ಶಿರೂರು ಗುಡ್ಡ ಕುಸಿತ ದುರಂತ | ಒಂದು ಟ್ರಕ್ ನೀರಿನಲ್ಲಿ ಮುಳುಗಿರುವುದು ಖಚಿತವಾಗಿದೆ; ಸಚಿವ ಕೃಷ್ಣಬೈರೇಗೌಡ

Date:

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜುಲೈ 16ರಂದು ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿನ ಮಣ್ಣು ತೆರವು ಮತ್ತು ಮೊಬೈಲ್ ಸ್ವಿಚ್ ಆನ್ ಆಗಿರುವ ಲಾರಿ ಚಾಲಕ ಅರ್ಜುನ ಸೇರಿದಂತೆ ಇತರರಿಗಾಗಿ ಶೋಧ ಕಾರ್ಯಾಚರಣೆಯನ್ನು 9ನೇ ದಿನವೂ ಮುಂದುವರಿಸಲಾಗಿದೆ.

ಭೂಕುಸಿತ ಕಾರ್ಯಾಚರಣೆ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವ ಕೃಷ್ಣಬೈರೇಗೌಡ, “ಒಂದು ಟ್ರಕ್ ನೀರಿನಲ್ಲಿ ಮುಳುಗಿದೆ ಎಂಬುದು ಖಚಿತವಾಗಿದೆ” ಎಂಬುದನ್ನು ದೃಢೀಕರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, “ಒಂದು ಟ್ರಕ್ ನೀರಿನಲ್ಲಿ ಮುಳುಗಿದೆ ಎಂಬುದು ಖಚಿತವಾಗಿದ್ದು, ನೌಕಾಪಡೆಯ ಡೀಪ್ ಡೈವರ್‌ಗಳು ಶೀಘ್ರದಲ್ಲೇ ಲಂಗರು ಹಾಕಲು ಪ್ರಯತ್ನಿಸುತ್ತಾರೆ. ಟ್ರಕ್‌ ಅನ್ನು ನದಿಯಿಂದ ಮೇಲೆತ್ತಲು ಲಾಂಗ್ ಆರ್ಮ್ ಬೂಮರ್ ಅಗೆಯುವ ಯಂತ್ರವನ್ನು ಬಳಸಲಾಗುವುದು” ಎಂದು ತಿಳಿಸಿದ್ದಾರೆ.

WhatsApp Image 2024 07 24 at 4.10.31 PM
ಭಾರತೀಯ ವಾಯುಸೇನೆಯು ಲೋಹದ ಸಾಧನ ಇರುವ ಬಗ್ಗೆ ಬಿಡುಗಡೆಗೊಳಿಸಿರುವ ಚಿತ್ರ

ಇದನ್ನು ಓದಿದ್ದೀರಾ? ಅಂಕೋಲಾ ದುರಂತ | ಕಾರ್ಯಾಚರಣೆಗಾಗಿ ಶಿರೂರು ತಲುಪಿದ ಬೂಮ್ ಪೊಕ್ಲೇನ್ ಯಂತ್ರ

“ಸುಧಾರಿತ ಡ್ರೋನ್ ಆಧಾರಿತ ಇಂಟೆಲಿಜೆಂಟ್ ಅಂಡರ್‌ಗ್ರೌಂಡ್ ಬರಿಡ್ ಆಬ್ಜೆಕ್ಟ್ ಡಿಟೆಕ್ಷನ್ ಸಿಸ್ಟಮ್ ಅನ್ನು ಸಹ ಹುಡುಕಾಟಕ್ಕಾಗಿ ನಿಯೋಜಿಸಲಾಗಿದೆ. ನೀರಿನಲ್ಲಿ ನಾಪತ್ತೆಯಾದ ಮೃತದೇಹಗಳಿಗಾಗಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಮೂಲಕ ಹುಡುಕಾಟ ನಡೆಸುತ್ತಿದೆ” ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದಾರೆ.

ಬೂಮ್ ಪೊಕ್ಲೇನ್ ಯಂತ್ರ

ಶಿರೂರು ಭೂಕುಸಿತದಲ್ಲಿ ಸಿಲುಕಿರುವವರ ಹುಡುಕಾಟಕ್ಕೆ ಬೂಮ್ ಎಕ್ಸ್‌ಕಾವೇಟರ್ ಅಥವಾ ಬೂಮ್ ಪೊಕ್ಲೇನ್ ಯಂತ್ರವನ್ನು ಬೆಳಗಾವಿಯಿಂದ ತರಿಸಲಾಗಿದ್ದು, ಈಗಾಗಲೇ ಕಾರ್ಯಾಚರಣೆ ಆರಂಭಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...