ಶಿವಮೊಗ್ಗ | ಪಾಸ್‌ಪೋರ್ಟ್‌ ಅರ್ಜಿ ತಿರಸ್ಕಾರ; ವಾಸ್ತುಶಿಲ್ಪಿ ಕೆ ಜಿ ಶ್ರೀಧರ್ ಏಕಾಂಗಿ ಧರಣಿ

Date:

ಪಾಸ್‌ಪೋರ್ಟ್‌ ನೀಡುವ ವಿಚಾರವಾಗಿ ಏರ್‌ಪೋರ್ಟ್‌ ವಿಭಾಗದ ಅಧಿಕಾರಿಗಳು ಅನಗತ್ಯ ಗೊಂದಲ ಮಾಡುತ್ತಿದ್ದು, ತಮಗೆ ಪಾಸ್‌ಪೋರ್ಟ್‌ ನೀಡಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ತೀರ್ಥಹಳ್ಳಿಯ ಪ್ರಖ್ಯಾತ ವಾಸ್ತುಶಿಲ್ಪಿ ಕೆ ಜಿ ಶ್ರೀಧರ್ ಏಕಾಂಗಿ ಧರಣಿ ನಡೆಸುತ್ತಿದ್ದಾರೆ.

ಶಿವಮೊಗ್ಗ ನಗರದ ಪೋಸ್ಟ್‌ ಆಫೀಸ್‌ ಕಚೇರಿ ಆವರಣದಲ್ಲಿನ ಪಾಸ್‌ಪೋರ್ಟ್‌ ಕಚೇರಿ ಮುಂದೆ ಶ್ರೀಧರ್‌ ಧರಣಿ ಕುಳಿತಿದ್ದಾರೆ. ಕೈಯಲ್ಲಿ “ನಾನು ಸಲ್ಲಿಸಿದ ಪಾಸ್‌ಪೋರ್ಟ್‌ ಅರ್ಜಿಯನ್ನು ನಿರಾಕರಿಸುವಾಗ ಹೆಸರು ಬದಲಾವಣೆಯ ಪ್ರಕಟಣೆಯನ್ನು ಇಂಗ್ಲೀಷ್‌ ಪತ್ರಿಕೆಯಲ್ಲಿ ಪ್ರಕಟಿಸಿದ್ದೇನೆ ಎಂಬಂತಹ ನಿಯಮ ಇರುವುದನ್ನು ಏರ್‌ಪೋರ್ಟ್‌ ವಿಭಾಗದ ಅಧಿಕಾರಿಗಳು ನನಗೆ ಬರೆದುಕೊಡಬೇಕು” ಎಂದು ಆಗ್ರಹಿಸಿ ಪೋಸ್ಟರ್‌ವೊಂದನ್ನು ಹಿಡಿದಿದ್ದಾರೆ.

ಧರಣಿ ಕುಳಿತ ಶ್ರೀಧರ್‌ ಅವರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಪಾಸ್‌ ಪೋರ್ಟ್‌ ಮತ್ತು ಆಧಾರ್‌ ಕಾರ್ಡ್‌ನಲ್ಲಿ ಹೆಸರು ಬದಲಾಗಿದೆಯೆಂದು ಪಾಸ್‌ಪೋರ್ಟ್‌ ತಿರಸ್ಕರಿಸಿದ್ದರು. ಹಾಗಾಗಿ ನಾನು ಹೊಸ ಪಾಸ್‌ಪೋರ್ಟ್‌ ಮಾಡಿಸುವ ಸಲುವಾಗಿ ನನ್ನ ಹೆಸರನ್ನು ಲಾಯರ್‌ ಅಫಿಡವಿಟ್‌ ಮಾಡಿ ಆಧಾರ್‌ನಲ್ಲಿರುವಂತೆಯೇ ಹೆಸರು ಸರಿಪಡಿಸಿಕೊಂಡಿದ್ದೇನೆ. ಈಗ ಬಂದು ಕೇಳಿದರೆ, ಹೆಸರು ಬದಲಾವಣೆಯ ಪ್ರಕಟಣೆಯನ್ನು ಇಂಗ್ಲೀಷ್‌ ಪತ್ರಿಕೆಯಲ್ಲಿ ಪ್ರಕಟಿಸಿರಬೇಕೆಂದು ಹೇಳುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಪಾಸ್‌ಪೋರ್ಟ್‌ ತಿರಸ್ಕೃತ ಕೆ ಜಿ ಶ್ರೀಧರ್

