ಶಿವಮೊಗ್ಗ | ಮುಂದಿನ ಶೈಕ್ಷಣಿಕ ಸಾಲಿನಿಂದ ಪಠ್ಯದೊಂದಿಗೆ ಕೌಶಲ್ಯ ತರಬೇತಿ: ಮಧು ಬಂಗಾರಪ್ಪ

Date:

ಮುಂದಿನ ಶೈಕ್ಷಣಿಕ ಸಾಲಿನಿಂದಲೇ ರಾಜ್ಯದಲ್ಲಿ 8 ರಿಂದ 12 ನೇ ತರಗತಿಯವರೆಗಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಪಠ್ಯ ಚಟುವಟಿಕೆಗಳೊಂದಿಗೆ ಕೌಶಲ್ಯಾಧಾರಿತ ತರಗತಿಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಹೇಳಿದರು.

ಇಂದು ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ಇವರುಗಳ ಸಂಯುಕ್ತ ಆಶ್ರಯದಲ್ಲಿ ನಗರದ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಏರ್ಪಡಿಸಲಾಗಿದ್ದ ಕೌಶಲ್ಯ ಮತ್ತು ರೋಜ್ ಗಾರ್ ಉದ್ಯೋಗಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಮಕ್ಕಳು ಪ್ರಾಥಮಿಕ ಶಿಕ್ಷಣ ಪಡೆಯುವ ಹಂತದಲ್ಲಿಯೇ ಕೌಶಲ್ಯಧಾರಿತ ಶಿಕ್ಷಣ ನೀಡುವುದರಿಂದ ಅವರ ಭವಿಷ್ಯದ ಬದುಕು ಉಜ್ವಲವಾಗಲಿದೆ ಅಲ್ಲದೆ ತಮಗಿಷ್ಟವಾದ ಕ್ಷೇತ್ರದಲ್ಲಿ ನೈಪುಣ್ಯತೆ ಪಡೆದು, ಅಪೇಕ್ಷೆಯ ಉದ್ಯೋಗ ಪಡೆದು ಸ್ವಾವಲಂಬಿ ಜೀವನ ನಡೆಸಬಹುದಾಗಿದೆ. ತಾಲೂಕು ಮಟ್ಟದಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಿದಲ್ಲಿ ಆಗಮಿಸುವ ಉದ್ಯೋಗದಾತರ ಸಂಖ್ಯೆ ಅತ್ಯಂತ ಕಡಿಮೆ ಇರಲಿದೆ. ಆದ್ದರಿಂದ ಮುಂದಿನ ಸಾಲಿನಿಂದ ಅನ್ವಯಗೊಳ್ಳುವಂತೆ ಜಿಲ್ಲಾ ಕೇಂದ್ರದಲ್ಲಿ ಆಯೋಜನೆಗೊಳ್ಳುವ ಉದ್ಯೋಗ ಮೇಳಗಳಿಗೆ ಉದ್ಯೋಗಾಕಾಂಕ್ಷಿ ನೋಂದಾಯಿತ ವಿದ್ಯಾರ್ಥಿಗಳು ಗ್ರಾಮ ಮತ್ತು ಪಟ್ಟಣ ಪ್ರದೇಶಗಳಿಂದ ನಗರ ಪ್ರದೇಶಕ್ಕೆ ತೆರಳಲು ಉಚಿತ ಬಸ್ ವ್ಯವಸ್ಥೆ ಕಲ್ಪಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಸ್ತುತ ಆಯೋಜಿಸಲಾಗಿರುವ ಉದ್ಯೋಗ ಮೇಳದಲ್ಲಿ ನೆರೆಯ ಜಿಲ್ಲೆಗಳು ಸೇರಿದಂತೆ ರಾಜ್ಯದ 45ಕ್ಕೂ ಹೆಚ್ಚಿನ ಕಂಪನಿಗಳ ಉದ್ಯೋಗದಾತರು ಆಗಮಿಸಿರುವುದು ವಿಶೇಷವಾಗಿದೆ. ಉದ್ಯೋಗಾಕಾಂಕ್ಷಿಗಳು ತಮಗೆ ಇಷ್ಟವಾದ ಕೆಲಸ ಮತ್ತು ಕಂಪನಿಗಳನ್ನು ಆಯ್ಕೆ ಮಾಡಿಕೊಂಡು ಆನ್ಲೈನ್ ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ಉದ್ಯಶೀಲತೆಯ ದಕ್ಷ ಗುಣಗಳು, ವ್ಯಕ್ತಿತ್ವ ವಿಕಸನ, ಸಮಯ ನಿರ್ವಹಣೆ, ಸಂವಹನ ಕೌಶಲ್ಯ, ಮಾರುಕಟ್ಟೆ ಸಮೀಕ್ಷೆ, ಬ್ಯಾಂಕ್ ವ್ಯವಹಾರ, ವಿವಿಧ ಸಾಲ ಸೌಲಭ್ಯಗಳ ಮಾಹಿತಿ ಕೂಡ ದೊರೆಯಲಿದೆ” ಎಂದರು.

