ಶಿವಮೊಗ್ಗ | ಸ್ಮಾರ್ಟ್‌ ಸಿಟಿ ಅದ್ವಾನ: ಸಾರ್ವಜನಿಕರ ಪರದಾಟ ಕೇಳೋರು ಯಾರು?

Date:

ಭಾರೀ ನಿರೀಕ್ಷೆ ಹಾಗೂ ಪ್ರಚಾರದೊಂದಿಗೆ ಅನುಷ್ಠಾನಗೊಂಡಿದ್ದ ಸ್ಮಾರ್ಟ್ ಸಿಟಿ ಯೋಜನೆಯು ಈಗ ಜನರಿಗೆ ಸಂಕಷ್ಟ ತಂದೊಡ್ಡಿದೆ.

ಸ್ಮಾರ್ಟ್ ಸಿಟಿ ಯೋಜನೆಯಡಿ ಶಿವಮೊಗ್ಗ ನಗರದ ಚಿತ್ರಣವೇ ಬದಲಾಗಲಿದೆ. ಮೂಲಸೌಕರ್ಯ ವ್ಯವಸ್ಥೆಯಲ್ಲಿ ಆಮೂಲಾಗ್ರ ಸುಧಾರಣೆಯಾಗಲಿದೆ. ನೂರಾರು ಕೋಟಿ ರೂ. ಅನುದಾನ ಬರಲಿದೆ. ನಗರವು ಸ್ಮಾರ್ಟ್, ಹೈಟೆಕ್ ಆಗಲಿದೆ ಎಂದೆಲ್ಲ ಯೋಜನೆಯ ಪ್ರಾರಂಭದಲ್ಲಿ ಹೇಳಲಾಗಿತ್ತು. ಯಾವ ರೀತಿಯಲ್ಲಿ ನಗರ ಅಭಿವೃದ್ದಿಗೊಳಿಸಬೇಕು ಎಂಬ ಕುರಿತಂತೆ ಜನಾಭಿಪ್ರಾಯ ಕೂಡ ಸಂಗ್ರಹಿಸಲಾಗಿತ್ತು. ಆದರೆ, ದಿನಗಳೆದಂತೆ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನಗೊಂಡ ನಂತರ, ನಾಗರಿಕರಲ್ಲಿದ್ದ ನಿರೀಕ್ಷೆಗಳೆಲ್ಲ ಹುಸಿಯಾಗುತ್ತಾ ಬರಲಾರಂಭಿಸಿತ್ತು.

ಹಲವು ಕಾಮಗಾರಿಗಳ ಬಗ್ಗೆ ಸಾರ್ವಜನಿಕರಿಂದ ಭಾರೀ ಟೀಕೆಗಳು ವ್ಯಕ್ತವಾಗಿರುವ ನಡುವೆಯೇ ಅವೈಜ್ಞಾನಿಕವಾಗಿ ಕಾಮಗಾರಿಗಳ ಅನುಷ್ಠಾನ, ವಿಳಂಬ, ಕಳಪೆ ಗುಣಮಟ್ಟ ಸೇರಿದಂತೆ ಹತ್ತು ಹಲವು ದೂರುಗಳು ಕೇಳಿಬಂದಿದೆ. ಇದೆಂತ ಸ್ಮಾರ್ಟ್ ಸಿಟಿ? ಎಂದು ಶಿವಮೊಗ್ಗ ಜನರ ಪ್ರಶ್ನೆಯಾಗಿದೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿವಮೊಗ್ಗ ನಗರದ ಬಿ ಎಚ್ ರಸ್ತೆಯಲ್ಲಿರುವ ಮೀನಾಕ್ಷಿ ಭವನ್, ಕೃಷ್ಣ ಕೆಫೆ, ಹೊಳೆ ಸ್ಟಾಪ್ ರಸ್ತೆ, ಹಾಗೂ ಮಹಾನಗರ ಪಾಲಿಕೆ ರಸ್ತೆಯಲ್ಲಿ ಬರುವ ಕಸ್ತೂರ್ಬಾ ಶಾಲೆ ಅಂಬೇಡ್ಕರ್ ಭವನದ ರಸ್ತೆಯ ಭಾಗಗಳಲ್ಲಿ ಸಣ್ಣ ಮಳೆ ಬಂದರೆ ಸಾಕು. ಎಲ್ಲವೂ ಅಯೋಮಯವಾಗುತ್ತದೆ. ಮಳೆಗೆ ರಸ್ತೆ ತುಂಬಾ ನೀರು ತುಂಬುತ್ತದೆ. ಸಮರ್ಪಕ ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ ವಾಹನ ಸವಾರರು ಪರದಾಟ ನಡೆಸಬೇಕಿದೆ.

