ಶಿವಮೊಗ್ಗ | ಮುಡಾ ಪ್ರಕರಣ ಮುಚ್ಚಿಹಾಕಲು ಸಿದ್ದರಾಮಯ್ಯರಿಂದ ಜಾತಿಗಣತಿ: ಕೆ ಎಸ್ ಈಶ್ವರಪ್ಪ ಅನುಮಾನ

Date:

ಮುಡಾ ಪ್ರಕರಣವನ್ನು ಮರೆತು ಬೇರೆಡೆ ಗಮನ ಸೆಳೆಯುವಂತೆ ಮಾಡಲು ಸಿಎಂ ಸಿದ್ದರಾಮಯ್ಯನವರು ಜಾತಿ ಗಣತಿಯನ್ನು ಸ್ವಾಗತಿಸುತ್ತೇನೆ ಎಂದಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ರಾಷ್ಟ್ರ ಬಳಗದ ಕೆ ಎಸ್ ಈಶ್ವರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಹರಿಹಾಯ್ದರು.

ಶಿವಮೊಗ್ಗ ನಗರದಲ್ಲಿ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿ, “ಸಿದ್ದರಾಮಯ್ಯ ಅವರಿಗೆ ಈಗ ಜ್ಞಾನೋದಯವಾದಂತೆ ಕಾಣುತ್ತಿದೆ. ಜಾತಿ ಗಣತಿಗೆ ನಾನು ಸ್ವಾಗತ ಮಾಡುತ್ತೇನೆಂದು ವಿಷಯಾಂತರ ಮಾಡುತ್ತಿರುವುದು ಅನುಮಾನವಾಗಿದೆ. ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಂಜನೇಯ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದಾಗ ಅನುಷ್ಠಾನಕ್ಕೆ ತರಲಿಲ್ಲ. ಏಳು ವರ್ಷ ಕಳೆದರೂ ಸಹ ಈವರೆಗೆ ವರದಿ ಜಾರಿ ಮಾಡಲಿಲ್ಲ” ಎಂದು ಆರೋಪಿಸಿದರು.

“ಸಿದ್ದರಾಮಯ್ಯ ನಂತರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಜಯಪ್ರಕಾಶ್ ಹೆಗಡೆ ಅವರನ್ನು ನೇಮಕ ಮಾಡಿತು.
ಕಾಂಗ್ರೆಸ್ ಸರ್ಕಾರ ಇದರ ದಾಖಲೆಯೇ ಕಳೆದು ಹೋಗಿದೆ ಎಂದಿದ್ದರು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ಚಾಂಪಿಯನ್ ಎಂದು ಸಿದ್ದರಾಮಯ್ಯ ಕೇವಲ ತೋರ್ಪಡಿಕೆಗೆ ಸೀಮಿತರಾಗಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“1931ರಲ್ಲಿ ಜಾತಿ ಗಣತಿ ವರದಿ ನೀಡಿದ್ದರು. ಅಲ್ಲಿಂದ ಈವರೆಗೂ ಯಾವುದೂ ಆಗಲೇ ಇಲ್ಲ. ಇಂದು ಈ ವರದಿ ಬರಬೇಕು. ಇದರಲ್ಲಿ ಎಲ್ಲ ಸಮಾಜದ ಬಡವರಿಗೆ ಲಾಭ ಆಗುತ್ತ, ಇಲ್ಲವಾ ಎಂಬ ವೈಜ್ಞಾನಿಕ ಚರ್ಚೆಗಳು ಆಗಬೇಕು. ಕಾಂಗ್ರೆಸ್ ಪಕ್ಷದವರು ಅಂಬೇಡ್ಕರ್ ನಿಗಮದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರ ಹಣ ನುಂಗಿ ನೀರು ಕುಡಿದರು.
ಬಿಜೆಪಿ ಸರ್ಕಾರ ಹಿಂದುಳಿದ ವರ್ಗಕ್ಕೆ 1073 ಯೋಜನೆಗಳನ್ನು ಇಟ್ಟಿದ್ದ ಹಣವನ್ನು ಸಹರದ್ದು ಮಾಡಿತು. ಈಗ
ಹಿಂದುಳಿದ ವರ್ಗ ಹಾಗೂ ದಲಿತರಿಗೆ ಮೋಸ ಮಾಡಿದವರು ನಾವೇಯೆಂದು ಕಾಂಗ್ರೆಸ್ ಪಕ್ಷ ಒಪ್ಪಿಕೊಳ್ಳಬೇಕು” ಎಂದು ತಾಕೀತು ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...