ಶಿವಮೊಗ್ಗ | ಗಾಂಧಿ ಪಾರ್ಕ್‌ನಲ್ಲಿ ಅನೈರ್ಮಲ್ಯ; ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯ

Date:

ಶಿವಮೊಗ್ಗ ಮಹಾನಗರ ಪಾಲಿಕೆ ಎದರು ಇರುವ ಗಾಂಧಿ ಪಾರ್ಕ್ ಸ್ವಚ್ಛವಾಗಿಲ್ಲ ಕಸ, ಕಡ್ಡಿ, ಒಣಗಿದ ಎಲೆಗಳು, ಈಜುಕೋಳದ ಮುಂದೆ ಇರುವ ಬಾಗಿಲು ತುಕ್ಕು ಹಿಡಿದಿದ್ದು, ಹಾಗೆ ಪಾರ್ಕ್ ಒಳಗೆ ಇರುವ ದೀಪದ ಕಂಬ ಬೇರೆ ಬೇರೆ ಕಂಬಗಳೂ ಕೂಡ ತುಕ್ಕು ಹಿಡಿದಿದೆ. ಪಾರ್ಕ್ ಒಳಗೆ ಇರುವ ಶೌಚಾಲಯದಲ್ಲಿರುವ ಕೈ ತೊಳೆಯುವ ನೀರಿನ ನಲ್ಲಿಗಳು ಮುರಿದು ಹೋಗಿರುವುದು ಕಂಡುಬಂದಿದೆ.

ಕಸ, ಕಡ್ಡಿ, ಒಣಗಿದ ಎಲೆಗಳು ಇದನ್ನೆಲ್ಲ ತೆಗೆದು ಸ್ವಚ್ಛಗೊಳಿಸುವುದಿಲ್ಲವಾ ತುಂಬಾ ದಿನದಿಂದ ಇದೇ ರೀತಿಯಲ್ಲಿ ಇದೆ. ಪಾರ್ಕ್ ಒಳಗೆ ಬರುವುದಕ್ಕೆ ₹10 ಶುಲ್ಕ ಇದೆ ಎಂದು ಈ ದಿನ.ಕಾಮ್‌ ಪ್ರಶ್ನೆ ಮಾಡಿದ್ದು, “ಇದರಲ್ಲಿ ಕೆಲವಷ್ಟು ನಮ್ಮ ವ್ಯಾಪ್ತಿಯ ಅಡಿಯಲ್ಲಿ, ಮತ್ತಷ್ಟು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುತ್ತದೆ. ಈಗಿನ ಆರ್ ಆರ್ ಎಂಟರ್‌ಪ್ರೈಸಸ್‌ನವರಿಗೆ 6 ತಿಂಗಳಿಗೆ ಟೆಂಡರ್ ಆಗಿದೆ” ಎಂದು ಅಲ್ಲಿಯ ಸಿಬ್ಬಂದಿ ಪ್ರತಿಕ್ರಿಯಿಸಿದ್ದಾರೆ.

“ಪ್ರತಿ ಬಾರಿ 3 ವರ್ಷ ಟೆಂಡರ್ ಕೊಡುತ್ತಿದ್ದು, ಈ ಬಾರಿ 6 ತಿಂಗಳಿಗೆ ಮಾತ್ರ ಟೆಂಡರ್ ಕೊಟ್ಟಿದ್ದಾರೆ. ಹಾಗಾಗಿ ನಮ್ಮ ವ್ಯಾಪ್ತಿಯಲ್ಲಿ ಬರುವುದನ್ನು ನಾವು ಸ್ವಚ್ಛ ಮಾಡುತ್ತೇವೆ” ಎಂದು ಆರ್‌ ಆರ್‌ ಎಂಟರ್‌ಪ್ರೈಸಸ್‌ ಸಿಬ್ಬಂದಿ ಈ ದಿನ.ಕಾಮ್‌ಗೆ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಾಂಧಿ ಪಾರ್ಕ್‌ 1ಗಾಂಧಿ ಪಾರ್ಕ್‌ 2ಗಾಂಧಿ ಪಾರ್ಕ್‌ 3ಗಾಂಧಿ ಪಾರ್ಕ್4

ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರನ್ನು ಈ ದಿನ.ಕಾಮ್‌ ಸಂಪರ್ಕಿಸಿದ್ದು, “ಕಾಮಗಾರಿ ಪ್ರಗತಿಯಲ್ಲಿ ಇದೆ. ಹೀಗಾಗಿ ನಾವು ಇದನ್ನು ಮುಂದಿನ ಶನಿವಾರದ ಒಳಗೆ ಸರಿಪಡಿಸಿಕೊಡುತ್ತೇವೆ” ಎಂದು ಹೇಳಿದರು.

