ಶಿವಮೊಗ್ಗ | ಫೆ.24ರಂದು ಸಾಗರದಲ್ಲಿ ಸಹ್ಯಾದ್ರಿ ಗಾನ ಸಿರಿ ಬಳಗದಿಂದ ಹಾಡುಗಳ ಸ್ಪರ್ಧೆ

Date:

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಸುದ್ದಿ ಸಹ್ಯಾದ್ರಿ ಬಳಗವು ಫೆ. 24ರಂದು ನಟ ಡಾ. ರಾಜ್ ಕುಮಾರ್ ರವರ ನೆನಪಿನ ಅಂಗವಾಗಿ ಡಾ.ರಾಜ್ ನಟಿಸಿದ ಹಾಗೂ ಹಾಡಿದ ಹಾಡುಗಳ ಸ್ಪರ್ಧೆಗಳನ್ನು ಏರ್ಪಡಿಸಿದೆ.

ಈ ಸ್ಪರ್ಧೆಗಳು ನಾಲ್ಕು ವಿಭಾಗದಲ್ಲಿ ನಡೆಯಲಿದ್ದು, 10 ವರ್ಷದಿಂದ 18 ವರ್ಷ, 19ರಿಂದ 30 ವರ್ಷದವರು, 30 ವರ್ಷ ಮೇಲ್ಪಟ್ಟು ಜೋಡಿ ಸುತ್ತು ಹೀಗೆ ಸ್ಪರ್ಧೆ ನಡೆಯಲಿದೆ. ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನಗದು ಮತ್ತು ಅವಾರ್ಡ್‌ಜೊತೆಗೆ, ಸಹ್ಯಾದ್ರಿ ಗಾನ ಸಿರಿ-2024 ಪ್ರಶಸ್ತಿ ಪತ್ರ ನೀಡಲಾಗುತ್ತದೆ.

ಈ ಕಾರ್ಯಕ್ರಮದಲ್ಲಿ ಖ್ಯಾತ ಸಂಗೀತ ನಿರ್ದೇಶಕರು ಡಾ. ವಿ. ನಾಗೇಂದ್ರ ಪ್ರಸಾದ್ ಹಾಗೂ ಇನ್ನಿತರರು ನಟ, ನಟಿಯರು ಆಗಮಿಸಲಿದ್ದಾರೆ. ಈ ಸ್ಪರ್ಧೆಯಲ್ಲಿ ವಿಶೇಷ ತೀರ್ಪುಗಾರರಿರುತ್ತಾರೆ. ರಸಮಂಜರಿ ಗಾಯಕರಿಗೆ ಅವಕಾಶವಿರುವುದಿಲ್ಲ. ಸ್ಪರ್ಧಿಗಳು ದಿನಾಂಕ ಫೆ.20ರ ಒಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಸಹ್ಯಾದ್ರಿ ಗಾನ ಸಿರಿ ಪ್ರಕಟಣೆಯಲ್ಲಿ ತಿಳಿಸಿದ್ದು, ಹೆಚ್ಚಿನ ಮಾಹಿತಿಗಾಗಿ ರಾಘವೇಂದ್ರ ತಾಳಗುಪ್ಪ: 8123824626, ವಸಂತ: 9738123234, 990172149, 8884268889 ಸಂಪರ್ಕಿಸಬಹುದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...