“ಜಿಲ್ಲೆಯಲ್ಲಿ 5544 ವಿದ್ಯಾರ್ಥಿಗಳಿಗೆ ಯಾವುದೇ ಮಧ್ಯವರ್ತಿಗಳಿಲ್ಲದೆ ಈವರೆಗೆ 11 ಕೋಟಿ ರೂಗಳ ಆರ್ಥಿಕ ನೆರವನ್ನು ಒದಗಿಸಲಾಗಿದೆ. ಗ್ಯಾರಂಟಿ ಯೋಜನೆಗಳ ವ್ಯವಸ್ಥಿತ ಅನುಷ್ಠಾನಕ್ಕಾಗಿ ಸುಮಾರು 53000 ಕೋಟಿ ರೂ. ಖರ್ಚು ಮಾಡಲಾಗಿದೆ. ಇದರೊಂದಿಗೆ ಅಭಿವೃದ್ಧಿ ಕಾರ್ಯಕ್ರಮಗಳಿಗೂ ವೇಗ ಹೆಚ್ಚಿಸಲಾಗಿದೆ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಎಸ್. ಎನ್. ಚನ್ನಬಸಪ್ಪ ಮಾತನಾಡಿ, “ಇಂದಿನ ಯುವ ಪೀಳಿಗೆಗೆ ಶಿಕ್ಷಣದ ಜೊತೆಗೆ ಕೌಶಲ್ಯ ಆಧಾರಿತ ತರಬೇತಿಗಳ ತುರ್ತು ಅಗತ್ಯವಿರುವುದನ್ನು ಗಮನಿಸಿ, ಪಠ್ಯದೊಂದಿಗೆ ಕೌಶಲ್ಯ ತರಬೇತಿಗಳನ್ನು ಸರ್ಕಾರ ಆರಂಭಿಸುತ್ತಿರುವುದು ಅಭಿನಂದನೀಯ ಎಂದ ಅವರು, ದೇಶದ ಎಲ್ಲಾ ಯುವಕರಿಗೆ ಯಾವುದೇ ಉದ್ಯೋಗ ಒದಗಿಸಿ, ಅವರ ಉತ್ತಮ ಭವಿಷ್ಯ ರೂಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ” ಎಂದರು.

ಇದನ್ನೂ ಓದಿ: ಶಿವಮೊಗ್ಗ | ಸಮಾಜದ ಮುಖ್ಯವಾಹಿನಿಗೆ ಬರಲು ಸಂಘಟನೆ ಮುಖ್ಯ: ಸಚಿವ ಮಧು ಬಂಗಾರಪ್ಪ

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯೆ ಬಿಲ್ಕಿಸ್ ಬಾನು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್. ಹೇಮಂತ್, ರಾಜ್ಯ ಭೋವಿ ನಿಗಮದ ಅಧ್ಯಕ್ಷ ಆರ್. ರವಿಕುಮಾರ್, ರಾಜ್ಯ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ, ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಗಣ್ಯರು, ಉದ್ಯೋಗಾಕಾಂಕ್ಷಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...