರ್ ಕ್ರೈಂ ಕಾರ್ಯಾಚರಣೆ ಡಿಜಿಟಲ್ ಅರೆಸ್ಟ್ ಮುಖಾಂತರ ವ್ಯಕ್ತಿಯೊಬ್ಬರನ್ನು ಹೆದರಿಸಿ, 19,00,000/- ರೂ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಸಿಕೊಂಡ ಪ್ರಕರಣದಲ್ಲಿ, ವಂಚಿಸಿದ ಹಣವನ್ನು ಫ್ರೀಸ್ ಮಾಡಿಸಿ, ವಾರಸುದಾರರಿಗೆ ಹಿಂದಿರುಗಿಸಲಾಗಿದೆ.

ಶಿವಮೊಗ್ಗ, ನಗರದ 51 ವರ್ಷದ ವ್ಯಕ್ತಿಯೊಬ್ಬರಿಗೆ ದಿನಾಂಕ 17-09-2025 ರಂದು ಬೆಳಗ್ಗೆ, ಅಪರಿಚಿತ ಮೊಬೈಲ್ ನಿಂದ ವಾಟ್ಸಪ್ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿಯು ತನ್ನನ್ನು ಮುಂಬೈ ಸಿಟಿಯ ಕೊಲಬಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸೆಕ್ಟರ್ ಎಂದು ಪರಿಚಯಿಸಿಕೊಂಡು ನಿಮ್ಮ ಆಧಾರ್ ಕಾರ್ಡನ್ನು ಬೆಳೆಸಿ, ಮುಂಬೈ ಸಿಟಿಯ ಕೆನರಾ ಬ್ಯಾಂಕ್ ನಲ್ಲಿ ಖಾತೆಯನ್ನು ಮಾಡಿಸಿ ಅದರಲ್ಲಿ ಸ್ಕ್ಯಾಮರ್ ಒಬ್ಬರಿಗೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುತ್ತೀರಿ ಆದ್ದರಿಂದ ನಿಮ್ಮ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಾಗಿರುತ್ತದೆ.

ಈ ಸಂಬಂಧ ನೀವು ಮುಂಬೈಗೆ ಬರಬೇಕೆಂದು ಅವರಿಗೆ ತಿಳಿಸಿ, ಇದು ಇಂಟರ್ನ್ಯಾಷನಲ್ ಸೆಕ್ಯೂರಿಟಿ ಸಂಬಂಧಿಸಿದ ವಿಷಯವಾಗಿರುವುದರಿಂದ ಈ ಕರೆಯ ವಿಚಾರವನ್ನು ನೀವು ಯಾರೊಂದಿಗೂ ಹಂಚಿಕೊಳ್ಳಬಾರದೆಂದು ಅವರಿಗೆ ಬೆದರಿಕೆ ಹಾಕಿರುತ್ತಾರೆ.ನಂತರ ಮಾರನೆಯ ದಿನ ಆ ವ್ಯಕ್ತಿಯು ಇವರೊಂದಿಗೆ ವಿಡಿಯೋ ಕಾಲ್ ಮುಖಾಂತರ ಕರೆ ಮಾಡಿದ್ದು. ಕರೆ ಮಾಡಿದ ವ್ಯಕ್ತಿಯು ಪೊಲೀಸ್ ಯೂನಿಫಾರಂನಲಿದ್ದು ನಿಮ್ಮನ್ನು ಜಡ್ಜ್ ರವರ ಮುಂದೆ ವಿಡಿಯೋ ಕಾರೆನ್ಸ್ ಮುಖಾಂತರ ಹಾಜರುಪಡಿಸುತ್ತೇವೆ. ನಿಮಗೆ ಬೇಲ್ ತೆಗೆದುಕೊಳ್ಳು ತ್ತಿದ್ದೇವೆ ಎಂದು ತಿಳಿಸಿ ಕೋರ್ಟ್ ಹಾಲ್ ನಂತೆಯೇ ಇರುವ ಒಂದು ಹಾಲಿನಲ್ಲಿ ಜಡ್ಜ್ ನ ರೀತಿ ಒಬ್ಬರು ಕುಳಿತಿದ್ದು, ಅವರು ಪಿರ್ಯಾದುದಾರರಿಗೆ ನಿಮ್ಮ ಬ್ಯಾಂಕ್ ನ ಲಾಕರ್ ನಲ್ಲಿರುವ ಬಂಗಾರವನ್ನು ತೂಕ ಮಾಡಿಸಿ ಅದರ ಮೇಲೆ ಎಷ್ಟು ಸಾಲ ತೆಗೆಯಬಹುದೆಂದು ತಿಳಿದುಕೊಂಡು ಅದರಲ್ಲಿ ಅರ್ಧದಷ್ಟು ಹಣವನ್ನು ನಿಮ್ಮ ಬ್ಯಾಂಕ್ ಅಕೌಂಟ್ ಗೆ ಹಾಕಿಸಿಕೊಳ್ಳಿ ಎಂದು ತಿಳಿಸಿದ ಮೇರೆಗೆ ಇವರು ಬ್ಯಾಂಕಿಗೆ ಹೋಗಿ ಒಟ್ಟು 19 ಲಕ್ಷ ಸಾಲ. ಮಾಡಿಸಿ ಆಕೌಂಟ್ ಗೆ ಹಾಕಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ನಿಮ್ಮ ಖಾತೆಯಲಿರುವ 19 ಲಕ್ಷ ರೂ ಹಣವನ್ನು ನಾವು ಹೇಳುವ ಬ್ಯಾಂಕ್ ಅಕೌಂಟ್ ಗೆ ವರ್ಗಾವಣೆ ಮಾಡಬೇಕು ಎಂದು ಹೇಳಿದ ಮೇರೆಗೆ ಇವರು 19 ಲಕ್ಷ ಹಣವನ್ನು ವರ್ಗಾವಣೆ ಮಾಡಿರುತ್ತಾರೆ. ನಂತರ ಈ ವಿಚಾರವನ್ನು ಪಿರ್ಯಾದಿಯು ತನ್ನ ಮಗಳಿಗೆ ತಿಳಿಸಿದ ಮೇರೆಗೆ, ಇದು ವಂಚಕರ ಜಾಲವೆಂದು, ಮೋಸವಾಗಿರುವ ಬಗ್ಗೆ ತಿಳಿಸಿರುತ್ತಾರೆ.

