ಶಿವಮೊಗ್ಗ | ಜನಪದ ಶ್ರೀ ಪ್ರಶಸ್ತಿ ಪುರಸ್ಕೃತ ಜಿ ಸಿ ಮಂಜಪ್ಪಗೆ ಸಿಗುವುದೇ ರಾಜ್ಯೋತ್ಸವ ಪ್ರಶಸ್ತಿ?

Date:

ಜನಪದ ಶ್ರೀ ಪ್ರಶಸ್ತಿ ಪಡೆದ ಜಿ ಸಿ ಮಂಜಪ್ಪಗೆ, ಈ ಬಾರಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡುತ್ತಾ?
ಯಾರಿವರು ಜಿ ಸಿ ಮಂಜಪ್ಪ? ಅಂದರೆ ಅವರೇ ರಾಜ್ಯದಲ್ಲೊಬ್ಬ ಅಪರೂಪದ ‘ಡೊಳ್ಳು ಕಲಾವಿದ’

ಈ ಹಿಂದೆ ಜನಪದ ಶ್ರೀ ಪ್ರಶಸ್ತಿ ಪುರಸ್ಕೃತ ಕಲಾವಿದರಿಗೆ ರಾಜ್ಯ ಸರ್ಕಾರ ತಾನಾಗಿಯೇ ಗುರುತಿಸಿ ಅದರೊಟ್ಟಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಸತತ ಐದು ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸಲ್ಲಿಸಿದ್ದರೂ ಸರ್ಕಾರ ಮಾತ್ರ ಯಾಕೋ ಕೃಪೆ ತೋರಿದಂತಿಲ್ಲ. ಈಗ ಮತ್ತೆ ಅರ್ಜಿ ಹಾಕಿದ್ದಾರೆ. ಇದು ನನ್ನ ಕೊನೆಯ ಪ್ರಯತ್ನ. ಮತ್ತೆ ಅರ್ಜಿ ಹಾಕುವುದಿಲ್ಲ ಎಂಬುದು ಜಿ ಸಿ ಮಂಜಪ್ಪ ಮಾತು. ಈ ಅತ್ಯದ್ಭುತ ಡೊಳ್ಳಿನ ಕಲಾವಿದನಿಗೆ ಈ ಬಾರಿಯಾದರೂ ರಾಜ್ಯೋತ್ಸವ ಪ್ರಶಸ್ತಿ ನೀಡುತ್ತಾ?

ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ 2024-25ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಉನ್ನತ ಮಟ್ಟದ ಆಯ್ಕೆ ಸಮಿತಿ ಸಭೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕೃಷ್ಣಾದಲ್ಲಿ ಇಂದು ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ 2024-25ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಉನ್ನತ ಮಟ್ಟದ ಆಯ್ಕೆ ಸಮಿತಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ರಾಜ್ಯದ ವಿವಿಧ ಜಿಲ್ಲೆ, ತಾಲೂಕುಗಳಿಂದ ಹಲವಾರು ಕ್ಷೇತ್ರಗಳಲ್ಲಿ ಸಾಧನೆಗೈದವರು ಸಲ್ಲಿಸಿರುವಂತಹ ಅರ್ಜಿಯ ಬಗ್ಗೆ ಪರಿಶೀಲನೆ ನಡೆಯಲಿದೆ.

ಸಿಎಂ ಸಿದ್ಧರಾಮಯ್ಯ ನೇತೃತ್ವದ ಇಂದಿನ ಸಭೆಯಲ್ಲಿ ರಾಜ್ಯದ ಸಾಂಸ್ಕೃತಿಕ ಸೊಬಗಿನ ಡೊಳ್ಳು ಕುಣಿತವನ್ನು ವಿದೇಶಗಳಲ್ಲೂ ಸಾರಿದಂತಹ ಜಿ ಸಿ ಮಂಜಪ್ಪ ಅವರ ಬಗ್ಗೆ ಚರ್ಚೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಅತ್ಯುನ್ನತ ಸೇವೆಯನ್ನು ಡೊಳ್ಳು ಕಲಾ ಪ್ರದರ್ಶನದಲ್ಲಿ ನೀಡಿರುವಂತಹ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಣ್ಣೂರಿನ ಜಿ ಸಿ ಮಂಜಪ್ಪ ಅವರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡುವಂತೆಯೂ ಸಮಿತಿಯವರ ಶಿಫಾರಸು ಪರಿಗಣಿಸಿ, ಒಪ್ಪಿಗೆ ಸೂಚಿಸಲಿದ್ದಾರಾ?

