ಶಿವಮೊಗ್ಗ | ತಾಂತ್ರಿಕ ಶಿಕ್ಷಣದಲ್ಲಿರುವ ʼಕ್ಯಾರಿ ಓವರ್ʼ ಪದ್ಧತಿ ರದ್ದುಪಡಿಸಬೇಕು: ಎಚ್ ಆರ್ ಬಸವರಾಜಪ್ಪ

Date:

ತಾಂತ್ರಿಕ ಶಿಕ್ಷಣದಲ್ಲಿರುವ ʼಕ್ಯಾರಿ ಓವರ್ʼ ಪದ್ಧತಿಯನ್ನು ರದ್ದುಪಡಿಸಬೇಕು. ಸರ್ವರಿಗೂ ಶಿಕ್ಷಣ ಎಲ್ಲರಿಗೂ ಅವಕಾಶ”ವೆಂಬ ಪ್ರಜಾಪ್ರಭುತ್ವದ ತತ್ವಕ್ಕೆ ಇದು ಸಂಪೂರ್ಣ ತದ್ವಿರುದ್ಧವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಎಚ್ ಆರ್ ಬಸವರಾಜಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್‌ ಅವರಿಗೆ ಮನವಿ ಸಲ್ಲಿಸಿದ ಅವರು, “ಕೋವಿಡ್-19 ನಂತರ 2022-23ರ ಸಾಲಿನಿಂದ ತಾಂತ್ರಿಕ ಶಿಕ್ಷಣದಲ್ಲಿ ಅನುಷ್ಟಾನಕ್ಕೆ ತಂದಿರುವಂತಹ “ಕ್ಯಾರಿ ಓವರ್” ನಿಯಮವು ಗ್ರಾಮೀಣ ಮತ್ತು ರೈತ ಸಮುದಾಯದ ಬಹುಪಾಲು ವಿದ್ಯಾರ್ಥಿಗಳು ಪ್ರೌಢ ಶಿಕ್ಷಣದವರೆಗೆ ಕನ್ನಡ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮುಗಿಸಿ ಪಿಯುಸಿ ಹಂತದಲ್ಲಿ ಹೊಸದಾಗಿ ಆಂಗ್ಲ ಭಾಷೆಯಲ್ಲಿ ಶಿಕ್ಷಣವನ್ನು ಪಡೆಯುವ ಇವರು ತ್ರಾಸದಾಯಕವಾಗಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿ ತದನಂತರ ಕಷ್ಟಪಟ್ಟು ಎಂಜಿನಿಯರಿಂಗ್ ಹಾಗೂ ತಾಂತ್ರಿಕ ಶಿಕ್ಷಣ ವಿಭಾಗದಲ್ಲಿ ಪ್ರವೇಶಾತಿ ಪಡೆಯುವ ಈ ವರ್ಗದ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದಲ್ಲಿ ತಂದಿರುವ ʼಕ್ಯಾರಿ ಓವರ್ʼ ಪದ್ಧತಿಯು ಅವರ ಶಿಕ್ಷಣದ ಕನಸಿಗೆ ಮುಳುವಾಗಿದೆ” ಎಂದು ತಿಳಿಸಿದ್ದಾರೆ.

“ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದು ಬಂದಿರುವ ಇವರಿಗೆ ಮೊದಲ ವರ್ಷದ ತಾಂತ್ರಿಕ ಪದಗಳನ್ನು ಮೊದಲ ಬಾರಿಗೆ ಆಂಗ್ಲಭಾಷಾ ವಾಕ್ಯದಲ್ಲಿ ಉಲ್ಲೇಖವಾಗಿರುವುದನ್ನು ಕಂಡು ಭಯಭೀತರಾಗುವುದೇ ಹೆಚ್ಚು. ಆಂಗ್ಲಭಾಷೆ ಮತ್ತು ಅದರ ಪದಗಳು ಕಬ್ಬಿಣದ ಕಡಲೆಯಂತಾಗಿರುವ ಇವರಿಗೆ ಆಂಗ್ಲಭಾಷೆಯಲ್ಲಿರುವ ವಿಷಯಗಳನ್ನು ಅರ್ಥ ಮಾಡಿಕೊಳ್ಳಲು ಹಗಲಿರುಳೆನ್ನದೆ ಕಷ್ಟಪಡುವ ಸಂದರ್ಭದಲ್ಲಿ ವರ್ಷದಲ್ಲಿ ಎರಡು ಬಾರಿ ಎದರಾಗುವ ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಲು ಪ್ರಾರಂಭಿಕ ಹಂತದಲ್ಲಿ ಕಷ್ಟಸಾಧ್ಯವಾಗುತ್ತದೆ. ಆದ್ದರಿಂದ ಪ್ರಾರಂಭಿಕ ಮೊದಲ ವರ್ಷದ ಈ “ಕ್ಯಾರಿ ಓವರ್” ಪದ್ಧತಿ ಕೈ ಬಿಟ್ಟು ಭವಿಷ್ಯದಲ್ಲಿ ರೈತರು ಹಾಗೂ ಗ್ರಾಮೀಣ ಪ್ರದೇಶದ ಮಕ್ಕಳೂ ಕೂಡಾ ತಾಂತ್ರಿಕ ಶಿಕ್ಷಣದಲ್ಲಿ ಪದವಿ ಪಡೆಯಲು ಸರ್ಕಾರ ಹಾಗೂ ತಾಂತ್ರಿಕ ಶಿಕ್ಷಣ ಮಂಡಳಿ ಅನುವು ಮಾಡಿಕೊಡಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಹಿರಿಯ ಉಪನ್ಯಾಸಕ ಬಿಸ್ಲಪ್ಪ ಕಟ್ಟಿಮನಿಯವರಿಗೆ ಬೀಳ್ಕೊಡುಗೆ ಸಮಾರಂಭ

“ಮೊದಲ ವರ್ಷದ ಶಿಕ್ಷಣದ ಅವಧಿಯಲ್ಲಿ ದ್ವಿತೀಯ ವರ್ಷಕ್ಕೆ ಅರ್ಹತೆಗಳಿಸುವ ಸಮಯದಲ್ಲಿ ಕೂದಲೆಳೆಯ ಅಂತರದಲ್ಲಿ ಅವಕಾಶ ವಂಚಿತರಾಗುವ ಈ ವರ್ಗದ ವಿದ್ಯಾರ್ಥಿಗಳು ಮುಂದೆ ಮಾನಸಿಕ ಖಿನ್ನತೆಗೆ ಒಳಗಾಗಿ ಶಿಕ್ಷಣದಿಂದ ಹೊರಗುಳಿದು ಕುಟುಂಬಕ್ಕೆ, ಸಮಾಜಕ್ಕೆ ಮಾರಕವಾಗಿ ಹಾಗೂ ಹೊರೆಯಾಗಿ ಬಾಳುವುದೇ ಹೆಚ್ಚು. ಕೋವಿಡ್ ನಂತರದ ಶಿಕ್ಷಣದಲ್ಲಿ ವಿದ್ಯಾರ್ಥಿಗಳಲ್ಲಿ ಬಹಳಷ್ಟು ಮಂದಿ ಮಾನಸಿಕವಾಗಿ ಜರ್ಜರಿತರಾಗಿದ್ದು, ಸಾವಕಾಶವಾಗಿ ಈಗ ತಹಬದಿಗೆ ಬರುತ್ತಿದ್ದಾರೆ. ಈ ಸನ್ನಿವೇಶ ಇರುವಾಗ “ಕ್ಯಾರಿ ಓವರ್” ಭೂತ ಪದ್ದತಿಯಿಂದ ಅವರನ್ನು ಮತ್ತುಷ್ಟು ಗಾಬರಿಗೊಳಿಸುವ ದುಸ್ಸಾಹಸಕ್ಕೆ ಮುಂದಾಗಬಾರದು. ವಿದ್ಯಾರ್ಥಿಗಳಿಗೆ ಮಾರಕವಾಗಿರುವ ಈ ಆವೈಜ್ಞಾನಿಕ “ಕ್ಯಾರಿ ಓವರ್” ಪದ್ಧತಿಯನ್ನು ಕೈ ಬಿಡಬೇಕು” ಎಂದು ಕೋರಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...