ಶಿವಮೊಗ್ಗ | ಬೆಂಗಳೂರಿಗಿಲ್ಲ ಶರಾವತಿ ನೀರು: ಶಾಸಕ ಬೇಳೂರು ಗೋಪಾಲಕೃಷ್ಣ

Date:

ಬೆಂಗಳೂರಿಗೆ ಶರಾವತಿ ನದಿಯಿಂದ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ ಕಾಂಗ್ರೆಸ್‌ ಸರ್ಕಾರದ ಮನಸ್ಸಿನಲ್ಲಿತ್ತು. ಅದಕ್ಕಾಗಿ ಒಂದಷ್ಟು ಪ್ರಕ್ರಿಯೆಗಳು ನಡೆದಿದ್ದವು ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರವರು ಶಿವಮೊಗ್ಗದಲ್ಲಿ ಮಾತನಾಡಿರು.

“ಶರಾವತಿ ನೀರು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಯೋಜನೆ ಬಹಳ ಸುದ್ದಿಯಾಗಿದೆ. ಶರಾವತಿ ನದಿಯಿಂದ ಬೆಂಗಳೂರಿಗೆ ನೀರು ತೆಗೆದುಕೊಂಡು ಹೋಗುವ ಯೋಜನೆ ಉದ್ದೇಶ ಸರ್ಕಾರದ ಮುಂದೆ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಪ್ರಸ್ತಾವನೆ ಮಾಡಿದ್ದು, ಬಸವರಾಜ ಬೊಮ್ಮಾಯಿ ಅವರ ಸರ್ಕಾರ. ನಮ್ಮ ಸರ್ಕಾರ ಬಂದ ಮೇಲೆ ಯೋಜನೆಗೆ ₹20 ಸಾವಿರ ಕೋಟಿ ಅಂದಾಜು ವೆಚ್ಚ ಮಾಡಲಾಗಿದೆ. ಪ್ರಸ್ತಾವನೆ ಬಿಟ್ಟು ಬೇರೆ ಏನೂ ನಮ್ಮ ಸರ್ಕಾರದಲ್ಲಿ ಆಗಿಲ್ಲ. ಸಿಎಂ, ಡಿಸಿಎಂ ಈ ಬಗ್ಗೆ ನನಗೆ ಅಭಿಪ್ರಾಯ ಕೇಳಿದ್ದಾರೆ. ಶರಾವತಿ ನದಿಯಿಂದ ಬೆಂಗಳೂರಿಗೆ ನೀರು ತೆಗೆದುಕೊಂಡು ಹೋಗುವ ಯೋಜನೆಯ ಪ್ರಸ್ತಾವನೆ ಇಲ್ಲ” ಎಂದು ಬೇಳೂರು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕುಮಾರಸ್ವಾಮಿಯವರು ಬಿಜೆಪಿಯಲ್ಲಿ ನನಗೆ ಶತ್ರು ಇದ್ದಾರೆ ಅಂದಿದ್ದಾರೆ. ಬಿಜೆಪಿ ಜೆಡಿಎಸ್‌ನಲ್ಲಿ ಈಗ ಗೊಂದಲ ಶುರುವಾಗಿದೆ. ಯತ್ನಾಳ್ ಮತ್ತು ಈಶ್ವರಪ್ಪ ತಂಡ ಕಟ್ಟಿಕೊಂಡು ವಿಜಯೇಂದ್ರ ಇಳಿಸಲು ಹೊರಟಿದೆ. ಇದನ್ನು ಮುಚ್ಚಿಕೊಳ್ಳೋಕೆ ಈ ಮುಡಾ ಪ್ರಕರಣ ಮುನ್ನಲೆಗೆ ತಂದಿದ್ದಾರೆಂದು ಬೇಳೂರು ಆರೋಪಿಸಿದ್ದಾರೆ. ಛಲವಾದಿ ನಾರಾಯಸ್ವಾಮಿ ಬಂದು ಸಿದ್ದರಾಮಯ್ಯ ಕಳ್ಳ ಎಂದಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಕೆಳಗಿಸಲು ಇವರು ಪ್ಲಾನ್ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ನೀಡಲ್ಲ. ಅವರ ಜೊತೆ ನಾವಿದ್ದೇವೆ” ಎಂದಿದ್ದಾರೆ.

“ಯಡಿಯೂರಪ್ಪನವರನ್ನು ಜೈಲಿಗೆ ಕಳಿಸಿದ್ದು ಯಾರು? ಹಾಗಾದರೆ ಯಡಿಯೂರಪ್ಪ ಕಳ್ಳರಾ ಅದನ್ನು ಹೇಳಬೇಕು ಅಲ್ವೆ. ಶರಾವತಿ ಸಂತ್ರಸ್ತ್ರರ ಪರವಾಗಿ ಸಂಸದ ರಾಘವೇಂದ್ರ ಕೇಂದ್ರದಲ್ಲಿ ಒಂದು ಮಾತಾಡಿಲ್ಲ. ರೈತರ ಧ್ವನಿಯಾಗಿ ರಾಘವೇಂದ್ರ ಕೆಲಸ ಮಾಡಿಲ್ಲ. ರೈತರಪರ ಧ್ವನಿ ಎತ್ತದೆ ಹೋದರೆ ಇವರು ಯಾಕೆ ಬೇಕು. ರಾಘವೇಂದ್ರ ತಮ್ಮ ಕಾಲೇಜು ಜಾಗ ಉಳಿಸಲು ಹೋರಾಟ ಮಾಡುತ್ತಿದ್ದಾರೆ ಅಷ್ಟೆ. ಮಲೆನಾಡಿನ ಪಾಪಿಗಳು ಅಂದರೆ ರಾಘವೇಂದ್ರ, ಹಾಲಪ್ಪ, ಆರಗ ಜ್ಞಾನೇಂದ್ರ, ಬೊಮ್ಮಾಯಿ ಅವರು. ನಮ್ಮ ಸರ್ಕಾರ ಶರಾವತಿ ಸಂತ್ರಸ್ತ್ರರ ಪರವಾಗಿದೆ” ಎಂದು ಬೇಳೂರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಯುದ್ಧ ಬೇಡ, ಬುದ್ಧ ಬೇಕು; ನೇರಳೆ ಗ್ರಾಮದಲ್ಲಿ ‘ಧಮ್ಮ ಪಯಣ’

“ಬೈ ಎಲೆಕ್ಷನ್ ಬಂದಿದೆ. ಬಿಜೆಪಿಯಲ್ಲಿ ಅವರ ಮಕ್ಕಳನ್ನೇ ನಿಲ್ಲಿಸುತ್ತಾರೆ ಅನಿಸುತ್ತೆ. ಪ್ರಧಾನಿಗಳು ಹೇಳಿದ್ದಾರೆ. ಮಕ್ಕಳನ್ನು ನಿಲ್ಲಿಸಬಾರದು. ಆದರೆ ಇವರು ಅವರನ್ನೇ ನಿಲ್ಲಿಸುತ್ತಾರೆ. ಉಪ ಚುನಾವಣೆ ನಡೆಯುತ್ತಿರುವ ಮೂರು ಕ್ಷೇತ್ರಗಳಲ್ಲಿಯೂ ನಾವು ಗೆಲ್ಲುತ್ತೇವೆ. ಮೂರು ಸ್ಥಾನ ಗೆದ್ದು ಕಾಂಗ್ರೆಸ್‌ ಸರ್ಕಾರ ಗಟ್ಟಿಯಾಗಿದೆ ಅಂತ ತೋರಿಸುತ್ತೇವೆ” ಎಂದು ಬೇಳೂರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...