ಶಿರೂರು ದುರಂತ | ಮತ್ತೆ ಕಾರ್ಯಾಚರಣೆ ಮುಂದುವರಿಸಿದ ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ

Date:

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಜುಲೈ 16ರಂದು ಸಂಭವಿಸಿದ ಭೂ ಕುಸಿತ ಘಟನೆ ನಡೆದು ಸರಿಸುಮಾರು ಒಂದು ತಿಂಗಳಾಗುತ್ತಾ ಬಂದಿದೆ.

ಗಂಗಾವಳಿ ನದಿಯಲ್ಲಿ ಕಾಣೆಯಾದ ಮೂವರ ಶೋಧ ಕಾರ್ಯಕ್ಕೆ ಜಿಲ್ಲಾಡಳಿತ ಹಿಂದೇಟು ಹಾಕಿತ್ತು. ಆದರೆ ಕಾರವಾರದ ಶಾಸಕ ಸತೀಶ್ ಸೈಲ್ ಅವರ ಸೂಚನೆಯಂತೆ ಉಡುಪಿಯ ಮುಳುಗುತಜ್ಞ ಈಶ್ವರ್ ಮಲ್ಪೆಯವರು ಗಂಗಾವಳಿ ನದಿಯಲ್ಲಿ ಮಂಗಳವಾರ ಸಂಜೆ ವೇಳೆಯಲ್ಲಿ ಶೋಧ ಕಾರ್ಯಕ್ಕಿಳಿದಿದ್ದರು. ಈ ವೇಳೆ ಗ್ಯಾಸ್ ಟ್ಯಾಂಕರ್‌ನ ಚಿಕ್ಕ ಭಾಗ ಹಾಗೂ ಕೇರಳ ಮೂಲದ ಭಾರತ್ ಬೆಂಝ್ ಲಾರಿಯ ವೀಲ್ ಜಾಕ್ ಕಾರ್ಯದಲ್ಲಿ ಪತ್ತೆಯಾಗಿತ್ತು.

ಈ ಹಿನ್ನೆಲೆಯಲ್ಲಿ ಬುಧವಾರ ಕೂಡ ಶೋಧ ಕಾರ್ಯಾಚರಣೆಯನ್ನು ಬೆಳಗ್ಗೆ 10 ಗಂಟೆಯಿಂದಲೇ ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ನೌಕಾದಳದ ತಂಡ ಆರಂಭಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇರಳದ ಲಾರಿ ಚಾಲಕ ಅರ್ಜುನ್, ಶಿರೂರಿನ ಜಗನ್ನಾಥ್, ಗಂಗೆಕೊಳ್ಳದ ಲೋಕೇಶ್ ಶವಕ್ಕಾಗಿ ಶೋಧ ನಡೆಸಬೇಕಿದ್ದು, ಇದೀಗ ಗಂಗಾವಳಿ ನದಿಯಲ್ಲಿ ಶೋಧ ಕಾರ್ಯ ಮುಂದುವರಿಸಲಾಗಿದೆ.

ವೀಲ್ ಜಾಕ್

ಕಾರವಾರ ಶಾಸಕ ಸತೀಶ್ ಸೈಲ್ ಸೂಚನೆ ಮೇರೆಗೆ ಇದೀಗ ಮತ್ತೆ ಶೋಧ ಕಾರ್ಯ ಆರಂಭವಾಗಿದ್ದು, ಉಡುಪಿಯ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಗಂಗಾವಳಿ ನದಿಯಲ್ಲಿ ಪರಿಶೀಲಿಸಿದಾಗ ಗ್ಯಾಸ್ ಟ್ಯಾಂಕರ್‌ನ ಸ್ವಲ್ಪ ಭಾಗ ಪತ್ತೆಯಾಗಿದೆ.

ಕೇರಳದ ಚಾಲಕ ಅರ್ಜುನ್ ಎಂಬಾತನಿಗೆ ಸೇರಿದ್ದ ಲಾರಿಯ ಕೆಲವು ಭಾಗಗಳು ಪತ್ತೆಯಾಗಿರುವುದು ಶೋಧ ತಂಡಕ್ಕೆ ಹೊಸ ಭರವಸೆ ಮೂಡಿಸಿದೆ. ತಂಡವು ಗಂಗಾವಳಿ ನದಿಯ ಮಧ್ಯದಲ್ಲಿ ಶೋಧ ಕಾರ್ಯಾಚರಣೆಯನ್ನು ಮುಂದುವರಿಸಿದೆ.

