ಶಿವಮೊಗ್ಗ | ತೀರ್ಥಹಳ್ಳಿ ತಾಲೂಕಿನ ಹಲವು ಅರಣ್ಯ ಅಧಿಕಾರಿಗಳ ವರ್ಗಾವಣೆ

Date:

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಲವು ಅರಣ್ಯ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಕಳೆದ ಮೂರು ವರ್ಷಗಳಿಂದ ಮಂಡಗದ್ದೆ ಮತ್ತು ಮೇಗರವಳ್ಳಿ (ಆಗುಂಬೆ) ವಲಯ ಅರಣ್ಯ ಅಧಿಕಾರಿಗಳಾಗಿ ಅರಣ್ಯ ರಕ್ಷಣೆ , ಅರಣ್ಯದಲ್ಲಿನ ಅಕ್ರಮಗಳ ನಿಯಂತ್ರಣ, ಮಣ್ಣು ಮಾಫಿಯಾ, ಮರಳು ಮಾಫಿಯಾದ ವಿಚಾರಗಳಲ್ಲಿ ಹದ್ದಿನ ಕಣ್ಣಿಟ್ಟು ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಿದ್ದ ಮಂಡಗದ್ದೆ ವಲಯ ಅರಣ್ಯ ಅಧಿಕಾರಿ ಆದರ್ಶ.ಎಂ.ಪಿ. ಅವರನ್ನು ಕೊಪ್ಪ ವಿಭಾಗದ ಚಿಕ್ಕ ಅಗ್ರಹಾರ (ಎನ್ ಆರ್ ಪುರ) ವಲಯ ಅರಣ್ಯ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಮಂಡಗದ್ದೆ ವಲಯ ಅರಣ್ಯ ಅಧಿಕಾರಿಯಾಗಿ ವಿನಯಕುಮಾರ್ ಆರ್ ಬೇಲೂರು ಹಾಸನ ಜಿಲ್ಲೆಯಿಂದ ಮಂಡಗದ್ದೆಗೆ ವರ್ಗಾವಣೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಡಗದ್ದೆಯಲ್ಲಿ ಉತ್ತಮ ಕೆಲಸ ಮಾಡಿ ಜನರಿಂದ ಹೆಸರು ಗಳಿಸಿರುವ ಮೇಗರವಳ್ಳಿ (ಆಗುಂಬೆ) ಮಧುಕರ್ ಎನ್.ವಿ. ರವರನ್ನು ಶೃಂಗೇರಿ ವಲಯ ಅರಣ್ಯ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದ್ದು, ಅವರ ಜಾಗಕ್ಕೆ ಹೇಮಗಿರಿ ಅಂಗಡಿ ಅವರನ್ನು ಮಂಗಳೂರಿನಿಂದ ಮೇಗರವಳ್ಳಿಗೆ ವರ್ಗಾವಣೆ ಮಾಡಲಾಗಿದೆ.

ತೀರ್ಥಹಳ್ಳಿಯ ವಲಯ ಅರಣ್ಯ ಅಧಿಕಾರಿ ಡಾಕ್ಟರ್ ಲೋಕೇಶ್ ಎಸ್. ಎಲ್. ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ತೀರ್ಥಹಳ್ಳಿಗೆ ಸಂಜಯ್ .ಬಿ. ಎಸ್. ನಗರ ವಲಯದಿಂದ ವರ್ಗಾವಣೆ ಮಾಡಲಾಗಿದೆ.

ಇದನ್ನು ಓದಿದ್ದೀರಾ? ತುಮಕೂರು | ಸಿನಿಮೀಯ ರೀತಿ ಕುಖ್ಯಾತ ಆರೋಪಿಯನ್ನು ಬಂಧಿಸಿದ ಹೆಡ್‌ ಕಾನ್ಸ್‌ಟೇಬಲ್; ವ್ಯಾಪಕ‌‌ ಶ್ಲಾಘನೆ

ತೀರ್ಥಹಳ್ಳಿಯಲ್ಲಿ ಈ ಹಿಂದೆ ವಲಯ ಅರಣ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ, ಅಂದಿನ ನ್ಯಾಯಾಧೀಶರಾದ ಸಂದೀಪ್ ಸಾಲಿಯಾನ ಅವರೊಂದಿಗೆ ಸೇರಿಕೊಂಡು ತುಂಗಾ ಕಾಲೇಜು ಆವರಣ, ಪ್ರವಾಸಿ ಮಂದಿರ, ಕುಶಾವತಿ ನೆಹರೂ ಪಾರ್ಕ್, ಎಡೇಹಳ್ಳಿ ಕೆರೆಯ ಮೇಲ್ಭಾಗದ ಅಬ್ದುಲ್ ಕಲಾಂ ಉದ್ಯಾನವನ ಮುಂತಾದ ಹತ್ತಾರು ಕಡೆಯಲ್ಲಿ ಸಾವಿರಾರು ಗಿಡಗಳನ್ನು ನೆಟ್ಟು ಇಂದಿಗೂ ಗಿಡಗಳನ್ನು ಸಂರಕ್ಷಣೆಯಾಗಿ ಮಾದರಿಯಾಗಿದ್ದ ಮಧುಸೂದನ್ .ಎ .ರವರನ್ನು ತೀರ್ಥಹಳ್ಳಿಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...