ಕರುನಾಡಿನ ಕೀರ್ತಿಯನ್ನು ವಿದೇಶದಲ್ಲಿ ಮೊಳಗಿಸಿ, ಕನ್ನಡಮ್ಮನ ಸಂಸ್ಕೃತಿಯನ್ನು ಹೊರ ರಾಜ್ಯದವರು, ಪ್ರಪಂಚದ ಜನರೇ ಬೆರಗುಗೊಳಿಸುವಂತೆ ಡೊಳ್ಳಿನ ಮೂಲಕ ಪ್ರದರ್ಶನ ನೀಡಿದ ಅಪರೂಪದ ಕಲಾವಿದ ಅಂದ್ರೆ ಅದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಣ್ಣೂರು ಗ್ರಾಮದ ಜಿ ಸಿ ಮಂಜಪ್ಪ. ಡೊಳ್ಳೆಂದರೇ ಇವರು, ಇವರೆಂದರೇ ಡೊಳ್ಳು ಎನ್ನುವಷ್ಟು ಹೊಂದಿಕೊಂಡು, ಅದರಲ್ಲೇ ಪಳಗಿ, ತನ್ನ ಕಲಾ ಸಿರಿವಂತಿಕೆಯನ್ನು ಮೆರೆದ ಮೇರು ಕಲಾವಿದ ಜಿ ಸಿ ಮಂಜಪ್ಪ.

ಡೊಳ್ಳು ಕಲಾವಿದ

ಸಾಗರ ತಾಲೂಕಿನ ಕಣ್ಣೂರು ಗ್ರಾಮದಲ್ಲಿ 1957ರ ಜೂನ್‌ 04ರಲ್ಲಿ ಜಿ ಸಿ ಮಂಜಪ್ಪ ಜನನ. ತಂದೆ ಘಟ್ಟದ ಚನ್ನಪ್ಪ, ತಾಯಿ ಸೀತಮ್ಮರ ಪುತ್ರರಾಗಿ ಜನಿಸಿದಂತ ಇವರು, ದ್ವಿತೀಯ ಪಿಯುಸಿ ಮುಗಿಸಿ, ತಮ್ಮ ತಂದೆಯ ಜೊತೆಗೂಡಿ ವ್ಯವಸಾಯವನ್ನು ಮೈಗೂಡಿಸಿಕೊಂಡವರು. ಇವರು, ಮೂಲತಃ ದಕ್ಷಿಣ ಕನ್ನಡದವರು. ಚಿಕ್ಕಂದಿನಿಂದಲೂ ಡೊಳ್ಳು ಕುಣಿತ ಕಲೆಯ ಬಗ್ಗೆ ಎಲ್ಲಿಲ್ಲದ ಆಸಕ್ತಿ ಹೊಂದಿದ್ದಂತಹ ಇವರು, ಈ ಕಲೆಗೆ ಆಕರ್ಷಿತನಾಗಿ 1971ರಲ್ಲಿ ಗುರುಗಳಾದ ವಡ್ಡರ ರಂಗಪ್ಪ ಇವರಲ್ಲಿ ತರಬೇತಿ ಪಡೆಯುತ್ತಾರೆ. ಆ ಬಳಿಕ 1974 ರಲ್ಲಿ ತಮ್ಮೂರಿನ 15 ಜನ ಯುವಕರನ್ನು ಕಟ್ಟಿ, ತಾವೇ ಸ್ವತಃ ಡೊಳ್ಳನ್ನು ತಯಾರಿಸಿ ಕೊಟ್ಟು ಹಾಗೂ ಅವರಿಗೆ ತರಬೇತಿ ನೀಡಿ, ಆ ಕಲಾ ತಂಡದ ಮೂಲಕ, ಕಲಾ ಸೇವೆಗೈದ ಕಲಾಸ್ನೇಹ ಜೀವಿ.