ನಾಪತ್ತೆಯಾದವರ ಪತ್ತೆಗೆ ಒತ್ತಡ ಹೆಚ್ಚಿದ್ದು, ಭರವಸೆಯಂತೆ ಜಿಲ್ಲಾಡಳಿತ ಮತ್ತೆ ಶೋಧ ಕಾರ್ಯ ಆರಂಭಿಸಿದೆ. ಅದರಂತೆ ಎನ್‌ ಡಿ ಆರ್‌ ಎಫ್, ಎಸ್ ಡಿ ಆರ್‌ ಎಫ್ ಜಿಲ್ಲಾಡಳಿತ ಮತ್ತು ಭಾರತೀಯ ನೌಕಾಪಡೆ ಜಂಟಿಯಾಗಿ ಶೋಧ ಕಾರ್ಯದಲ್ಲಿ ಭಾಗಿಯಾಗಿವೆ.

ಲಾರಿ 4

ನೌಕಾಪಡೆಯ ಅಧಿಕಾರಿಗಳು ರಾಡಾರ್ ಮತ್ತು ಇತರ ಅತ್ಯಾಧುನಿಕ ಉಪಕರಣಗಳನ್ನು ಬಳಸಿಕೊಂಡು ಶೋಧ ಕಾರ್ಯಾಚರಣೆಯನ್ನು ನಡೆಸಿದರೆ, ಡೈವರ್‌ಗಳು ನಾಪತ್ತೆಯಾದ ಮೂವರಿಗಾಗಿ ನೀರೊಳಗೆ ಮುಳುಗಿ ಶೋಧ ನಡೆಸುತ್ತಿದ್ದಾರೆ.

ಜಿಲ್ಲಾಡಳಿತದ ಪ್ರಕಾರ ಭೂಕುಸಿತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ, ಆದರೆ ಇದುವರೆಗೆ 8 ಶವಗಳು ಮಾತ್ರ ಪತ್ತೆಯಾಗಿವೆ. ಕೇರಳ ಸರ್ಕಾರ ಮತ್ತು ಮಾಧ್ಯಮಗಳು ಶೋಧ ಕಾರ್ಯಾಚರಣೆಗೆ ಮುಂದಾಗುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದವು. ಶಿರೂರು ಮರು ಕಾರ್ಯಾಚರಣೆಯನ್ನು ಕೇರಳದ ಬಹುತೇಕ ಮುಖ್ಯ ಮಾಧ್ಯಮಗಳು ಸ್ಥಳದಲ್ಲೇ ನಿಂತು ವರದಿ ಮಾಡುತ್ತಿದೆ.

malpe team

ನದಿಯಲ್ಲಿ ಮತ್ತೆ ಲಾರಿ ಡೀಸೆಲ್ ಸೋರಿಕೆಯ ಸುಳಿವು

ಇನ್ನು ಶೋಧ ಕಾರ್ಯಾಚರಣೆ ವೇಳೆ ಈಶ್ವರ್ ಮಲ್ಪೆ ತಂಡವು ನದಿಯಲ್ಲಿ ಮತ್ತೆ ಲಾರಿ ಡೀಸೆಲ್ ಸೋರಿಕೆಯ ಸುಳಿವು ಪತ್ತೆಯಾಗಿರುವುದಾಗಿ ಮಾಹಿತಿ ನೀಡಿದೆ.

ಈ ಬಗ್ಗೆ ಮಾತನಾಡಿರುವ ಈಶ್ವರ್ ಮಲ್ಪೆ, “ಕಾರ್ಯಾಚರಣೆ ಆರಂಭ ಮಾಡಿದ್ದೇವೆ. ಲಾರಿ ಇಂತಹದ್ದೇ ಸ್ಥಳದಲ್ಲಿ ಇದೆ ಎಂಬುವುದು ಖಚಿತ ಆಗಿದೆ. ಆದರೆ ಆ ಲಾರಿಯ ಮೇಲೆ ದೊಡ್ಡ ಪ್ರಮಾಣದಲ್ಲಿ ಮಣ್ಣು ಬಿದ್ದಿದೆ. ಮಣ್ಣನ್ನು ತೆರವು ಮಾಡುವ ಕಾರ್ಯದ ಬಳಿಕ ಮೃತ ದೇಹಗಳು ಸಿಗುವ ಸಾಧ್ಯತೆಯಿದೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...