ಶಿವಮೊಗ್ಗ | ಬೃಹತ್‌ ಗುಂಡಿಗಳಿಂದ ರಾರಾಜಿಸುತ್ತಿರುವ ರಸ್ತೆ; ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಾಹನ ಸವಾರರು ಹೈರಾಣು

Date:

ಶಿವಮೊಗ್ಗ ನಗರದ ಎನ್ ಟಿ ರಸ್ತೆ, ನ್ಯೂ ಮಂಡಲಿ ವೃತ್ತದ ಸುತ್ತಮುತ್ತಲಿನಲ್ಲಿ ಬೃಹದಾಕಾರದ ಗುಂಡಿಗಳನ್ನು ಕಾಣಬಹುದು. ಈ ರಸ್ತೆಯಲ್ಲಿ ಅತಿ ಹೆಚ್ಚು ವಾಹನ ಸಂಚಾರ ಇದ್ದು, ಕಿರಿದಾದ ರಸ್ತೆ ಕೂಡ ಆಗಿದೆ. ಇಲ್ಲಿ ರಸ್ತೆಯಲ್ಲಿದೆಯೆಂದು ಹುಡುಕಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

“ನಿತ್ಯವೂ ಈ ಗುಂಡಿಯಿಂದ ಒಬ್ಬರಲ್ಲ ಒಬ್ಬರು ಬಿದ್ದು ಪೆಟ್ಟಾಗಿ ಗಾಯ ಮಾಡಿಕೊಳ್ಳುತ್ತಿದ್ದಾರೆ. ರಾತ್ರಿ ವೇಳೆಯಲ್ಲಂತೂ ಈ ಗುಂಡಿಗಳಿಂದ ಬಹಳಷ್ಟು ತೊಂದರೆಯಾಗುತ್ತಿದೆ. ಯಾವತ್ತು ಏನು ಅನಾಹುತ ಆಗುವ ಸಂಭವವಿದೆಯೋ ಗೊತ್ತಿಲ್ಲ. ಸತತ 6 ತಿಂಗಳಿಂದ ಈ ರೀತಿ ಗುಂಡಿ ಆಗಿದ್ದರು ಇದರ ಕುರಿತು ಯಾವುದೇ ಅಧಿಕಾರಿಗಳೂ ಕೂಡ ಇದನ್ನು ಸರಿಪಡಿಸುವ ಗೋಜಿಗೆ ಹೋಗಿಲ್ಲ” ಎಂಬುದು ವಾಹನ ಸವಾರಾರು ಹಾಗೂ ಸ್ಥಳೀಯರ ಆರೋಪವಾಗಿದೆ.

ಸ್ಥಳೀಯರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ನಿತ್ಯ ಓಡಾಡುವ ವಾಹನ ಸವಾರರಿಗೆ ಒಂದು ಕಡೆ ವಾಹನ ಹಾಳಾಗುವ ಪರಿಸ್ಥಿತಿ ಮತ್ತೊಂದು ಕಡೆ ಹಿಂದೆ ಮುಂದೆ ಬರುವ ವಾಹನಗಳು ಯಾವಾಗ ಯಾರಿಗೆ ಢಿಕ್ಕಿ ಹೊಡೆಯುತ್ತಾರೋ ಎನ್ನುವ ಆತಂಕದಲ್ಲಿ ವಾಹನ ಸವಾರರು ವಾಹನ ಚಲಾಯಿಸುತ್ತಿದ್ದಾರೆ. ವಾಹನ ಸವಾರರೇ ಗುಂಡಿ ತಪ್ಪಿಸಲು ಹೋಗಿ ಹಲವು ಬಾರಿ ಆಯತಪ್ಪಿ ಬಿದ್ದು ಗಾಯಗೊಂಡಿರುವ ಹಲವು ಘಟನೆಗಳೂ ನಡೆದಿವೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಸ್ತೆ ಗುಂಡಿ 1ರಸ್ತೆ ಗುಂಡಿ 3