1982, 1986 ಮತ್ತು 1996ರಲ್ಲಿ ರಾಜ್ಯಮಟ್ಟದ ಯುವಜನಮೇಳದ ಡೊಳ್ಳಿನ ಸ್ಪರ್ಧೆಯಲ್ಲಿ ಭಾಗಿಯಾದಂತಹ ಈ ತಂಡಕ್ಕೆ 3 ಬಾರಿ ಪ್ರಥಮ ಸ್ಥಾನ ಸಂದಿದೆ. 1986ರಿಂದ ಆಕಾಶವಾಣಿ ಭದ್ರಾವತಿ ಕೇಂದ್ರದಲ್ಲಿ ಡೊಳ್ಳಿನ ಪದದ ಮುಖ್ಯ ಕಲಾವಿದರಾಗಿ ಸೇವೆ ಸಲ್ಲಿಸಿದ್ದಾರೆ.

ಡೊಳ್ಳು ಕಲಾವಿದ ಜೆ ಸಿ ಮಂಜಪ್ಪ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “300ಕ್ಕೂ ಹೆಚ್ಚಿನ ಯುವಕರಿಗೆ ಉಚಿತ ಡೊಳ್ಳಿನ ತರಬೇತಿ ನೀಡಿದ್ದು, 1998ರಿಂದ ಜಿಲ್ಲಾ ಯುವಜನ ಮೇಳ ಹಾಗೂ ತಾಲೂಕು ಯುವಜನ ಮೇಳದಲ್ಲಿ ಡೊಳ್ಳಿನ ಸ್ಪರ್ಧೆಗೆ ತೀರ್ಪುಗಾರನಾಗಿ ಕಾರ್ಯನಿರ್ವಹಿಸಿದ್ದೇನೆ. ಮೂರು ಬಾರಿ ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಮಟ್ಟದ ಜನಪದ ಸಮ್ಮೇಳನದಲ್ಲಿ ಹಾಗೂ ಒಂದು ಬಾರಿ ತಾಲೂಕು ಮಟ್ಟದ ಜನಪದ ಸಮ್ಮೇಳನದಲ್ಲಿ ಕಲಾ ಸೇವೆಗೆ ಸನ್ಮಾನ ಹಾಗೂ ಪ್ರಶಸ್ತಿಗೆ ಭಾಜನನಾಗಿದ್ದೆ” ಎಂದರು ಹೇಳಿದರು.

“ಶಿವಮೊಗ್ಗ ಜಿಲ್ಲೆಯ 6 ತಾಲೂಕಿನ ಸಂಬಂಧಪಟ್ಟ ಇಲಾಖೆಯವರು ಹಾಗೂ 40ಕ್ಕೂ ಹೆಚ್ಚಿನ ಸಂಘ ಸಂಸ್ಥೆಗಳು ಸನ್ಮಾನ ಮಾಡಿ ಕಲಾರತ್ನ ಎಂಬ ಬಿರುದು ಹಾಗೂ ಜನಪದ ಶ್ರೀ ಪ್ರಶಸ್ತಿ ನೀಡಿ ಸನ್ಮಾನಿಸಿ ಪ್ರೋತ್ಸಾಹಿಸಿದ್ದಾರೆ. 2021ರ ಮಾರ್ಚ್‌ 20ರಂದು ಆನಂದಪುರದಲ್ಲಿ ನಡೆದ ಸಾಗರ ತಾಲೂಕು ಮಟ್ಟದ 2ನೇ ಜಾನಪದ ಸಮ್ಮೇಳನದ ಅಧ್ಯಕ್ಷನಾಗಿದ್ದೆ. 2022ರ ಮೇ 8ರಂದು ನಡೆದ ಭದ್ರಾವತಿ ತಾಲೂಕು ಗೋಣಿಬೀಡುವಿನಲ್ಲಿ ನಡೆದಂತಹ ಜಿಲ್ಲಾ ಮಟ್ಟದ ಸಮ್ಮೇಳನದ ಅಧ್ಯಕ್ಷನಾಗಿಯೂ ಕಾರ್ಯನಿರ್ವಹಿಸಿದ್ದೇನೆ. 2019ನೇ ಸಾಲಿನ ವಾರ್ಷಿಕ ಜಾನಪದ ಅಕಾಡೆಮಿ ಪ್ರಶಸ್ತಿಯನ್ನು ಬೆಂಗಳೂರು ಜಾನಪದ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡಲಾಗಿದೆ” ಎಂದರು.

