ಉಡುಪಿ | ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣ ಶಿಕ್ಷಕರನ್ನು ವೃತ್ತಿಯಿಂದ ವಜಾಗೊಳಿಸಲು ಎಸ್ ಡಿ ಪಿ ಐ ಆಗ್ರಹ

Date:

ಉಡುಪಿ ಜಿಲ್ಲೆಯ ಶಿರೂರಿನ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿಯ ಮೇಲೆ ಶಿಕ್ಷಕರೊಬ್ಬರು ಅಮಾನುಷವಾಗಿ ಹಲ್ಲೆ ನಡೆಸಿರುವ ಹಳೆಯ ಘಟನೆಯೊಂದು ವಿಡಿಯೋ ವೈರಲ್ ಆಗುವ ಮೂಲಕ ಇಂದು ಬೆಳಕಿಗೆ ಬಂದಿದೆ.

ಈ ಘಟನೆ ಸುಮಾರು 7 ತಿಂಗಳ ಹಿಂದೆ ನಡೆದಿದ್ದು ಮಕ್ಕಳು ತರಗತಿಯಲ್ಲಿ ನಡೆಸುವ ಸಣ್ಣ ಪುಟ್ಟ ಚೇಷ್ಟೆಯನ್ನೇ ನೆಪವಾಗಿ ಇಟ್ಟುಕೊಂಡು ವಿನಾಯಕ ಕಾರ್ವಿ ಎಂಬ ಶಿಕ್ಷಕ ವಿದ್ಯಾರ್ಥಿಯ ಮೇಲೆ ಅತ್ಯಂತ ಅಮಾನುಷವಾಗಿ ಹಲ್ಲೆಯನ್ನು ನಡೆಸಿದ್ದಾರೆ. ಮಕ್ಕಳಿಗೆ ಮಾನವೀಯತೆಯ, ನೈತಿಕತೆಯ ಮೌಲ್ಯಗಳನ್ನು ಕಲಿಸಿ ಕೊಡಬೇಕಾದ ಶಿಕ್ಷಕರೇ ವಿದ್ಯಾರ್ಥಿ ಮೇಲೆ ಈ ರೀತಿಯ ದೌರ್ಜನ್ಯವೆಸಗಿರುವುದು ಖಂಡನೀಯ. ಮಾನವೀಯತೆ ಹಾಗೂ ಕರುಣೆ ಇಲ್ಲದ ಇಂತವರು ಶಿಕ್ಷಕ ವೃತ್ತಿಯಲ್ಲಿ ಇರಲು ಅನರ್ಹರು ಆದ್ದರಿಂದ ಆಡಳಿತ ಮಂಡಳಿ ಇವರನ್ನು ಕೂಡಲೇ ಕೆಲಸದಿಂದ ವಜಾಗೊಳಿಸಬೇಕು.

ಇದಲ್ಲದೆ ಈ ಶಿಕ್ಷಕನ ವಿರುದ್ಧ ಇದೇ ರೀತಿಯ ಹಲವು ಆರೋಪಗಳಿದ್ದು ಧರ್ಮದ ಆಧಾರದಲ್ಲಿ ಇವರು ವಿಧಾರ್ಥಿಗಳ ನಡುವೆ ತಾರತಮ್ಯ ಎಸಗುತ್ತಾರೆ ಎಂಬ ಆರೋಪವು ಕೇಳಿ ಬಂದಿದೆ. ಆದ್ದರಿಂದ ಪೊಲೀಸ್ ಇಲಾಖೆ ಇವರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಎಸ್ ಡಿ ಪಿ ಐ ಉಡುಪಿ ಜಿಲ್ಲಾಧ್ಯಕ್ಷರಾದ ಆಸಿಫ್ ಕೋಟೇಶ್ವರ ರವರು ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...