ಉಡುಪಿ | ಶಿವಾಜಿಯ ಜೀವನ ಚರಿತ್ರೆ, ಆದರ್ಶ ತತ್ವಗಳು ಮಾದರಿಯಾಗಲಿ – ಶಾಸಕ ಯಶ್ಪಾಲ್ ಸುವರ್ಣ

Date:

ಛತ್ರಪತಿ ಶಿವಾಜಿಯವರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದ ಆದರ್ಶ ತತ್ವಗಳು ಎಲ್ಲರಿಗೂ ಮಾದರಿಯಾಗಬೇಕು ಹಾಗೂ ಅವರ ಜೀವನಚರಿತ್ರೆ, ಆಚಾರ ವಿಚಾರಗಳನ್ನು ಪ್ರತಿಯೊಬ್ಬರೂ ಅನುಸರಿಸಬೇಕು ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು.

ಅವರು ಇಂದು ಮಲ್ಪೆಯ ಸರಕಾರಿ ಪದವಿ ಪೂರ್ವ ಕಾಲೇಜಿನ ಸಭಾಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಛತ್ರಪತಿ ಶಿವಾಜಿ ಜಯಂತಿ ಆಚರಣೆ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು.

ಶಿವಾಜಿಯ ಜೀವನ ಚರಿತ್ರೆಯನ್ನು ಅವಲೋಕಿಸಿ ಇತಿಹಾಸಕ್ಕೆ ನೀಡಿದ ಅವರ ಕೊಡುಗೆಗಳನ್ನು, ವ್ಯಕ್ತಿತ್ವ ಗುಣಗಳನ್ನು ಅರಿತುಕೊಳ್ಳಬೇಕು. ದೇಶದಲ್ಲೇ ಉತ್ತಮ ಆಡಳಿತ ನೀಡಿದ ಹಿಂದೂ ಮಹಾಕ್ರಾಂತಿಕಾರಿ ಶಿವಾಜಿ ಜಯಂತಿಗೆ ಅರ್ಥಪೂರ್ಣ ಮಹತ್ವ ದೊರೆಯಬೇಕು ಎಂದ ಅವರು, ಶೀಘ್ರದಲ್ಲಿಯೇ ಜಿಲ್ಲೆಯಲ್ಲಿ ಶಿವಾಜಿಯವರ ಪ್ರತಿಮೆಯನ್ನು ನಿರ್ಮಾಣ ಮಾಡಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಪರ ಜಿಲ್ಲಾಧಿಕಾರಿ ನಾಗರಾಜ್ ವಿ ನಾಯಕ್ ಮಾತನಾಡಿ, ಅಂದಿನ ಕಾಲಘಟ್ಟದಲ್ಲಿ ದೇಶ ಕಟ್ಟುವಲ್ಲಿ ಶ್ರದ್ಧೆಯಿಂದ ಹೋರಾಡಿದ ಧೀಮಂತ ನಾಯಕ ಹಾಗೂ ಶಿವಾಜಿಯ ಜಾಣ್ಮೆಯು ತನ್ನ ಆಡಳಿತಕ್ಕೆ ಪ್ರಮುಖವಾಗಿತ್ತು. ಜೀವನಕ್ಕೆ ಉತ್ತಮ ದಾರಿಗಳನ್ನು ಹುಡುಕುವ ಮುಂಚೆ ಸಂಕೋಚವನ್ನು ಬಿಡಬೇಕು ಹಾಗೂ ತಂದೆ, ತಾಯಿ ಮತ್ತು ಗುರುಗಳು ಹಾಕಿಕೊಟ್ಟ ದಾರಿಯಲ್ಲಿ ನಡೆಯಬೇಕು ಎಂದರು.

ಜಿಲ್ಲೆಯ ಲೇಖಕ ಮತ್ತು ಕಥೆಗಾರರಾದ ಮಂಜುನಾಥ ಹಿಲಿಯಾಣ ಉಪನ್ಯಾಸ ನೀಡಿ ಮಾತನಾಡಿ, ಶಿವಾಜಿಯ ಶ್ರದ್ಧೆ ಮತ್ತು ಧೈರ್ಯ ಎಲ್ಲರಿಗೂ ಪ್ರೇರಣೆಯಾಗಬೇಕು ಹಾಗೂ ಅವರ ಆದರ್ಶಗಳನ್ನು, ಜೀವನದ ಮೌಲ್ಯಗಳನ್ನು ಇಂದಿನ ಪೀಳಿಗೆಯ ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು. ಇತಿಹಾಸಕ್ಕೆ ಶಿವಾಜಿ ನೀಡಿದ ಕೊಡುಗೆಗಳನ್ನು ಮನನ ಮಾಡಿಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ಸಮುದಾಯದ ವತಿಯಿಂದ ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆಗೈದ ಕೇಶವ್ ರಾವ್ ಬಡಾನಿಡಿಯೂರು ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ಸಮೃದ್ಧಿ ಆರ್ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಕರ್ನಾಟಕ ಕ್ಷತ್ರೀಯ ಮರಾಠ ಪರಿಷತ್ತಿನ ಜಿಲ್ಲಾಧ್ಯಕ್ಷ ಪ್ರಕಾಶ್ ರಾವ್, ಛತ್ರಪತಿ ಶಿವಾಜಿ ವಿವಿದ್ದೋದೇಶ ಸಹಕಾರ ಸಂಘದ ಅಧ್ಯಕ್ಷ ದಿನೇಶ್ ನಾಯ್ಕ್, ಕಾಲೇಜಿನ ಪ್ರಾಂಶುಪಾಲೆ ಜಯಶ್ರೀ, ಮರಾಠ ಪರಿಷತ್ತಿನ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ತೇಜಸ್ ಬಂಗೇರ ನಿರೂಪಿಸಿ, ಕಾಲೇಜಿನ ಹಿರಿಯ ಶಿಕ್ಷಕ ಸತೀಶ್ ಭಟ್ ವಂದಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...