ಶಿವಮೊಗ್ಗ ಮಹಾನಗರ ಪಾಲಿಕೆ ಮಾಡಬೇಕಾದ ಕೆಲಸವನ್ನು ನಗರದ ಟ್ರಾಫಿಕ್ ಪೊಲೀಸರು ಮಾಡಿದ್ದು, ಸಾರ್ವಜನಿರಿಂದ ಶ್ಲಾಘನೆ ವ್ಯಕ್ತಾಗಿದೆ.
ಎಲ್ಲೆಂದರಲ್ಲಿ ವಾಹನಗಳ ನಿಲುಗಡೆ ಮಾಡಿ, ಸಂಚಾರ ವ್ಯವಸ್ಥೆಗೆ ಕಂಟಕವಾಗುತ್ತಿದ್ದ ಪಾರ್ಕಿಂಗ್ ಸಮಸ್ಯೆಗೆ ಶಿವಮೊಗ್ಗದ ಟ್ರಾಫಿಕ್ ಪೊಲೀಸರು ಅಂತ್ಯ ಹಾಡಿದ್ದಾರೆ. ಶಿವಮೊಗ್ಗದ ಜನನಿಬಿಡ ಹಾಗೂ ಸದಾ ಕಾಲ ಟ್ರಾಫಿಕ್ನಿಂದ ಗಿಜಿಗುಡುವ ಸವಾರ್ ಲೇನ್ ರಸ್ತೆಯಲ್ಲಿ ಮುಕ್ತವಾಗಿ ವಾಹನ ಸಂಚಾರ ಮಾಡಲು ಪೊಲೀಸರು ಉಪಾಯ ಮಾಡಿದ್ದು, ರಸ್ತೆಯಲ್ಲಿ ವಾಹನಗಳನ್ನು ಎಲ್ಲಿ ಬೇಕಲ್ಲಿ ಪಾರ್ಕಿಂಗ್ ಮಾಡಿ, ವಾಹನ ಸಂಚಾರಕ್ಕೆ ಅಡಚಣೆ ಮಾಡುತ್ತಿದ್ದ ವಾಹನ ಸವಾರರಿಗೆ, ಇದೀಗ ಟ್ರಾಫಿಕ್ ಪೊಲೀಸರು ಜಾಗ ಮಾಡಿಕೊಟ್ಟಿದ್ದಾರೆ.
ಮಂಗಳವಾರ ಮುಂಜಾನೆಯಿಂದಲೇ, ಕಾರ್ಯಾಚರಣೆಗಿಳಿದ ಟ್ರಾಫಿಕ್ ಪೊಲೀಸರು, ಅಲ್ಲಿಯೇ ಇದ್ದ ಕೆಲವರನ್ನು ಕರೆದು ಪಾಳು ಬಿದ್ದಿದ್ದ ಕನ್ಸರ್ವೆನ್ಸಿ ರಸ್ತೆಯನ್ನು ಸ್ವಚ್ಚ ಮಾಡಿಸಿ, ವಾಹನಗಳ ಪಾರ್ಕಿಂಗ್ಗೆ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದಾರೆ.
ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುತ್ತಿದ್ದ ಕಾರಣ ವಾಹನ ಸಂಚಾರಕ್ಕೆ ಕಿರಿಕಿರಿ ಉಂಟಾಗುತ್ತಿತ್ತು. ಅಲ್ಲದೇ, ಸಂಚಾರಿ ನಿಯಮಗಳ ಉಲ್ಲಂಘನೆ ಕೂಡ ಆಗುತ್ತಿತ್ತು. ಇದನ್ನು ತಪ್ಪಿಸಲು ಟ್ರಾಫಿಕ್ ಪೊಲೀಸರೇ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿದ್ದು, ಸಂಚಾರಕ್ಕೆ ವ್ಯವಸ್ಥಿತವಾದ ಅನುಕೂಲ ಮಾಡಿಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಪಶ್ಚಿಮ ಸಂಚಾರಿ ಪಿಎಸ್ಐ ತಿರುಮಲೇಶ್ ನೇತೃತ್ವದ ಪೊಲೀಸರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮುಚ್ಚಿರುವ ಸರ್ಕಾರಿ ಶಾಲೆಗಳ ಪುನರಾರಂಭಕ್ಕೆ ಒತ್ತಾಯ
ತಿರುಮಲೇಶ್ ಪಿಎಸ್ಐ, ಪ್ರಕಾಶ್ ಎಆರ್ಎಸ್ಐ, ಸಂದೀಪ್ ಹೆಚ್ ಸಿ, ಪ್ರಕಾಶ್ ಸಿಪಿಸಿ, ಪ್ರಶಾಂತ್ ಸಿಪಿಸಿ ಇದ್ದರು.





