ಶಿವಮೊಗ್ಗ | ಕುಲಾಂತರಿ ಬೆಳೆಗಳಿಗೆ ಸಂಬಂಧಿಸಿ ರಾಷ್ಟ್ರೀಯ ನೀತಿ ರೂಪಿಸಲು ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ

Date:

ಆಹಾರ ಮತ್ತು ಕೃಷಿಯಲ್ಲಿ ಕುಲಾಂತರಿ ತಂತ್ರಜ್ಞಾನ ಅಪಾಯಕಾರಿ ಮಾತ್ರವಲ್ಲ, ಹಳಸಲು ತಂತ್ರಜ್ಞಾನ ಎನ್ನುವುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಕೃಷಿಯಲ್ಲಿ ಕುಲಾಂತರಿ ಉಚ್ಚಾಟನೆ ಮಾಡಬೇಕು, ಕುಲಾಂತರಿ ಬೆಳೆಗಳಿಗೆ ಸಂಬಂಧಿಸಿ ರಾಷ್ಟ್ರೀಯ ನೀತಿ ರೂಪಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಸಿರು ಸೇನೆ ಸಾಮೂಹಿಕ ನಾಯಕತ್ವದಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ರೈತ ಮುಖಂಡ ಕೆ ಟಿ ಗಂಗಾಧರ್, ಕುಲಾಂತರಿ ತಂತ್ರಜ್ಞಾನ ಅಪಾಯಕಾರಿ. ಬಿಟಿ ಬದನೆ ಪ್ರಕರಣದಲ್ಲಿ ನಡೆದಂತೆ ವ್ಯಾಪಕ ಮತ್ತು ಅರ್ಥಪೂರ್ಣ ಚರ್ಚೆಗಳು ಎಲ್ಲ ನಾಗರಿಕರಿಗೂ ಮುಕ್ತವಾಗಿರಬೇಕು. ಜಿಲ್ಲಾ ಮಟ್ಟದಲ್ಲಿ ಚರ್ಚೆಗಳನ್ನು ನಡೆಸಬೇಕು. ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ಹಕ್ಕುಬಾಧ್ಯಸ್ತರು ಹಾಗೂ ರಾಜ್ಯ ಸರ್ಕಾರದ ಪ್ರತಿನಿಧಿಗಳನ್ನು ಒಳಗೊಂಡಿರಬೇಕು ಎಂಬುದು ನಮ್ಮ ಹಕ್ಕೊತ್ತಾಯ ಎಂದರು.

ಕೃಷಿ ವಲಯಕ್ಕೆ ಸಂಬಂಧಿಸಿದ ನೀತಿಗಳನ್ನು ನಿರೂಪಿಸುವಾಗ ರೈತ ಪ್ರತಿನಿಧಿಗಳ ನಡುವೆ ಸಮಾಲೋಚನೆಗಳು ನಡೆಯದೆ ಇರುವ ಹಿನ್ನೆಲೆಯಲ್ಲಿ ಕುಲಾಂತರಿ ಅಥವಾ ಕೃಷಿಯಲ್ಲಿ ಜೈವಿಕ ತಂತ್ರಜ್ಞಾನದ ವಿಷಯಕ್ಕೆ ಸಂಬಂಧಿಸಿದಂತೆ ನಡೆಯುವ ಸಮಾಲೋಚನಾ ಸಭೆಗಳು ಹೆಚ್ಚಿನ ಮಹತ್ವ ಪಡೆಯುತ್ತವೆ. ಕೃಷಿಯಲ್ಲಿ ಕುಲಾಂತರಿ ತಂತ್ರಜ್ಞಾನ ತರುವ ಬಗ್ಗೆ ರಾಷ್ಟ್ರೀಯ ಜೈವಿಕ ಸುರಕ್ಷತಾ ನೀತಿ ರಚಿಸಿ ಸಾರ್ವಜನಿಕ ಸಮಾಲೋಚನೆ ನಡೆಸಬೇಕು. ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯದ ನೇತೃತ್ವದಲ್ಲಿ ರಾಜ್ಯ ಸರ್ಕಾರ, ರೈತ ಪ್ರತಿನಿಧಿಗಳು, ಪರಿಸರವಾದಿಗಳೊಂದಿಗೆ ಚರ್ಚಿಸಿ ಭಾರತದ ಕೃಷಿಯಲ್ಲಿ ಕುಲಾಂತರಿ ತಂತ್ರಜ್ಞಾನ ಅಗತ್ಯದ ಬಗ್ಗೆ ಅಭಿಪ್ರಾಯ ಸಂಗ್ರಹಿಸಿ ಕಾಯ್ದೆ ರಚಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶ ನೀಡಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 09 26 at 8.18.01 PM

ಆಹಾರ ಪದ್ಧತಿ ಹಾಗೂ ಕೃಷಿಯಲ್ಲಿ ಕುಲಾಂತರಿ ತಂತ್ರಜ್ಞಾನ ತರಬೇಕೆಂದು ಕೆಲ ಬಂಡವಾಳಶಾಹಿಗಳು ಹುನ್ನಾರ ನಡೆಸುತ್ತಿದ್ದಾರೆ. ಕುಲಾಂತರಿ ತಂತ್ರಜ್ಞಾನ ಎನ್ನುವುದು ಪ್ರಾಣಿ- ಪಕ್ಷಿಗಳ ಜೀವಸತ್ವ ಹೊರತೆಗೆದು ಸಸ್ಯಗಳ ಮೇಲೆ ಪ್ರಯೋಗ ಮಾಡುವ ಪಿತೂರಿ. ಇದಕ್ಕೆ ಜಾಗತಿಕವಾಗಿ ಮುಂದುವರಿದ ದೇಶಗಳು ವಿರೋಧ ವ್ಯಕ್ತಪಡಿಸಿವೆ. ಕುಲಾಂತರಿ ತಂತ್ರಜ್ಞಾನ ಪದ್ಧತಿಯ ಆಹಾರ ಸೇವನೆಯಿಂದ ಮನುಷ್ಯ ಹಾಗೂ ಜೀವಸಂಕುಲದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ. ಪರಿಸರದ ಅವನತಿಯೂ ಆಗಲಿದೆ. ಆದ್ದರಿಂದ ಈ ಪದ್ಧತಿ ತಿರಸ್ಕರಿಸಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಕೆ ಟಿ ಗಂಗಾಧರ್ ತಿಳಿಸಿದರು.

ಇದನ್ನು ಓದಿದ್ದೀರಾ? ರಾಜ್ಯ ರಾಜಕಾರಣದಲ್ಲಿ BJP-RCB (ರಾಯಣ್ಣ ಚೆನ್ನಮ್ಮ ಬ್ರಿಗೇಡ್) ಹೊಸ ಆಟ!

ಪ್ರತಿಭಟನೆಯ ಬಳಿಕ ರೈತರ ಮನವಿಯನ್ನು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮೂಲಕ ನೀಡಲಾಯಿತು.

ಪ್ರತಿಭಟನೆಯಲ್ಲಿ ಪ್ರಮುಖರಾದ ಯಶವಂತರಾವ್‌ ಘೋರ್ಪಡೆ, ಗಿರೀಶ್ ಮಾಳೇನಹಳ್ಳಿ, ಜಗದೀಶ್ ನಾಯಕ್, ಮಂಜುನಾಥ್‌, ಹಾಲೇಶಪ್ಪ ಗೌಡ್ರು, ಈರಣ್ಯ ಪ್ಯಾಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...