ರಸ್ತೆಯಲ್ಲೇ ನೀರು ತುಂಬುವುದರಿಂದ ವಾಹನ ಸವಾರರು ಸುತ್ತಮುತ್ತಲಿನ ವಾಹನ ಸವರರಿಗೆ ಹಾಗೂ ಅಕ್ಕಪಕ್ಕ ಓಡಾಡುವ ಸಾರ್ವಜನಿಕರಿಗೆ ಕೆಸರು ನೀರನ್ನೆರಚಿ ಪ್ರಯಾಣಿಸಬೇಕಿದೆ. ಇವೆಲ್ಲವೂ ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿಗೆ ಹಿಡಿದ ಕೈಗನ್ನಡಿ ಆಗಿದೆ.

ಹಾಗೆಯೇ ನಗರದ ಹಲವು ಭಾಗಗಳಲ್ಲಿ ವಿದ್ಯುತ್ ಕಂಬದಲ್ಲಿ ತಂತಿಗಳು ನೇತಾಡುತ್ತಿದ್ದು, ಸಾರ್ವಜನಿಕರ ಬಲಿಗೆ ಕಾಯುತ್ತಿದೆ. ಯಾಕೆಂದರೆ ಅಪಾಯ ಕಟ್ಟಿಟ್ಟ ಬುತ್ತಿ ಆಗಿದೆ.

ಶಿವಮೊಗ್ಗದ ಜನರು ಎದುರಿಸುತ್ತಿರುವ ಸಮಸ್ಯೆಗಳ ಸಂಬಂಧ ಶಿವಮೊಗ್ಗ ಸ್ಮಾರ್ಟ್ ಸಿಟಿ ನಿರ್ದೇಶಕರಾದ ರಾಜಣ್ಣ ಈ.ದಿನ.ಕಾಮ್ ಜೊತೆಗೆ ಮಾತನಾಡಿ, ” ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿ ಎಲ್ಲವು ಜೂನ್ ತಿಂಗಳಿಗೆ ಮುಗಿದಿದೆ. ಈವಾಗ ಏನಿದ್ದರೂ ಆಡಿಟ್ ಆಗುತ್ತಿದೆ. ಹಾಗಾಗಿ ನಮಗೆ ಇದು ಜವಾಬ್ದಾರಿ ಇಲ್ಲ. ಜೊತೆಗ್ ವಿದ್ಯುತ್ ವಿಚಾರ ಕೇವಲ 10% ನಮ್ಮ ಮೇಲಿದೆ. ಉಳಿದಿದ್ದೆಲ್ಲ ಮೆಸ್ಕಾಂ ವ್ಯಾಪ್ತಿಯಲ್ಲಿದೆ. ಹಾಗಾಗಿ ಮೆಸ್ಕಾಂಗೆ ಇದರ ಕುರಿತು ತಿಳಿಸಿ” ಎಂದು ಕೈ ತೊಳೆದುಕೊಂಡರು.

ಶಿವಮೊಗ್ಗ ಸ್ಮಾರ್ಟ್ ಸಿಟಿ ಇಇ ವಿಜಯ್ ಕುಮಾರ್ ಅವರನ್ನು ಸಂಪರ್ಕ ಮಾಡಿದಾಗ, ದೂರುಗಳು ಬಂದಿದ್ದು, ಮೀನಾಕ್ಷಿ ಭವನ್ ಸ್ಥಳಕ್ಕೆ ತೆರಳಿ ಪರಿಶೀಲನೆ ಮಾಡಿ ಸರಿಪಡಿಸಿಕೊಡಲು ಪ್ರಯತ್ನಿಸುವೆ” ಎಂದು ತಿಳಿಸಿದ್ದಾರೆ.

WhatsApp Image 2024 08 27 at 9.06.26 PM

ಮಹಾನಗರ ಪಾಲಿಕೆಯ ಎ ಇ ಸ್ವಾತಿ ನಾಯ್ಕ್ ಅವರನ್ನು ಸಂಪರ್ಕ ಮಾಡಿದಾಗ ಇದು ರಾಷ್ಟ್ರೀಯ ಹೆದ್ದಾರಿ ವಿಭಾಗಕ್ಕೆ ಬರುವುದಾಗಿ ತಿಳಿಸಿದ್ದಾರೆ. ನಂತರ ರಾಷ್ಟ್ರೀಯ ಹೆದ್ದಾರಿ ವಿಭಾಗದವರನ್ನು ಸಂಪರ್ಕ ಮಾಡಿದಾಗ ಇದು ಪಿಡಬ್ಲ್ಯೂಡಿಗೆ ಬರುವುದಾಗಿ ತಿಳಿಸಿದ್ದಾರೆ.