ಡೊಳ್ಳು ಕುಣಿತದ ಪ್ರದರ್ಶನ ಕಂಡು ಬೆರಗಾದ ದೇಶ, ವಿದೇಶಿಗರು

“1987ರಲ್ಲಿ ರಷ್ಯಾದಲ್ಲಿ ನಡೆದ ಭಾರತೋತ್ಸವ ಕಾರ್ಯಕ್ರಮದಲ್ಲಿ 3 ತಿಂಗಳುಗಳ ಕಾಲ 250ಕ್ಕೂ ಹೆಚ್ಚು ಕಾರ್ಯಕ್ರಮ ನೀಡಿದ್ದೇನೆ ಎಂದು ತಿಳಿಸಿದ್ದಾರೆ. ಪ್ರಥಮ ವಿಶ್ವಕನ್ನಡ ಸಮ್ಮೇಳನ, ಕರ್ನಾಟಕೋತ್ಸವ ದೆಹಲಿ ಹಾಗೂ ಭುವನೇಶ್ವರದಲ್ಲಿ 1988ರಲ್ಲಿ ಕಾರ್ಯಕ್ರಮ ನೀಡಿದ್ದು, ಐದು ಬಾರಿ ಅಖಿಲ ಭಾರತ ಜನಪದ ಸಮ್ಮೇಳನ, 2 ಬಾರಿ ರಾಜ್ಯ ಮಟ್ಟದ ಜಾನಪದ ಕಲಾಮೇಳದಲ್ಲಿ ಕಾರ್ಯಕ್ರಮ ನೀಡಿದ್ದೇನೆ” ಎಂದರು.

ಹೊರ ರಾಜ್ಯದಲ್ಲಿ ಡೊಳ್ಳು ಕಟ್ಟಿ ಕುಣಿದ ಕಲಾಜೀವಿ ಜಿ ಸಿ ಮಂಜಪ್ಪ

ದೆಹಲಿಯಲ್ಲಿ 6 ಬಾರಿ, ನಾಗಪುರದಲ್ಲಿ 2 ಬಾರಿ, ಮಧ್ಯಪ್ರದೇಶದಲ್ಲಿ 7 ಬಾರಿ, ಗುಜರಾತಿನಲ್ಲಿ 2 ಬಾರಿ, ಒರಿಸ್ಸಾದಲ್ಲಿ 1 ಬಾರಿ, ಕಲ್ಕತ್ತಾದಲ್ಲಿ 2 ಬಾರಿ, ಉದಯಪುರದಲ್ಲಿ 2 ಬಾರಿ, ಮುಂಬೈನಲ್ಲಿ 1 ಬಾರಿ, ಮದ್ರಾಸ್‌ನಲ್ಲಿ 1 ಬಾರಿ, ಮೈಸೂರು ದಸರಾ ಮೆರವಣಿಗೆಯಲ್ಲಿ 5 ಬಾರಿ, ಹಂಪಿ ಉತ್ಸವದಲ್ಲಿ 3 ಬಾರಿ ಡೊಳ್ಳು ಕುಣಿತದ ಕಾರ್ಯಕ್ರಮ ನೀಡಿದ್ದಾರೆ. 1997ರ ದಸರಾ ಮೆರವಣಿಗೆಯಲ್ಲಿ ಇವರ ಡೊಳ್ಳಿನ ತಂಡಕ್ಕೆ ಪ್ರಥಮ ಸ್ಥಾನ ಬಂದಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗದ ಜತೆಗೆ ಕೈಜೋಡಿಸಿಯೂ ತಮ್ಮ ಡೊಳ್ಳು ಪ್ರದರ್ಶನ ನೀಡಿದ್ದಾರೆ.

ಸಿಎಂ ಸಿದ್ಧರಾಮಯ್ಯ, ಸಚಿವ ಶಿವರಾಜ ತಂಗಡಗಿ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರು, ಸದಸ್ಯರು ಈ ಎಲೆ ಮರೆ ಕಾಯಿಯಂತಿರುವ ಪ್ರತಿಭೆಯನ್ನು ಗುರುತಿಸಲಿ. 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ಖ್ಯಾತ ಡೊಳ್ಳು ಕಲಾವಿದ ಜಿ ಸಿ ಮಂಜಪ್ಪ ಅವರಿಗೆ ಸರ್ಕಾರ ನೀಡಲಿ ಎಂಬುದು ಅಭಿಮಾನಿಗಳ ಆಶಯ.

WhatsApp Image 2025 11 17 at 5.17.05 PM
ರಾಘವೇಂದ್ರ, ಶಿವಮೊಗ್ಗ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...