ಈ ರೀತಿ ಸೈಬರ್ ವಂಚಕರು ಸದರಿ ವ್ಯಕ್ತಿಯನ್ನು ವಂಚಿಸಿ 19 ಲಕ್ಷ ಹಣವನ್ನು ಆಕ್ರಮವಾಗಿ ವರ್ಗಾವಣೆ ಮಾಡಿಸಿಕೊಂಡಿದ್ದು ಈ ಸಂಬಂಧ ಶಿವಮೊಗ್ಗ, ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸದರಿ ಪ್ರಕರಣದಲ್ಲಿ ಆರೋಪಿತರು ಹಾಗೂ ವಂಚಿಸಿದ ಹಣವನ್ನು ಪತ್ತೆ ಮಾಡುವ ಸಂಬಂಧ ಮಿಥುನ್ ಕುಮಾರ್ ಜಿ ಕೆ ಪೋಲಿಸ್ ಅಧೀಕ್ಷಕರು, ಶಿವಮೊಗ್ಗ, ಜಿಲ್ಲೆ,, ಹಾಗೂ ಶ್ರೀ ಎ, ಜಿ, ಕಾರ್ಯಪ್ಪ ಹೆಚ್ಚುವರಿ ಪೊಲೀಸ್ ಅಧೀಕ್ಷಕರು – 1, ಶಿವಮೊಗ್ಗ ಜಿಲ್ಲೆ., ಮತ್ತು ರಮೇಶ್ ಕುಮಾರ್ ಎಸ್ ಹೆಚ್ಚುವರಿ ಪೊಲೀಸ್ ಅಧೀಕ್ಷಕರು – 2, ಶಿವಮೊಗ್ಗ, ಜಿಲೆ. ರವರ ಮಾರ್ಗದರ್ಶನದಲ್ಲಿ ಕೃಷ್ಣಮೂರ್ತಿ ಪೊಲೀಸ್ ಉಪಾಧೀಕ್ಷರು ಸೈಬರ್ ಕ್ರೈಂ ಪೊಲೀಸ್ ಠಾಣೆ ರವರ ಮೇಲ್ವಿಚಾರಣೆಯಲ್ಲಿ ಮಂಜುನಾಥ ಪೊಲೀಸ್ ನಿರೀಕ್ಷಕರು ಸೈಬರ್ ಕ್ರೈಂ ಪೊಲೀಸ್ ಠಾಣೆ ರವರ ನೇತೃತ್ವದ ಸಿಬ್ಬಂದಿಗಳನ್ನೊಳಗೊಂಡ ತನಿಖಾ ತಂಡವನ್ನು ರಚಿಸಲಾಗಿತ್ತು.

ತನಿಖಾ ತಂಡವು ಕೂಡಲೇ ಕಾರ್ಯಪ್ರೌವೃತ್ತರಾಗಿ ಪ್ರಕರಣದಲ್ಲಿ ಪಿರ್ಯಾದುದಾರರಿಗೆ ವಂಚಿಸಿದ 19 ಲಕ್ಷ ರೂ ಹಣವನ್ನು ಫ್ರೀಸ್ ಮಾಡಿಸಿ, ನಂತರ ಸದರಿ ಹಣವನ್ನು ವಾರಸುದಾರರಿಗೆ ಹಿಂದಿರುಗಿಸಿ ನೀಡಿ ಉತ್ತಮ ಕರ್ತವ್ಯವನ್ನು ನಿರ್ವಹಿಸಿರುತ್ತಾರೆ.

ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಮಾನ್ನ ಪೋಲಿಸ್ ಅಧೀಕ್ಷಕರು ಶಿವಮೊಗ್ಗ, ಜಿಲ್ಲೆಯವರು ಪ್ರಶಂಶಿಸಿ ಅಭಿನಂದಿಸಿರುತ್ತಾರೆ,

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...