ಶಿವಮೊಗ್ಗ | ರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ಸಾರ್ವಜನಿಕರಿಗೆ ಬೆದರಿಕೆ; ಮೂವರ ವಿರುದ್ಧ ಎಫ್‌ಐಆರ್ ದಾಖಲು

Date:

ಶಿವಮೊಗ್ಗ ನಗರದಲ್ಲಿ ಮಾರಕಾಸ್ತ್ರ ಹಿಡಿದು ರಸ್ತೆಯುದ್ದಕ್ಕೂ ಬೈಕ್‌ನಲ್ಲಿ ಓಡಾಡಿದ್ದು, ಸಾರ್ವಜನಿಕರಿಗೆ ಭಯ ಹುಟ್ಟಿಸುವಂತೆ ಮಾಡಿ, ತಮ್ಮ ಬೈಕ್ ದಾಟದಂತೆ ಬೆದರಿಕೆ ಹಾಕುತ್ತಿದ್ದ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. 

ಶಿವಮೊಗ್ಗ ನಗರದ ಮಿಳಘಟ್ಟ ಮುಖ್ಯ ರಸ್ತೆಯಿಂದ ಅಣ್ಣಾನಗರದ ಕಡೆ ಹೋಗುವ ಮಾರ್ಗದಲ್ಲಿ ಜನವರಿ 13ರ ಸಂಜೆ ಸುಮಾರು 5:30ರಿಂದ 5:45ರ ಸಮಯದಲ್ಲಿ ಅಶೋಕನಗರ ರೆಹಮಾನ್, ಲಷ್ಕರ್ ಮೊಹಲಾ ವಾಸಿ ಮುಸ್ತಫಾ ಮತ್ತು ಜೆ ಪಿ ನಗರ ವಾಸಿ ಜಾಫರ್ ಬೈಕ್‌ನಲ್ಲಿ ಹೋಗುತ್ತಿದ್ದರು.  

ಬೈಕ್‌ನಲ್ಲಿ ಹೋಗುವಾಗ ಈ ಮೂವರು ಕೈಗಳಲ್ಲಿ ಅಪಾಯಕಾರಿ ಆಯುಧಗಳನ್ನು ಹಿಡಿದುಕೊಂಡು ಸಾರ್ವಜನಿಕರಿಗೆ ಭಯವನ್ನುಂಟು ಮಾಡುತ್ತ, ತಮ್ಮ ಬೈಕನ್ನು ಓವರ್ ಟೇಕ್ ಮಾಡಿಕೊಂಡು ಮುಂದೆ ಹೋಗದಂತೆ ಹಿಂಬದಿ ಬರುವ ವಾಹನ ಸವಾರರಿಗೂ ಬೆದರಿಕೆ ಹಾಕುತ್ತಿರುವುದು ದೊಡ್ಡಪೇಟೆ ಪೊಲೀಸರಿಗೆ ಮಾಹಿತಿ ಬಂದಿದೆ.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಹಿತಿ ತಿಳಿದ ಪೊಲೀಸರು ಅಣ್ಣಾನಗರದ ಬಳಿ ಹೋಗುವಾಗ ನಾಲ್ಕನೇ ಕ್ರಾಸ್ ಬಳಿ ಮಾರಕಾಸ್ತ್ರ ಹಿಡಿದುಕೊಂಡು ಹೋಗುತ್ತಿದ್ದ ಆರೋಪಿಗಳು ಸಮವಸ್ತ್ರದಲ್ಲಿದ್ದ ಪೊಲೀಸರನ್ನು ನೋಡಿ ವೇಗವಾಗಿ ಬೈಕ್ ಚಾಲನೆ ಮಾಡಿಕೊಂಡು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ.  

ಈ ಸುದ್ದಿ ಓದಿದ್ದೀರ ? ಶಿವಮೊಗ್ಗ ನಗರದಲ್ಲಿ ಚಾಕು ಇರಿತ ಪ್ರಕರಣ; ಓರ್ವನ ಬಂಧನದ ಕುರಿತು ಎಸ್‌ಪಿ ಪ್ರತಿಕ್ರಿಯೆ

ಆರೋಪಿಗಳು ಮಿಳಘಟ್ಟ ಮುಖ್ಯ ರಸ್ತೆಯಿಂದಲೂ ಮಾರಕಾಸ್ತ್ರ ಹಿಡಿದು ಜನರಿಗೆ ತೋರಿಸುತ್ತ ಭಯವನ್ನುಂಟುಮಾಡಿದ್ದರು. ಅಲ್ಲದೆ ಹಿಂಬಾಗ ಬರುವ ವಾಹನ ಸವಾರಿಗೆ ಮುಂದೆ ಹೋಗದಂತೆ ತಡೆಯುತ್ತ ತೊಂದರೆ ನೀಡಿದ ಮೂವರ ವಿರುದ್ಧ ದೂರು ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...