“ಪ್ರತಿ ಬಾರಿ ಬಂದು ಕೇಳುವಾಗಲೂ ಒಂದೊಂದು ಕಾರಣ ಹೇಳುತ್ತಾರೆ. ಅವರ ಹತ್ತಿರ ಹೋಗಿ, ಇವರ ಹತ್ತಿರ ಹೋಗಿ ಸರಿಮಾಡಿಸಿಕೊಂಡು ಬನ್ನಿ ಅಂತ ಹೇಳುತ್ತಾರೆ. ಯಾರೂ ಮಾಡುವುದಿಲ್ಲ. ಇವರೆಲ್ಲ ಒಂದು ನೆಟ್ವರ್ಕ್‌ ಮಾಡಿಕೊಂಡಿದ್ದಾರೆ ಅನ್ನಿಸುತ್ತಿದೆ. ಗ್ರಾಹಕರ ಸಂಪರ್ಕಕ್ಕೆಂದು ಒಂದು ನಂಬರ್‌ ಹಾಕಿದ್ದಾರೆ. ಅದಕ್ಕೆ ಕಾಲ್‌ ಮಾಡಿದರೆ ನಂಬರ್‌ ಚಾಲ್ತಿಯಲ್ಲಿ ಇಲ್ಲ ಎಂದು ಬರುತ್ತಿದೆ. ಇವರು ಜನಗಳಿಗೆ ತಪ್ಪು ಮಾಹಿತಿ ಕೊಡುತ್ತಿದ್ದಾರೆ” ಎಂದು ದೂರಿದರು.

“ಇವರು ಜನರ ಸೇವೆ ಮಾಡುತ್ತಿಲ್ಲ, ಜನರು ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು, ಹಣ ಖರ್ಚು ಮಾಡಿ, ಸಮಯ ಮೀಸಲಿಟ್ಟಿರುತ್ತಾರೆಂಬ ಯಾವುದೇ ಗೋಜಿಲ್ಲ. ಅಧಿಕಾರಿಗಳು ತುಂಬಾ ಉದಾಸೀನ ತೋರುತ್ತಾರೆ. ಸುಮ್ಮನೆ ಅಲ್ಲಿಂದ ಇಲ್ಲಿ, ಇಲ್ಲಿಂದ ಅಲ್ಲಿ ತಿರುಗಿಸುತ್ತಿದ್ದಾರೆ. ಹೆಸರು ಬದಲಾವಣೆ ಕುರಿತು ಇಂಗ್ಲಿಷ್‌ ಪತ್ರಿಕೆಯಲ್ಲಿ ಪ್ರಕಟಿಸಬೇಕೆಂಬುದನ್ನು ನನಗೆ ಅಕ್ಷರಗಳಲ್ಲಿ ಬರೆದು ಕೊಡಬೇಕು, ನನಗೆ ಇವರು ಕ್ಲಾರಿಟಿ ಕೊಡಬೇಕು. ಹಾಗಾಗಿ ನಾನು ಧರಣಿ ಕೂತಿದ್ದೀನಿ” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ವಕ್ಫ್ ಆಸ್ತಿ ವಿವಾದ: ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

“ಇದು ಕೇಂದ್ರ ಸರ್ಕಾರದ ಕಾನೂನು ಅಲ್ಲವೇ, ಎಂಪಿಯವರೇ ಬಂದು ಇಲ್ಲಿಯ ವ್ಯವಸ್ಥೆಯನ್ನೊಮ್ಮೆ ಪರಿಶೀಲಿಸಲಿ. ಅವರೇ ನನಗೆ ಈ ಕಾನೂನಿನ ಕುರಿತು ನ್ಯಾಯ ನೀಡಲಿ” ಎಂದು ಕೆ ಜಿ ಶ್ರೀಧರ್ ಪಟ್ಟುಹಿಡಿದಿದ್ದಾರೆ.

ಈ ದಿನ.ಕಾಮ್‌ ಸ್ಥಳದಲ್ಲಿರುವುದನ್ನು ಕಂಡ ಮಹೇಶ್ ಎಂಬ ಅಧಿಕಾರಿಯೊಬ್ಬರು, “ಯಾರು ಸುದ್ದಿ ಮಾಧ್ಯಮದವರು, ಇಲ್ಲಿ ಬರುವಂತಿಲ್ಲ. ನೀವು ಪೊಲೀಸರನ್ನು ಕರೆತಂದು ಸಮಸ್ಯೆ ಬಗೆಹರಿಸಿಕೊಳ್ಳಿ” ಎಂದು ವರದಿಗಾರರ ಮೇಲೆ ದರ್ಪದ ಮಾತುಗಳನ್ನು ಆಡಿದರು.

WhatsApp Image 2025 11 17 at 5.17.05 PM
ರಾಘವೇಂದ್ರ, ಶಿವಮೊಗ್ಗ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...