ನಂತರ ಪಿಡಬ್ಲ್ಯೂಡಿ ಸದಾನಂದ ಮುಖ್ಯ ಇಂಜಿನಿಯರ್ ಅವರನ್ನು ಸಂಪರ್ಕ ಮಾಡಿದಾಗ, “ಇದು ಸ್ಮಾರ್ಟ್ ಸಿಟಿ ವ್ಯಾಪ್ತಿಯಲ್ಲೆ ಬರುತ್ತದೆ. ಫುಟ್ ಪಾಥಲ್ಲಿ ಕಂಬಿ ಹಾಕುವುದು, ರಸ್ತೆ ಯುಜಿಡಿ ಎಲ್ಲವು ಅವರಿಗೆ ಬಿಟ್ಟು ಕೊಡಲಾಗಿದೆ. ಹಾಗಾಗಿ ಇದು ಅವರ ವ್ಯಾಪ್ತಿಯಲ್ಲೆ ಸರಿಯಾಗಬೇಕಿದೆ” ಎಂದು ತಿಳಿಸಿದ್ದಾರೆ. ಸ್ಮಾರ್ಟ್ ಸಿಟಿ ಇಂಜಿನಿಯರ್‌ಗಳು ಹೊಳೆ ಬಸ್ ಸ್ಟಾಪ್ ಹಾಗೂ ಫುಟ್ ಪಾತ್ ಕೆಲಸ ಎಲ್ಲವು ನಮ್ಮ ವ್ಯಾಪ್ತಿಯಲ್ಲೆ ಆಗಿರುವುದು. ಆದರೆ ಮಧ್ಯೆ ಇರುವ ರಸ್ತೆ ಮಾತ್ರ ನಮ್ ದಲ್ಲ ಎಂದು ಹೇಳುತ್ತಿದ್ದಾರೆ. ಅಧಿಕಾರಿಗಳ ‘ನಮ್ಮದಲ್ಲ, ಅವರದ್ದು’ ಎಂಬ ಮಾತುಗಳಿಂದಾಗಿ ಸಾರ್ವಜನಿಕರು ಸಂಕಷ್ಟಕ್ಕೀಡಾಗಿರುವುದಂತೂ ಮಾತ್ರ ವಾಸ್ತವ. ಅಧಿಕಾರಿಗಳ ಈ ನಡೆಗೆ ಸಾರ್ವಜನಿಕರು ಹಿಡಿಶಾಪ ಹಾಕಿದ್ದಾರೆ.

WhatsApp Image 2024 08 27 at 9.06.25 PM

ಒಳಚರಂಡಿಗೆ ನೀರು ಹೋಗಲು ಸರಿಯಾಗಿ ಹರಿದು ಹೋಗುವ ವ್ಯವಸ್ಥೆಯನ್ನು ಯಾರು ಮಾಡಿಕೊಡಬೇಕು ಎಂಬ ಪ್ರಶ್ನೆಗೆ ಉತ್ತರ ಸಿಗಬೇಕಿದೆ. 1200₹ ಕೋಟಿ ವೆಚ್ಚದಲ್ಲಿ ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿ ಲೆಕ್ಕ ತೋರಿಸುತ್ತಿದ್ದಾರೆ. ಆದರೆ ಸರಿಯಾಗಿ ಕೆಲಸಗಳು ಆಗಿಲ್ಲ. ಆಗಿರುವ ಕೆಲಸಗಳು ಸಹ ಕಳಪೆ ಕಾಮಗಾರಿ ಆಗಿರುವುದು ಕಣ್ಣ ಮುಂದಿದೆ. ಇದಕ್ಕೆಲ್ಲ ಶಿವಮೊಗ್ಗ ಸಂಸದರಾದ ಬಿ ವೈ ರಾಘವೇಂದ್ರ ಅವರು ಯಾವಾಗ ಪರಿಹಾರ ಕಂಡುಕೊಳ್ಳುತ್ತಾರೋ ಕಾದುನೋಡಬೇಕಿದೆ.

ಸ್ಮಾರ್ಟ್ ಸಿಟಿ
WhatsApp Image 2025 11 17 at 5.17.05 PM
ರಾಘವೇಂದ್ರ, ಶಿವಮೊಗ್ಗ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...