ತ್ವರಿತಗತಿಯ ಕಾಮಗಾರಿ ನಡೆಯುತ್ತಿಲ್ಲ, 15s ಗ್ರಾಂಟ್ಸ್ ಅಡಿಯಲ್ಲಿ ಮತ್ತು ಕಳೆದ 5 ವರ್ಷ ಅವಧಿಯಲ್ಲಿ ಮಹಾನಗರ ಪಾಲಿಕೆಗೆ ಎಷ್ಟೆಷ್ಟು ಅನುದಾನ ಬಿಡುಗಡೆಯಾಗಿದೆ ಎಂದು ಎಸ್‌ಎಫ್‌ಸಿ ಅಡಿಯಲ್ಲಿ ಈ ದಿನ.ಕಾಮ್‌ ಮಾಹಿತಿ ಕೇಳಿದ್ದು, ಪ್ರಶ್ನೆಗೆ ಕೆರಳಿದ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡರು, “ಇಂತಹ ವಿಚಾರ ಕೇಳುವುದಕ್ಕೆ ಕರೆ ಮಾಡಬೇಡಿ, ನಮಗೆ ಸಮಯ ಇಲ್ಲ ಮೀಟಿಂಗ್ ಅಲ್ಲಿ ಇದ್ದೀನಿ ಖುದ್ದಾಗಿ ಕಚೇರಿ ಬಂದು ಮಾಹಿತಿ ಪಡೆಯಿರಿ” ಎಂದರು.

ಈ ಸುದ್ದಿ ಓದಿದ್ದೀರಾ? ಗದಗ | ಜಾಗ, ಮನಿ, ಕರೆಂಟ್, ನೀರು ಕೊಡ್ತೀವಿ ಓಟಾಕಿ ಅಂದ್ರು; ಈಗ ಏನನ್ನೂ ಕೊಡ್ಲಿಲ್ರಿ; ಅಲೆಮಾರಿ ಸಮುದಾಯಗಳ ಅಳಲು

ಮಹಾನಗರ ಪಾಲಿಕೆ ಸದಸ್ಯರೊಬ್ಬರು ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದು, “ಶಿವಮೊಗ್ಗ ಮಹಾನಗರ ಪಾಲಿಕೆಗೆ ಕಳೆದ 5 ವರ್ಷದಲ್ಲಿ ಯಾವುದೇ ರೀತಿಯ ಬಿಡಿಗಾಸು ಅನುದಾನ ಬಂದಿಲ್ಲ. ಇದನ್ನು ತರುವ ಮನಸ್ಸು ಇಚ್ಛಾ ಶಕ್ತಿ ಕೂಡ ಇವರಲ್ಲಿ ಕಾಣಿಸಲಿಲ್ಲ. ಹಾಗೆಯೇ ಶಿವಮೊಗ್ಗ ನಗರದ ಹಿಂದಿನ ಸರ್ಕಾರ, ಜನಪ್ರತಿನಿಧಿಗಳಿಗೆ ನಗರದ ಅಭಿವೃದ್ಧಿಗೆ ಇವರು ಎಷ್ಟು ಕಾಳಜಿ ವಹಿಸಿದ್ದರು ಎಂಬುದು ತಿಳಿಯುತ್ತದೆ” ಎಂದು ಬೇಸರ ವ್ಯಕ್ತಪಡಿಸಿದರು.

WhatsApp Image 2025 11 17 at 5.17.05 PM
ರಾಘವೇಂದ್ರ, ಶಿವಮೊಗ್ಗ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...