ಶಿವಮೊಗ್ಗ | ಮಲೆನಾಡ ಜನರ ಅಚ್ಚುಮೆಚ್ಚಿನ ಸಹಕಾರ ಸಾರಿಗೆ ಬಸ್ ಮತ್ತೊಮ್ಮೆ ರಸ್ತೆಗೆ

Date:

ಮಲೆನಾಡ ಜನರಿಗೆ ಅದೊಂದು ಹೆಸರು ಸಹಕಾರ ಸಾರಿಗೆ ಬಸ್ ಮರೆಯಲಾಗದ ಹೆಸರೆಂದರೆ ತಪ್ಪಾಗಲಾರದು. ಹೌದು ಪ್ರತಿನಿತ್ಯ ಮಲೆನಾಡಿನ ಬಹುತೇಕ ಹಳ್ಳಿಗಳಲ್ಲಿಯೂ ಓಡಾಟ ನಡೆಸಲು ಇದ್ದಂತಹ ಬಸ್‌ ಸಹಕಾರ ಸಾರಿಗೆ. ಈ ಹೆಸರಿಗೆ ಒಂದು ಗತ್ತು ಗಮ್ಮತ್ತು ಇತ್ತು. ಇದು ಓಡಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಇತರ ಬಸ್‌ಗಳ ಅವಶ್ಯಕತೆಯೇ ಬೇಡ ಎನ್ನುವಷ್ಟರ ಮಟ್ಟಿಗೆ ಜನರು ಇದನ್ನು ನಂಬಿಕೊಂಡಿದ್ದರು.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಟಿಸಿಎಸ್ ಎಂಬ ಸಂಸ್ಥೆಯ ಸಹಕಾರ ಸಾರಿಗೆ ಬಸ್, ಕೊಪ್ಪ, ಶೃಂಗೇರಿ, ಎನ್‌ ಆ‌ರ್ ಪುರ, ತೀರ್ಥಹಳ್ಳಿ, ಶಿವಮೊಗ್ಗ, ರಿಪ್ಪನ್‌ ಪೇಟೆ ಹೀಗೆ ಎಲ್ಲೆಡೆ ಸಂಚಾರ ಮಾಡುತ್ತಿದ್ದ ಸಾರಿಗೆ ಸಂಸ್ಥೆ ಹಲವಾರು ತೊಂದರೆಗಳಿಗೆ ಒಳಗಾಗಿ ಬಾಗಿಲು ಮುಚ್ಚುವ ಪರಿಸ್ಥಿತಿಗೆ ಬಂತು. ನಂತರ ಸಹಕಾರ ಸಾರಿಗೆಯ ಓಡಾಟ ನಿಲ್ಲಿಸಲಾಯಿತು. ಎಷ್ಟೋ ಜನರಿಗೆ ಓಡಾಟಕ್ಕೆ ಅನುಕೂಲವಾಗಿದ್ದ ಬಸ್ ಏಕಾಏಕಿ ಸ್ಥಗಿತವಾಯಿತು.

ಸಾರ್ವಜನಿಕರಿಗೆ, ಶಾಲೆ ಕಾಲೇಜು ವಿದ್ಯಾರ್ಥಿಗಳಿಗೆ ಇದೊಂದು ಬಸ್‌ ಎನ್ನುವಂತಾಗಿರದೆ ತಮ್ಮದೇ ವಾಹನ ಎಂಬಂತೆ ಓಡಾಟ ನಡೆಸುತ್ತಿದ್ದರು. ಶಾಲೆ ಕಾಲೇಜು ವಿದ್ಯಾರ್ಥಿಗಳಿಗಾಗಿ ಬಸ್ ಪಾಸ್ ವಿತರಣೆ ಮಾಡಿದ ಮೊದಲ ಖಾಸಗಿ ಬಸ್ ಸಂಸ್ಥೆ ಸಹಕಾರ ಸಾರಿಗೆಗೆ ಸಲ್ಲುತ್ತದೆ. ಬಸ್‌ ಮಾತ್ರವಲ್ಲದೆ ಅದರಲ್ಲಿದ್ದ ಚಾಲಕರು, ನಿರ್ವಾಹಕರೂ ಕೂಡಾ ಜನರ ಜತೆಗೆ ಉತ್ತಮ ಬಾಂಧವ್ಯ ಹೊಂದಿದ್ದ ಕಾರಣದಿಂದ ಅತ್ಯಂತ ಜನಪ್ರಿಯತೆ ಪಡೆದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗ ಹಲವು ವರ್ಷಗಳ ನಂತರ ಮತ್ತೊಮ್ಮೆ ಸಹಕಾರ ಸಾರಿಗೆ ಬಸ್ ರಸ್ತೆಗೆ ಇಳಿದಿದೆ. ರಸ್ತೆಯಲ್ಲಿ ಓಡಾಟ ನಡೆಸುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಹಲವು ವರ್ಷಗಳ ನಂತರವೂ ರಸ್ತೆಯಲ್ಲಿ ಈ ಬಸ್‌ ಓಡಾಟ ಆರಂಭಿಸಿದ್ದರೂ ಗಜ ಗಾಂಭೀರ್ಯ ನಡೆಯೆಂದರೆ ತಪ್ಪಾಗಲಾರದು. ಒಟ್ಟಿನಲ್ಲಿ ಹಲವು ವರ್ಷಗಳ ನಂತರ ಸಹಕಾರ ಸಾರಿಗೆ ತನ್ನ ಪುನರ್ಜನ್ಮ ಪಡೆದಿದೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಕೋಡಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಯುವತಿ 12 ಗಂಟೆಯ ಬಳಿಕ ಜೀವಂತವಾಗಿ ಪತ್ತೆ!

ಸಹಕಾರ ಸಾರಿಗೆ ಇನ್ನುಮುಂದೆ ಶಿವಮೊಗ್ಗದಲ್ಲಿ ಹಾಗೂ ಚಿತ್ರದುರ್ಗದಲ್ಲಿ ತನ್ನ ಗಾಂಭೀರ್ಯ ನಡೆಯನ್ನು ಮುಂದುವರೆಸಲಿದೆ. ಸಹಕಾರ ಸಾರಿಗೆ ಎಂಬ ಹೆಸರಿನಲ್ಲಿಯೇ ಮುಂದುವರೆಸುವಂತೆ ಮಲೆನಾಡ ಜನರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...