ಶಿವಮೊಗ್ಗ | ಇಂಜಿನ್,ಬೋಗಿ ಸಂಪರ್ಕ ಕಡಿತಗೊಂಡು ಚಲಿಸಿದ ರೈಲು : ಭಯಭೀತರಾದ ಪ್ರಯಾಣಿಕರು

Date:

ಶಿವಮೊಗ್ಗದಲ್ಲಿ ಇಂದು ಮೈಸೂರು-ಶಿವಮೊಗ್ಗ ರೈಲಿನಲ್ಲಿ ರೈಲು ಚಲುಸುವವಾಗಲೇ ಇಂಜಿನ್ ಮತ್ತು ಬೋಗಿ ಸಂಪರ್ಕ ಕಳೆದು ಕೊಂಡು, ಆರ್ಧ ರೈಲು ಚಲಿಸಿದ ದೃಶ್ಯ ಲಭ್ಯವಾಗಿದೆ. ಬೋಗಿಗಳನ್ನು ಬಿಟ್ಟು ಇಂಜಿನ್ ದೂರ ಚಲಿಸಿದ ಘಟನೆ ವರದಿಯಾಗಿದೆ.

ಶಿವಮೊಗ್ಗ ನಗರದೊಳಗೆ ಇರುವ ತುಂಗಾ ಸೇತುವೆ ಮೇಲೆ ಘಟನೆ ನಡೆದಿದೆ. ತುಂಗಾ ಸೇತುವೆ ಮೇಲೆ ಸ್ವಲ್ಪ ದೂರ ಇಂಜಿನ್ ಇಲ್ಲದೇ ಬೋಗಿಗಳು ಚಲಿಸಿವೆ. ಘಟನೆ ಗಮನಿಸಿದ ಪ್ರಯಾಣಿಕರಲ್ಲಿ ಆತಂಕ ಹೆಚ್ಚಿದೆ. ತುಂಗಾನದಿಯ ರೈಲ್ವೆ ಹಳಿಗಳ ಮೇಲೆ ಇಂಜಿನ್ ಒಂದೇ ಚಲಿಸಿದೆ. 50 ನಿಮಿಷಗಳ ಕಾಲ ಇಂಜಿನ್ ಬಿಟ್ಟು ಸೇತುವೆಯ ಒಂದು ತುದಿಯಲ್ಲಿ ಬೋಗಿಗಳು ಚಲಿಸಿವೆ. ಇದರಿಂದ ಸ್ವಲ್ಪಕಾಲ ಪ್ರಯಾಣಿಕರು ಭಯಭೀತರಾಗಿದ್ದಾರೆ.

1002017358

ನಂತರ ಸ್ಥಳಕ್ಕೆ ಆಗಮಿಸಿದ ರೈಲ್ವೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಮಸ್ಯೆ ಬಗೆ ಹರಿಸಿದ್ದಾರೆ. ನಂತರ ಪ್ರಯಾಣಿಕರು ನಿಟ್ಟುಸಿರು ಬಿಟ್ಟು ಪ್ರಯಾಣ ಮುಂದುವರೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಳಗುಪ್ಪದಿಂದ ಮೈಸೂರು ಕಡೆಗೆ ಹೊರಟಿದ ರೈಲು ತುಂಗ ನದಿಯ ರೈಲ್ವೆ ಸೇತುವೆ ಬಳಿ ಬಂದಾಗ ಇಂಜಿನ್ ನಿಂದ 8 ನೇ ಬೋಗಿ ಕಳಚಿಕೊಂಡಿತ್ತು.ಶಿವಮೊಗ್ಗ ರೈಲ್ವೆ ನಿಲ್ದಾಣ ಬಿಟ್ಟು ವಿದ್ಯಾನಗರದ ಮಹದೇವಿ ನಿಲ್ದಾಣಕ್ಕೆ ಸಾಗುವ ವೇಳೆ ಈ ಘಟನೆ ನಡೆದಿದೆ.

1002017390

ಇಂದು ಸಂಜೆ 5 ಗಂಟೆಗೆ ಈ ಘಟನೆ ನಡೆದಿದ್ದು 50 ನಿಮಿಷ ಬೋಗಿ ಜೋಡಣೆ ಮಾಡಲು ಸಮಯ ತೆಗೆದುಕೊಂಡಿದೆ. ರೈಲ್ವೆ ಇಂಜಿನಿಯರ್, ಆರ್ ಪಿಎಫ್ ಸೇರಿದಂತೆ ಹಲವು ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ಕಾರ್ಯಚರಣೆಯಲ್ಲಿ ಭಾಗಿಯಾಗಿ ಮುಂದಿನ ಪ್ರಯಾಣವನ್ನ ಅನುವು ಮಾಡಿಕೊಟ್ಟಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ರೈಲ್ವೆ ಇಲಾಖೆ ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...