ಶಿವಮೊಗ್ಗ | ಖಾಸಗಿ ಬಸ್ ಮಾಲೀಕರು ಮತ್ತು ಏಜೆಂಟರ ನಡುವೆ ಗಲಾಟೆ; ಪ್ರಯಾಣಿಕರು ಹೈರಾಣ

Date:

ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಮಾಲೀಕರು ಮತ್ತು ಏಜೆಂಟ್‌ಗಳ ನಡುವೆ ಶುಕ್ರವಾರ ಗಲಾಟೆ ನಡೆದಿದೆ. ನಿಗದಿತ ಸಮಯಕ್ಕೆ ಮುಂಚೆಯೇ ಖಾಸಗಿ ಬಸ್‌ಗಳು ಬಸ್‌ ನಿಲ್ದಾಣಕ್ಕೆ ಬರುತ್ತಿವೆ. ಜೊತೆಗೆ, ಲಗೇಜ್‌ ವಾಹನಗಳೂ ಅತಿಕ್ರಮವಾಗಿ ಬಸ್‌ ನಿಲ್ದಾಣಕ್ಕೆ ಪ್ರವೇಶಿಸುತ್ತಿವೆ. ಇದರಿಂದ ಸಮಸ್ಯೆಯಾಗುತ್ತಿದೆ ಎಂಬ ಕಾರಣಕ್ಕೆ ಜಗಳ ಶುರುವಾಗಿದೆ. ಜಗಳ ವಿಕೋಪಕ್ಕೆ ತಿರುಗಿದ್ದು, ಪ್ರಯಾಣಿಕರು ಹೈರಾಣಾಗಿದ್ದಾರೆ.

ಸುಮಾರು 2 ಗಂಟೆಗಳ ಕಾಲ ಗಲಾಟೆ ನಡೆದಿದ್ದು, ಆ ವೇಳೆಯಲ್ಲಿ ಯಾವುದೇ ಬಸ್‌ಗಳು ನಿಲ್ದಾಣಕ್ಕೆ ಬಾರದಂತೆ ಮತ್ತು ಹೊರಹೋಗದಂತೆ ತಡೆಯಲಾಗಿತ್ತು. ಹೀಗಾಗಿ, ಪ್ರಯಾಣಿಕರು ತಮ್ಮೂರುಗಳಿಗೆ ಹೋಗಲಾಗದೆ, ಮಾಲೀಕರು-ಏಜೆಂಟ್‌ಗಳ ಜಗಳದಿಂದ ಬೇಸತ್ತು ಅಸಹಾಯಕರಾಗಿದ್ದಾರೆ. ಸಮಸ್ಯೆಗಳನ್ನು ಪೊಲೀಸರ ಮುಖಾಂತರ ಬಗೆಹರಿಸಿಕೊಳ್ಳಿ, ಪ್ರಯಾಣಿಕರಿಗೆ ತೊಂದರೆ ಕೊಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಲಾಟೆ ಸಂಬಂಧ ಈದಿನ.ಕಾಮ್ ಜೊತೆ ಮಾತನಾಡಿದ ಖಾಸಗಿ ಬಸ್‌ ಮಾಲೀಕರು, “ಬಸ್ ನಿಲ್ದಾಣದ ಒಳಗೆ ನಿಗದಿತ ಸಮಯಕ್ಕೆ ಮುಂಚೆನೆ ಬಸ್‌ಗಳನ್ನು ತಂದು ನಿಲ್ಲಿಸಲಾಗುತ್ತಿದೆ. ಇದರಿಂದ, ಬಹಳಷ್ಟು ಬಾರಿ ಸಮಸ್ಯೆ ಉಂಟಾಗುತ್ತದೆ. ಸಮಸ್ಯೆ ಬಗೆಹರಿಯುವವರೆಗೂ ಬಸ್‌ಗಳನ್ನು ಆಚೆ ಬಿಡುವುದಿಲ್ಲ, ನಿಲ್ದಾಣ ಒಳಗೆ ಬಸ್‌ಗಳು ಬರುವುದಕ್ಕೂ ಬಿಡುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ಬಗ್ಗೆ ಈದಿನ.ಕಾಮ್ ಪ್ರತಿನಿಧಿ ಟ್ರಾಫಿಕ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸ್‌ ಪೇದೆ ಮುನೇಶಪ್ಪ ಅವರು ಕೂಡಲೇ ಸ್ಥಳಕ್ಕೆ ಬಂದು, ಮಾಲೀಕರು ಮತ್ತು ಏಜೆಂಟರನ್ನು ಸಮಾಧಾನಿಸಲು ಯತ್ನಿಸಿದರು. ಆದರೂ, ಗಲಾಟೆ ಮುಂದುವರೆದಿತ್ತು.

ಬಳಿಕ, ಶಿವಮೊಗ್ಗ ಪಶ್ಚಿಮ ಸಂಚಾರಿ ಪೊಲೀಸ್ ಪಿಎಸ್‌ಐ ತಿರುಮಲೇಶ್ ಅವರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಆ ವೇಳೆ, ಪೊಲೀಸರೊಂದಿಗೆ ಬಸ್‌ ಮಾಲೀಕರು ವಾಗ್ವಾದ ನಡೆಸಿದ್ದಾರೆ. ನಿಗದಿತ ಸಮಯಕ್ಕೆ ಮುಂಚೆ ಬರುವ ಬಸ್‌ಗಳ ಮೇಲೆ ಕ್ರಮ ಜರುಗಿಸಬೇಕು. ಅನಧಿಕೃತವಾಗಿ ಬರುವ ಖಾಸಗಿ ಬಸ್ ಸೇರಿದಂತೆ ಲಗೇಜ್ ವಾಹನಗಳಮೇಲೆ ಪ್ರಕರಣ ದಾಖಲಿಸಬೇಕು ಎಂದು ಒತ್ಥಾಯಿಸಿದ್ದಾರೆ. ಠಾಣೆಗೆ ಬಂದು ದೂರು ನೀಡಿ ಎಂದು ಪಿಎಸ್‌ಐ ತಿಳಿಸಿದ್ದು, ಬಸ್‌ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಗಲಾಟೆ ಬಗ್ಗೆ ಈದಿನ.ಕಾಮ್ ಜೊತೆ ಮಾತನಾಡಿದ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ತಿರುಮಲೇಶ್, “ಪ್ರಕರಣ ಸಂಬಂಧ ಕ್ರಮ ಕೈಗೊಳ್ಳುತ್ತೇವೆ. ಪ್ರಯಾಣಿಕರು ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ಎಚ್ಚರ ವಹಿಸುತ್ತೇವೆ. ಅನಧಿಕೃತ ವಾಹನಗಳು ಬಸ್ ಸ್ಟಾಂಡ್ ಒಳಗೆ ಬಂದರೆ ಕ್ರಮ ಜರುಗಿಸಿ ಫೈನ್ ಹಾಕುತ್ತೇವೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...