ಶಿರೂರು ಗುಡ್ಡ ಕುಸಿತ; ಇನ್ನೂ ಪತ್ತೆಯಾಗಿಲ್ಲ ಇಬ್ಬರ ಶವ – ಮರಣ ಪತ್ರವನ್ನೂ ನೀಡದ ಆಡಳಿತ

Date:

ಕಳೆದ ಜುಲೈನಲ್ಲಿ, ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರಿನಲ್ಲಿ ಸಂಭವಿಸಿದ್ದ ಭೀಕರ ಗುಡ್ಡಕುಸಿತ ದುರ್ಘಟನೆಯು ದೇಶದ ಗಮನ ಸೆಳೆದಿತ್ತು. ಗುಡ್ಡ ಕುಸಿತದಲ್ಲಿ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಕೇರಳದ ಲಾರಿ ಚಾಲಕ ನದಿಗೆ ಬಿದ್ದಿದ್ದರಿಂದ ಕೇರಳದ ಬಹುಸಂಖ್ಯೆಯ ಮಾಧ್ಯಮಗಳು ಶಿರೂರಿನಲ್ಲಿ ಬೀಡುಬಿಟ್ಟು, ವರದಿ ಮಾಡಿದ್ದವು. ಆ ದುರ್ಘಟನೆಯಲ್ಲಿ ಕಾಣೆಯಾದವರಲ್ಲಿ ಇನ್ನೂ ಇಬ್ಬರ ಮೃತದೇಹಗಳು ಪತ್ತೆಯಾಗಿಲ್ಲ. ಆದರೆ, ಕಾಣೆಯಾದವರ ಪತ್ತೆ ಕಾರ್ಯಾಚರಣೆ ಈಗಾಗಲೇ ಸ್ಥಗಿತಗೊಂಡಿದ್ದು, ತಮ್ಮ ಸ್ವಂತದವರನ್ನು ಕಳೆದುಕೊಂಡ ಕುಟುಂಬಸ್ಥರು ಕಂಗಾಲಾಗಿದ್ದಾರೆ.

ನಿರಂತರ ಕಾರ್ಯಾಚಣೆಯಿಂದಾಗಿ 9 ಮಂದಿಯ ಮೃತದೇಹವನ್ನು ಪತ್ತೆ ಮಾಡಲಾಗಿದೆ. ಆದರೆ, ಶಿರೂರಿನ ಜಗನ್ನಾಥ್, ಗಂಗೆಕೊಳ್ಳದ ಲೋಕೇಶ್ ಎಂಬವರ ಮೃತದೇಹ ಪತ್ತೆಯಾಗಿಲ್ಲ. ಆದರೂ, ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ. ಅವರು ಮೃತಪಟ್ಟಿದ್ದಾರೆಂದು ಮರಣ ಪ್ರಮಾಣ ಪತ್ರವನ್ನಾದರೂ ಕೊಡಿ ಎಂದು ಆಡಳಿತದಲ್ಲಿ ಕುಟುಂಬಸ್ಥರು ಮನವಿ ಮಾಡಿದ್ದಾರೆ. ಆದರೆ, ಅಧಿಕಾರಿಗಳು ಆ ಇಬ್ಬರು ಮೃತಪಟ್ಟಿದ್ದಾರೆಂದು ಮರಣ ಪ್ರಮಾಣ ಪತ್ರವನ್ನೂ ಕೊಡುತ್ತಿಲ್ಲ. ಹೀಗಾಗಿ ಮರಣ ಪತ್ರ ಕೊಡಿ, ಇಲ್ಲವೇ ಕಾರ್ಯಾಚರಣೆ ಮುಂದುವರೆಸಿ ಎಂದು ಕಾಣೆಯಾದವರ ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ.

ಈ ನಡುವೆ, ಶಿರೂರು ಗುಡ್ಡ ಅಗೆದು ರಸ್ತೆ ನಿರ್ಮಾಣ ಮಾಡಿದ್ದ ಐಆರ್‌ಬಿ ಕಂಪನಿಯು ಅವೈಜ್ಞಾನಿಕವಾಗಿ ಗುಡ್ಡ ಅಗೆದಿದ್ದರಿಂಂದಲೇ ಗುಡ್ಡ ಕುಸಿತ ಸಂಭವಿಸಿದೆ ಎಂದು ಕಂಪನಿಯ ವಿರುದ್ಧ ದೂರು ದಾಖಲಿಸಲಾಗಿದೆ. ಆದರೆ, ಕಂಪನಿಯೊಂದಿಗೆ ಎಸ್​ಪಿ ಎಂ ನಾರಾಯಣ್ ಹೊಂದಾಣಿಕೆ ಮಾಡಿಕೊಂಡಿದ್ದು, ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂಬ ಆರೋಪಗಳಿವೆ. ಎಸ್​​ಪಿ ವಿರುದ್ಧವೂ ಪ್ರಕರಣ ದಾಖಲಿಸಬೇಕು ಎಂಬ ಒತ್ತಾಯಗಳೂ ಕೇಳಿಬಂದಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...