ಶಿರೂರು ದುರಂತ | ಕಾಣೆಯಾದವರ ಪತ್ತೆ ಕಾರ್ಯಕ್ಕೆ ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ

Date:

ಯಾರೂ ಕೂಡ ಅರಗಿಸಿಕೊಳ್ಳಲಾಗದಂತಹ ಗುಡ್ಡ ಕುಸಿತ ಭೀಕರ ದುರಂತ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಶಿರೂರು ರಾಷ್ಟ್ರೀಯ ಹೆದ್ದಾರಿ ನಲ್ಲಿ ಕಳೆದ ಜುಲೈ 16ರಂದು ನಡೆದಿದೆ.

ಘಟನೆ ನಡೆದು 11 ದಿವಸ ಕಳೆದಿದ್ದು, ಕಾರ್ಯಾಚರಣೆಯು ಯಾವುದೇ ನಿರೀಕ್ಷಿತ ಪ್ರಮಾಣದ ಬೆಳವಣಿಗೆ ನಡೆದಿಲ್ಲ. ಇದುವರೆಗೆ 8 ಜನರ ಮೃತದೇಹ ಪತ್ತೆಯಾಗಿದ್ದು, ಕೇರಳ ಮೂಲದ ಲಾರಿ ಚಾಲಕ ಅರ್ಜುನ್ ಮತ್ತು ಇತರ ಇಬ್ಬರು ವ್ಯಕ್ತಿಗಳು ಇನ್ನೂ ಪತ್ತೆಯಾಗಿಲ್ಲ.

ದುರಂತ ಸಂಭವಿಸಿದ ಸ್ಥಳದಲ್ಲಿ ಪೊಲೀಸ್ ಇಲಾಖೆ, ಸ್ಥಳೀಯರು, ಅಗ್ನಿಶಾಮಕದಳ, ರಕ್ಷಣಾ ತಂಡಗಳು, ಎನ್ ಡಿ ಆರ್ ಎಫ್, ಎಸ್‌ ಡಿ ಆರ್ ಎಫ್ ಪಡೆ ನಂತರ ಸೇನೆಯನ್ನೂ ಕರೆಸಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ನಿರೀಕ್ಷಿತ ಪ್ರಮಾಣದಲ್ಲಿ ಕಾರ್ಯಾಚರಣೆ ಫಲ ಕಾಣದ ಹಿನ್ನೆಲೆಯಲ್ಲಿ ಜನರು ನಿರಾಶೆಗೆ ಒಳಗಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ ಲಾರಿ ಇದೆ ಎಂದು ಶಂಕಿಸಲಾದ ಸ್ಥಳದಲ್ಲಿ ಲಾರಿ ಇರುವಿಕೆಯನ್ನು ಖಾತ್ರಿ ಪಡಿಸಲು ಮತ್ತು ಲಾರಿ ಒಳಗಡೆ ಇರಬಹುದು ಎಂದು ಶಂಕೆ ಇರುವ ಕೇರಳದ ಚಾಲಕ ಅರ್ಜುನ್ ಅವರನ್ನು ಹೊರತೆಗೆಯಲು ಮುಳುಗು ತಜ್ಞ ಹಾಗೂ ಸಾಮಾಜಿಕ ಕಾರ್ಯಕರ್ತ ಈಶ್ವರ್ ಮಲ್ಪೆಯವರಿಗೆ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳಿಂದ ಕರೆ ಹೋಗಿದೆ. ಈ ಸುದ್ದಿಯನ್ನು ಖುದ್ದು ಈಶ್ವರ್ ಮಲ್ಪೆ ತಂಡ ಈ ದಿನ.ಕಾಮ್ಗೆ ಖಾತ್ರಿ ಪಡಿಸಿದೆ.

6134138473754508416

ಈಶ್ವರ್ ಮಲ್ಪೆ ಮತ್ತು ತಂಡ ಮಧ್ಯರಾತ್ರಿ ಮಲ್ಪೆಯಿಂದ ಹೊರಟು, ಶನಿವಾರ ಬೆಳಗ್ಗೆ 7.30ಕ್ಕೆ ಶಿರೂರಿಗೆ ತಲುಪಿ ಕಾರ್ಯಾಚರಣೆ ನಡೆಸಲಿದೆ ಎಂದು ತಿಳಿದುಬಂದಿದೆ.

ಈ ಕಾರ್ಯಾಚರಣೆಯು ನಾವೆಣಿಸಿದಷ್ಟು ಸುಲಭವಿಲ್ಲ. ಜೀವದ ಹಂಗನ್ನು ತೊರೆದು ನೀರಿನಾಳದಲ್ಲಿ ಹುಡುಕಾಟ ನಡೆಸಬೇಕಾಗಿದೆ. ಮಡಿಕೇರಿಯ ಕುಶಾಲನಗರದ ಕಾವೇರಿ ನದಿಯಲ್ಲಿ ಕಳೆದ ಐದು ದಿನಗಳಿಂದ ಹುಡುಕಾಟ ನಡೆಸುತ್ತಿದ್ದ ಮೃತದೇಹವನ್ನು ಪತ್ತೆಹಚ್ಚಿ ಸಂಬಂಧಪಟ್ಟವರಿಗೆ ಹಸ್ತಾಂತರ ಮಾಡಿ ಈಗ ಶಿರೂರಿಗೆ ಬರುತ್ತಿದ್ದೇವೆ ಎಂದು ಈಶ್ವರ್ ಮಲ್ಪೆ ತಂಡ ಹೇಳಿಕೊಂಡಿದೆ.

ಈ ದಿನ.ಕಾಮ್ ಜೊತೆ ಮಾತನಾಡಿದ ಈಶ್ವರ ಮಲ್ಪೆ ತಂಡದ ರಕ್ಷಿತ್, “ಸದ್ಯ ನಮ್ಮ ತಂಡದಲ್ಲಿ ಎಂಟು ಮಂದಿ ಇದ್ದೇವೆ. ಈಶ್ವರ್ ಮಲ್ಪೆಯವರ ನೇತೃತ್ವದಲ್ಲಿ ನಮ್ಮ ತಂಡ ಹಲವೆಡೆ ಕಾರ್ಯಾಚರಣೆ ನಡೆಸಿದೆ. ಶಿರೂರಿಗೆ ಬರುವಂತೆ ನಮಗೂ ಕರೆ ಬಂದಿದೆ. ಬೆಳಗ್ಗೆ 7.30ರ ಸುಮಾರಿಗೆ ಘಟನಾ ಸ್ಥಳಕ್ಕೆ ತೆರಳಿ, ಅಲ್ಲಿದ್ದವರಿಂದ ಎಲ್ಲ ಮಾಹಿತಿಗಳನ್ನು ಪಡೆದ ನಂತರ ನಮ್ಮ ಕಾರ್ಯಾಚರಣೆಯು ನಡೆಯಲಿದೆ. ಆದಷ್ಟು ಬೇಗನೆ ಕಾರ್ಯಾಚರಣೆ ಯಶಸ್ವಿಯಾಗಲು ಜನರ ಪ್ರಾರ್ಥನೆ ಇರಲಿ” ಎಂದು ಹೇಳಿದರು.

Irshad Venoor
Website |  + posts

ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಇರ್ಷಾದ್ ವೇಣೂರು
ಇರ್ಷಾದ್ ವೇಣೂರುhttps://eedina.com
ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...