ಶಿವಮೊಗ್ಗ | ಪೊಲೀಸರ ಕ್ರೀಡಾಕೂಟ; ಗಮನ ಸೆಳೆದ ಅಡಿಷನಲ್ ಎಸ್‌ಪಿ ಕಾರ್ಯಪ್ಪನವರ ಪೆನಾಲ್ಟಿ ಕಿಕ್

Date:

ಯಾವಾಗಲೂ ಬಂದೋ ಬಸ್ತ್, ಕರ್ತವ್ಯದಲ್ಲಿಯೇ ಮುಳುಗಿರುತ್ತಿದ್ದ ಶಿವಮೊಗ್ಗ ಜಿಲ್ಲಾ ಪೊಲೀಸರು ಮೂರು ದಿನ ನಗರದ ಡಿಎಆರ್‌ನಲ್ಲಿ ನಡೆದ ಪೊಲೀಸರ ಕ್ರೀಡಾಕೂಟದಲ್ಲಿ ಮಿಂದೆದ್ದಿದ್ದು, ಶೂಟ್ ಔಟ್ ಸ್ಪರ್ಧೆಯಲ್ಲಿ ಅಡಿಷನಲ್ ಎಸ್‌ಪಿ ಕಾರ್ಯಪ್ಪನವರ ಕಿಕ್ ಗಮನ ಸೆಳೆದಿದೆ.

ಪೊಲೀಸ್ ಕವಾಯಿತು ಮೈದಾನದಲ್ಲಿ ಮೂರು ದಿನಗಳವರೆಗೆ ನಡೆಯುವ ಜಿಲ್ಲಾ ಮಟ್ಟದ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಉಸ್ತುವಾರಿ ಹಾಗೂ ಜಿಪಂ ಸಿಇಒ ಹೇಮಂತ್ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ರಿಲೇ ಓಟ, ಕಬ್ಬಡ್ಡಿ, ಹಗ್ಗಜಗ್ಗಾಟ, ಡಿಸ್ಕಸ್ ತ್ರೋ, ವಾಲಿಬಾಲ್, ಶಾರ್ಟ್ ಪುಟ್, ಲಾಂಗ್ ಜಂಪ್, ಜಾವಲಿನ್ ಥ್ರೋ, ನಡಿಗೆ ಸ್ಪರ್ಧೆಗಳಿಗೆ ಅಧಿಕಾರಿ ಮತ್ತು ಸಿಬ್ಬಂದಿಗಳು ಕ್ರೀಡೆಗಳಿಗೆ ಚಾಲನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂರು ದಿನಗಳಲ್ಲಿ 73 ಸ್ಪರ್ಧೆಗಳು ನಡೆಯಲಿದ್ದು, 200 ಮಂದಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗಿಯಾಗಲಿದ್ದಾರೆ.
800 ಮೀಟರ್ ಓಟದಲ್ಲಿ ನ್ಯೂಟೌನ್‌ನ ರಕ್ಷಿತ್ ಬಿ ಎಂ ಪ್ರಥಮ, ಹಳೇ ನಗರ ಠಾಣೆಯ ಗೌತಮ್ ಬಿ ಜೆ ದ್ವಿತೀಯ, ಡಿಎಆರ್ ದಯಾನಂದ ದ್ವಿತೀಯ ಸ್ಥಾನ ಪಡೆದಿದ್ದಾರೆ. ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಶಿಕಾರಿಪುರದ ಶರತ್ ಪ್ರಥಮ, ಭದ್ರಾವತಿಯ ಗೌತಮ್ ದ್ವಿತೀಯ, ತೀರ್ಥಹಳ್ಳಿಯ ಗೌತಮ್ ತೃತೀಯ ಸ್ಥಾನ ಪಡೆದಿದ್ದಾರೆ.

ಜಾವಲಿನ್ ಥ್ರೋ ಸ್ಪರ್ಧೆಯಲ್ಲಿ ಸಾಗರ ಉಪವಿಭಾಗದ ನರೇಂದ್ರ ಪ್ರಥಮ, ತೀರ್ಥಹಳ್ಳಿಯ ಗೌತಂ ದ್ವಿತೀಯ, ಶಿವಮೊಗ್ಗ ಡಿಎಆರ್‌ನ ಹರೀಶ್ ತೃತೀಯ, 45 ವರ್ಷದ ಮಹಿಳಾ ವಿಭಾಗದ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಠಾಣೆಯ ಶ್ವೇತಾ ಪ್ರಥಮ, ರಿಪ್ಪನ್ ಪೇಟೆಯ ತ್ರಿವೇಣಿ ದ್ವಿತೀಯ, ನ್ಯೂಟೌನ್ ನ ದಿವ್ಯಶ್ರೀ ತೃತೀಯ ಸ್ಥಾನ ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮೈಕ್ರೋ ಫೈನಾನ್ಸ್ ಕಿರುಕುಳ; ಆರು ತಿಂಗಳ ಕಾಲಾವಕಾಶ ನೀಡುವಂತೆ ಪ್ರತಿಭಟನೆ

ಲಾಂಗ್ ಜಂಪ್ ಸ್ಪರ್ಧೆಯಲ್ಲಿ(45 ವರ್ಷದ ಮಹಿಳೆಯರಿಗೆ) ವಿನೋಬ ನಗರ ಠಾಣೆಯ ದೀಪಾ ಪ್ರಥಮ, ಶಿವಮೊಗ್ಗ ಗ್ರಾಮಾಂತರ ಠಾಣೆಯ ಶ್ವೇತಾ ದ್ವಿತೀಯ ಹಾಗೂ ಭದ್ರಾವತಿ ನ್ಯೂಟೌನ್‌ನ ದಿವ್ಯಶ್ರೀ ತೃತೀಯ ಸ್ಥಾನ ಪಡೆದಿದ್ದಾರೆ. ಭೋಜನದ ನಂತರ ಪಂದ್ಯಾವಳಿ ಮುಂದುವರೆದಿತ್ತು.

ಫುಟ್ ಬಾಲ್ ಪೆನಾಲ್ಟಿ ಶೂಟ್ ಔಟ್ ಸ್ಪರ್ಧೆಯಲ್ಲಿ ಶಿವಮೊಗ್ಗದ ಎಸ್‌ಪಿ ಮಿಥುನ್ ಕುಮಾರ್, ಅಡಿಷನಲ್ ಎಸ್‌ಪಿಗಳಾದ ಅನಿಲ್ ಕುಮಾರ್ ಭೂಮರೆಡ್ಡಿ, ಕಾರ್ಯಪ್ಪ, ಡಿವೈಎಸ್‌ಪಿ ಸುರೇಶ್, ಭದ್ರಾವತಿ ಡಿವೈಎಸ್‌ಪಿ ನಾಗರಾಜ್, ತೀರ್ಥಹಳ್ಳಿ ಡಿವೈಎಸ್‌ಪಿ ಗಜಾನನ ವಾಮನ ಸುತಾರ ಭಾಗಿಯಾಗಿದ್ದರು. ಶೂಟ್ ಔಟ್ ಸ್ಪರ್ಧೆಯಲ್ಲಿ ಕಾರ್ಯಪ್ಪನವರ ಕಿಕ್ ಗಮನ ಸೆಳೆದಿತ್ತು‌.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...