ಶಿವಮೊಗ್ಗ | ಭಾಷಣಕ್ಕಿಂತ ಸೇವಾ ಮನೋಭಾವ ದೊಡ್ಡದು: ಗೀತ ಶಿವರಾಜಕುಮಾರ್

Date:

ರಾಜಕೀಯ ಭಾಷಣ ಮಾಡುವುದಕ್ಕಿಂತ ಜನ ಸಾಮಾನ್ಯರಿಗೆ ಹತ್ತಿರವಿದ್ದು, ಸೇವೆ ಸಲ್ಲಿಸುವುದು ಮುಖ್ಯ ಎಂದು ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.

ಶಿವಮೊಗ್ಗದ ವಿನೋಬನಗರದ ಶ್ರೀರಾಮ ನಗರ (ಬೆಂಕಿನಗರ) ನಿವಾಸಿಗಳಿಂದ ಮಂಗಳವಾರ ಆಯೋಜಿಸಿದ್ದ ‘ನವ ಸಂವತ್ಸರʼ ಸಂಭ್ರಮದಲ್ಲಿ ಗೀತಕ್ಕ, ಶಿವಣ್ಣ ನಮ್ಮೊಂದಿಗೆ’ ಶೀರ್ಷಿಕೆಯಡಿಯ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು, ಅಶಕ್ತರಿಗೆ ಶಕ್ತಿಯಾಗಿ ನಿಂತಿದ್ದರು. ಅದೇ ರೀತಿ ಆಶ್ರಯ ಬಡಾವಣೆ ನಿವಾಸಿಗಳಿಗೆ ಮನೆ ನಿರ್ಮಾಣ ಮಾಡಿ ಕೊಟ್ಟಿದ್ದರು‌. ಇದರಿಂದ, ಅನೇಕರು ಬದುಕು ರೂಪಿಸಿಕೊಂಡಿದ್ದಾರೆ. ಅದೇ ದಾರಿಯಲ್ಲಿ ನಾನೂ ಕೂಡ ಸಾಗುತ್ತೇನೆ ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಹಣದ ಅವಶ್ಯಕತೆ ಇಲ್ಲ. ಜನ ಸಾಮಾನ್ಯರಿಗೆ ಸೇವೆ ಸಲ್ಲಿಸಲು ಈ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಆದ್ದರಿಂದ, ಗೀತಾ ಅವರಿಗೆ ಮತ ನೀಡಿ ಹರಸಬೇಕು ಎಂದರು.

ನಟ ಶಿವರಾಜಕುಮಾರ್ ಮಾತನಾಡಿ, ಜೀವನದಲ್ಲಿ ಬೇವು- ಬೆಲ್ಲ ಇದ್ದರೆ ಮಾತ್ರ, ಬದುಕು ಹಸನಾಗಿರುತ್ತದೆ. ನೂತನ ಯೋಜನೆಗಳ ಆರಂಭಿಸಲು ಸಿದ್ಧತೆ ನಡೆಸುತ್ತಿದ್ದರೆ ಸಿಹಿ ಹಂಚುವ ಹಾಗೂ ಸ್ವೀಕರಿಸುವ ಮೂಲಕ ಚಾಲ‌ನೆ ನೀಡಬೇಕು. ಅದೇ ರೀತಿ, ಜಿಲ್ಲೆಯ ಶಕ್ತಿಯಾಗಿ ಪತ್ನಿ ಗೀತಾ ಶಿವರಾಜಕುಮಾರ್ ಇರಲಿದ್ದಾರೆ. ಆದ್ದರಿಂದ, ಚುನಾವಣೆಯಲ್ಲಿ ಮತ ನೀಡಿ ಆಶೀರ್ವದಿಸಿ ಎಂದು ಕೋರಿದರು‌.

ಕಾಂಗ್ರೆಸ್ ಮುಖಂಡ ಎಚ್.ಸಿ.ಯೋಗೀಶ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಆಡಳಿತಾವಧಿಯಲ್ಲಿ ಜಿಲ್ಲೆಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ‌. ಗೀತಕ್ಕ ಕೂಡ ಸಮಾಜ ಸೇವೆ ಸಲ್ಲಿಸುವುದರಲ್ಲಿ ತಂದೆಯ ಹಾದಿಯಲ್ಲಿ ಸಾಗುತ್ತಿದ್ದಾರೆ‌. ಅವರಿಗೆ ಮತ ನೀಡಿ ಆಶೀರ್ವದಿಸೋಣ ಎಂದರು.

ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ನೆರವಿನಿಂದ ಬದುಕ ನಡೆಸುತ್ತಿದ್ದೇನೆ. ಹಿಂದೆ ಮನೆ ನಿರ್ಮಾಣಕ್ಕೆ ಬಂಗಾರಪ್ಪ ನೆರವಾಗಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಗೀತಾಕ್ಕ ಸೋತಿದ್ದರು. ಈ ಬಾರಿಯ ಚುನಾವಣೆಯಲ್ಲಿ ಗೀತಕ್ಕ  ಗೆದ್ದು ಬರಲಿ ಎಂದು ನಗರದ ಆಶ್ರಯ ಬಡಾವಣೆ ನಿವಾಸಿ ಕಲಾವತಿ ಹರಸಿದರು.

ಇದೇ ವೇಳೆ, ಕಲಾವತಿ ಅವರು, ಗೀತಾ ಶಿವರಾಜಕುಮಾರ್ ಅವರಿಗೆ ಬೆಳ್ಳಿ ಕಡ್ಗವನ್ನು ಉಡುಗೊರೆಯಾಗಿ ನೀಡಿದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಬೆಂಕಿನಗರದ ನಿವಾಸಿಗಳಿಂದ ಅರಿಶಿಣ-ಕುಂಕುಮ ನೀಡಿ ಉಡಿ ತುಂಬಿ ಹರಸಿದರು. ಅದೇ ರೀತಿ, ಬಡಾವಣೆಯ ಪುಟ್ಟ ಮಕ್ಕಳು ಚುನಾವಣಾ ಠೇವಣಿ ಹಣ ಹಾಗೂ ಪುನೀತ್ ರಾಜಕುಮಾರ್ ಅವರ್ ಭಾವ ಚಿತ್ರ ನೀಡಿದರು.

ಸೂಡ ಅಧ್ಯಕ್ಷ ಎಚ್.ಎಸ್.ಸುಂದರೇಶ್, ವಿಧಾನ ಪರಿಷತ್ ಮಾಜಿ ಅಧ್ಯಕ್ಷ ಆಯನೂರು ಮಂಜುನಾಥ, ಎಂ.ಶ್ರೀಕಾಂತ್, ಜಿ.ಡಿ.ಮಂಜುನಾಥ, ಪಾಲಾಕ್ಷಪ್ಪ, ಎಸ್.ಕೆ. ಮರಿಯಪ್ಪ, ವಿಶ್ವನಾಥ ಕಾಶಿ, ಕೆ.ರಂಗನಾಥ, ಗಿರೀಶ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...