ಶಿವಮೊಗ್ಗ | ಜನ ಸಂಪರ್ಕ ಸಭೆ; ಎಸ್‌ಪಿ ಮಿಥುನ್ ಕುಮಾರ್ ಭಾಗಿ

Date:

ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ, ಸುನ್ನಿ ಜಾಮಿಯಾ ಮಸೀದಿ ಕಮಿಟಿ ಮತ್ತು ಸುನ್ನಿ ಜಮಾಯತುಲ್ ಉಲ್ಮಾ ಕಮಿಟಿಯ ಸಹಯೋಗದಲ್ಲಿ ಗಾಂಧಿ ಬಜಾರಿನ ಜಾಮಿಯಾ ಮಸೀದಿಯಲ್ಲಿ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

ಸಭೆಯಲ್ಲಿ ಮಾತನಾಡಿದ ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್, “ನಮ್ಮ ಹಬ್ಬ ನಮ್ಮ ದೇವರಿಗೆ ಮೆಚ್ಚುಗೆಯಾಗುವ ರೀತಿಯಲ್ಲಿ ಮಾಡಬೇಕು. ಆದರೆ, ಕೆಲವೊಂದು ಕಿಡಿಗೇಡಿಗಳಿಂದ ಹಬ್ಬಗಳ ಸಂದರ್ಭದಲ್ಲಿ ಎಲ್ಲರಿಗೂ ತೊಂದರೆಯಾಗುತ್ತದೆ. ಈ ವರ್ಷದಿಂದ ಮಸೀದಿ ಕಮಿಟಿಗಳಿಗೆ ಮೆರವಣಿಗೆ ಜವಾಬ್ದಾರಿ ನೀಡುತ್ತಿದ್ದೇವೆ. ಹಿಂದೂ ಮುಸ್ಲಿಂ ಎರಡೂ ಕಣ್ಣುಗಳು ನಮಗೆ ಮುಖ್ಯ. ಇಲಾಖೆಯ ನಂಬಿಕೆ ಉಳಿಸಿಕೊಂಡು ಭಾರತೀಯ ನಾಗರೀಕರಾಗಿ ಕೆಲಸ ಮಾಡಬೇಕು” ಎಂದು ಹೇಳಿದರು.

ಹಬ್ಬಗಳ ಆಚರಣೆ ವಿಭಿನ್ನವಾಗಿರುತ್ತದೆ. ಮೊಹಮ್ಮದ್ ಪೈಗಂಬರರ ಹುಟ್ಟು ಹಬ್ಬ ಆಚರಣೆ ಈದ್ ಮಿಲಾದ್, ಗಣಪತಿ ಹಬ್ಬದ ಆಚರಣೆ ದೇವರನ್ನು ಮೆಚ್ಚಿಸುವ ಹಾಗಿರಲಿ. ಪೈಪೋಟಿಗೆ ಬಿದ್ದು ಹಬ್ಬಗಳ ಆಚರಣೆ ನಡೆಯಬಾರದು ಎಂದು ಕಿವಿಮಾತು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಲ್ಕಾರು ಜನ ನೋಡಿ ಹೆಮ್ಮೆ ಪಡುವಂತೆ ಹಬ್ಬಗಳ ಆಚರಣೆ ನಡೆಯಲಿ. ಭಯಮುಕ್ತವಾಗಿ ಹೆಣ್ಣುಮಕ್ಕಳು, ಮಕ್ಕಳು ಹಬ್ಬಗಳಲ್ಲಿ ಪಾಲ್ಗೊಳ್ಳುವಂತಿರಬೇಕು. ಕೆಲ ಕಿಡಿಗೇಡಿಗಳು ಕಾನೂನು ಮೀರಿ ಸಮಸ್ಯೆ ಉಂಟು ಮಾಡುತ್ತಾರೆ ಎಂದರು.

ಏನೇ ಆಚರಣೆ, ಮೆರವಣಿಗೆ ಇದ್ದರೂ ಮುಂಚಿತವಾಗಿ ಮಸೀದಿಯ ಜೊತೆಗೆ, ಪೊಲೀಸ್ ಇಲಾಖೆಯ ಜೊತೆಗೆ ಚರ್ಚೆಗಳು ನಡೆಯಬೇಕು. ಈವರೆಗೆ 277 ಸಭೆಗಳು ಗಣಪತಿ, ಈದ್ ಮಿಲಾದ್ ಸಭೆಗಳನ್ನು ಇಲಾಖೆ ಮಾಡಿದೆ. ಅತ್ಯಂತ ಹೆಚ್ಚಿನ ಸಭೆಗಳು ಆಗಿವೆ. ಒಳ್ಳೆಯ ನಾಗರಿಕರಿಗೆ ರಕ್ಷಣೆ ಕೊಡುವ ಕೆಲಸ ಇಲಾಖೆ ಮಾಡುತ್ತದೆ. ನಂಬಿಕೆ ಇಡಿ. ಹೊರಗಿನ ಜನ ಹೊಗಳೋ ಹಾಗೆ ಹಬ್ಬಗಳನ್ನು ಮಾಡೋಣ ಎಂದು ಮಿಥುನ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ‘ಈ ದಿನ’ ಫಲಶೃತಿ | ಚಿಕ್ಕಮಗಳೂರಿನ ಬೆಳಗೋಡು ಅಂಗನವಾಡಿಗೆ ‘ವಿದ್ಯುತ್ ಭಾಗ್ಯ’

ಸಂಭ್ರಮಾಚರಣೆ ಶೋಕಾಚರಣೆ ಆಗುತ್ತಿದೆ. ಭಕ್ತಿ ಬಿಟ್ಟು ತೋರ್ಪಡಿಕೆಯಲ್ಲಿ ಪೈಪೋಟಿ ನಡೆಯುತ್ತಿದೆ. ಕ್ಷುಲ್ಲಕ ಕಾರಣಕ್ಕಾಗಿ ರಾಗಿಗುಡ್ಡ ಘಟನೆ ನಡೆಯಿತು. ಮನೆ ಮಠ ಬಿಟ್ಟು ಓಡೋದೋರು ಇನ್ನೂ ಮನೆಗೆ ಬಾರದ ಸ್ಥಿತಿ ಬೇಕಾ? ಪ್ರಕರಣಗಳು ದಾಖಲಾಗುವಂತಾಯಿತು. ಸಂಭ್ರಮ ಶೋಕವಾಯ್ತು ಎಂದು ಅಡಿಷನಲ್ ಎಸ್ ಪಿ ಅನಿಲ್ ಕುಮಾರ್ ಭೂಮರೆಡ್ಡಿ ಹೇಳಿದರು.

ಸಭೆಯಲ್ಲಿ ಅಬ್ದುಲ್ ಸತ್ತಾರ್ ಬೇಗ್, ಕಾರ್ಯದರ್ಶಿ ಏಜಾಜ್ ಪಾಷ, ಮಸೀದಿ ಅಧ್ಯಕ್ಷ ಮುನವರ್ ಪಾಷ, ವಕ್ಫ್ ಬೋರ್ಡ್ ಅಧಿಕಾರಿ ಸೈಯದ್ ಮಹತಾಬ್ ಸರ್ವರ್, ಡಿಎಸ್ ಪಿ ಆಂಜನಪ್ಪ, ಸಿಪಿಐ ರವಿ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...