“ಶಿವಮೊಗ್ಗದಿಂದ ತೀರ್ಥಹಳ್ಳಿ, ಬೈಪಾಸ್ ಮತ್ತು ನ್ಯೂ ಮಂಡಲಿ ತಲುಪುವ ತ್ರಿಕೋನ ರಸ್ತೆ ಇದಾಗಿದ್ದು, ಇಲ್ಲಿ ಶಿವಮೊಗ್ಗದಿಂದ ತೀರ್ಥಹಳ್ಳಿ, ಮಣಿಪಾಲ, ಉಡುಪಿ, ಮಂಗಳೂರು ರಸ್ತಗೆ ಹೋಗುವ ಮಾರ್ಗ ಮಧ್ಯೆ ನಾರಾಯಣ ಹೃದಯಾಲಯ ಆಸ್ಪತ್ರೆ ಹಾಗೂ ಶಂಕರ್ ಕಣ್ಣಿನ ಆಸ್ಪತ್ರೆಗಳೂ ಇವೆ. ಹಾಗಾಗಿ ತುರ್ತು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಹೋಗುವ ರೋಗಿಗಳನ್ನು ಆಂಬುಲೆನ್ಸ್ ಮುಖಾಂತರ ಇದೇ ರಸ್ತೆಯಲ್ಲಿ ಕರೆದೊಯ್ಯಲಾಗುತ್ತದೆ. ಅಂತೆಯೇ ತೀರ್ಥಹಳ್ಳಿಯಿಂದ ಶಿವಮೊಗ್ಗ ನಗರಕ್ಕೆ ಬರುವಾಗ ಮ್ಯಾಕ್ಸ್ ಆಸ್ಪತ್ರೆ ಮತ್ತು ಶಿವಮೊಗ್ಗ ಜಿಲ್ಲಾಸ್ಪತ್ರೆ ಮೆಗ್ಗಾನ್ ಆಸ್ಪತ್ರೆ‌ಯಿದೆ. ಹಾಗಾಗಿ ನಿತ್ಯವೂ ಅತಿ ಹೆಚ್ಚು ಆಂಬುಲೆಲ್ಸ್‌ಗಳು ಇದೇ ರಸ್ತೆಯಲ್ಲಿ ಓಡಾಡುತ್ತವೆ. ಇದರಿಂದ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಓಡಾಡುವ ಪರಿಸ್ಥಿತಿ ಎದುರಾಗಿದೆ. ಮಳೆಗಾಲ ಆರಂಭವಾಗಿರುವ ಕಾರಣ ರಸ್ತೆ ಗುಂಡಿಯಿಂದ ತಪ್ಪಿಸಲು ಹೋಗಿ ಗಾಡಿ ಸ್ಕಿಡ್ ಆಗಿ ಬೀಳುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆ ಗುಂಡಿ 2ರಸ್ತೆ ಗುಂಡಿ 4

“ವಾಹನ ಸವಾರರಿಗೆ ತೊಂದರೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಪರಿಹಾರ ಒದಗಿಸಿ ರಸ್ತೆ ಸರಿಪಡಿಸಿಕೊಡಬೇಕು” ಎಂದು ಸ್ಥಳೀಯರು ಮತ್ತು ವಾಹನ ಸವರಾರು ಅಗ್ರಹಿಸಿದರು.

ರಾಷ್ಟ್ರೀಯ ಹೆದ್ದಾರಿ ವಿಭಾಗದ ಎಇಇ ಸುರೇಶ್ ಆರ್ ಅವರನ್ನು ಈ ದಿನ.ಕಾಮ್‌ ಸಂಪರ್ಕಿಸಿದಾಗ ಪ್ರತಿಕ್ರಿಯಿಸಿದ್ದು, “ನಾವು ಒಮ್ಮೆ ಗುಂಡಿಗಳನ್ನು ಮುಚ್ಚಿದ್ದೆವು. ಪ್ರಸ್ತುತ ಹೊಸ ಕೆಲಸ ಆಗುತ್ತಿದೆ. ಆದರೆ ತ್ವರಿತಗತವಾಗಿ ಕೆಲಸ ಆಗುತ್ತಿಲ್ಲ. ಇದು ಹೊಸ ಕಾಮಗಾರಿಯಾಗಿರುವ ಕಾರಣ ಇನ್ನೂ ಪ್ರಗತಿಯಲ್ಲಿದೆ” ಎಂದರು.

ಇದನ್ನೂ ಓದಿದ್ದೀರಾ? ತುಮಕೂರು | ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಕರೆ; ರಸ್ತೆಗಿಳಿದ ರೈತರಿಂದ ಅರೆ ಬೆತ್ತಲೆ ಉರುಳು ಸೇವೆ

ಅಸಿಸ್ಟೆಂಟ್ ಎಂಜಿನಿಯರ್(ಸೆಕ್ಷನ್ ಆಫೀಸರ್ ) ಸದಾನಂದ ಮಾತನಾಡಿ, “ನಾನು ಮತ್ತು ಪವನ್ ಅವರು ಈ ಭಾಗ ನೋಡಿಕೊಳ್ಳುತ್ತಿದ್ದೇವೆ. ಹಾಗಾಗಿ ನಾನು ಸಂಬಂಧಪಟ್ಟ ಸಿಬ್ಬಂದಿಗಳಿಗೆ ಈ ಕುರಿತು ಮಾಹಿತಿ ನೀಡಿ ಸರಿಪಡಿಸಿಕೊಡುತ್ತೇನೆ” ಎಂದು ಭರವಸೆ ನೀಡಿದ್ದಾರೆ.

WhatsApp Image 2025 11 17 at 5.17.05 PM
ರಾಘವೇಂದ್ರ, ಶಿವಮೊಗ್ಗ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...